ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಜಗನ್‌ಗೆ ದೊಡ್ಡ ಸೋಲು: ಪ್ರಶಾಂತ್ ಕಿಶೋರ್

Date:

ಆಂಧ್ರ ಪ್ರದೇಶದ ವೈ ಎಸ್‌ ಜಗನ್‌ ಮೋಹನ್‌ ನೇತೃತ್ವದ ವೈಎಸ್‌ಆರ್‌ಸಿ ಪಕ್ಷಕ್ಕೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಸೋಲು ಉಂಟಾಗಲಿದೆ ಎಂದು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಭವಿಷ್ಯ ನುಡಿದಿದ್ದಾರೆ.

2019ರ ಚುನಾವಣೆಯಲ್ಲಿ ಭರ್ಜರಿ ವಿಜಯಗಳಿಸಲು ಪ್ರಶಾಂತ್ ಕಿಶೋರ್ ತಂಡ ಪ್ರಮುಖ ಪಾತ್ರ ವಹಿಸಿತ್ತು.

ಹೈದರಾಬಾದ್‌ನಲ್ಲಿ ನಡೆದ ಮಾಧ್ಯಮವೊಂದರ ಸಂವಾದದಲ್ಲಿ ಭಾರತದ ಪೂರ್ವ ಚುನಾವಣಾ ಚಿತ್ರಣಗಳ ಬಗ್ಗೆ ಮಾತನಾಡಿದರು. “ಜಗನ್‌ನನ್ನು ಸೋಲಿಸಲು ತುಂಬ ಕಷ್ಟವಿದೆ ನನಗೆ ಅನಿಸುತ್ತಿದೆ. ಅವರು ಸಂಕಷ್ಟದ ಸಂದರ್ಭದಲ್ಲಿದ್ದಾರೆ. ಅವರು ಸೋಲುತ್ತಾರೆ. ನನ್ನ ಬಳಿ ಅಂಕಿಅಂಶಗಳಿಲ್ಲ ಅಥವಾ ಆಂಧ್ರ ಪ್ರದೇಶದ ಬಗ್ಗೆ ಯಾವುದೇ ಅನುಭವಗಳಿಲ್ಲ. ಆದರೆ ಅವರು ದೊಡ್ಡದಾಗಿ ಸೋಲುತ್ತಾರೆಂದು ನನ್ನ ಮನಸ್ಸು ಹೇಳುತ್ತಿದೆ. ಬರಿ ಸೋಲಲ್ಲ ದೊಡ್ಡ ಸೋಲು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಶಾಂತ್ ಸದ್ಯ ಬಿಹಾರದಲ್ಲಿ ಜಾನ್‌ ಸೂರಜ್‌ ಅಭಿಯಾನವನ್ನು ಮುನ್ನಡೆಸುತ್ತಿದ್ದು, ವೃತ್ತಿಪರ ಚುನಾವಣಾ ತಂತ್ರಗಾರಿಕೆಯಿಂದ ದೂರವುಳಿದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಬ್ರ್ಯಾಂಡ್ ಬೆಂಗಳೂರು’ ಬಡವರು ಬದುಕಲು ಯೋಗ್ಯವಾದ ನಗರವೂ ಆಗಲಿ

“ಅವರು ರಾಜ್ಯವನ್ನು ಹೇಗೆ ಮುನ್ನಡೆಸಿದರು ಎಂಬುದರ ಪರಿಸ್ಥಿತಿ ಇದಾಗಿದೆ. ಆಂಧ್ರ ಬಹುಶಃ ಮಧ್ಯಮ ವರ್ಗ ಆದಾಯ ವಿಭಾಗಕ್ಕೆ ಸೇರುವ ಸಾಧ್ಯತೆಯಿದೆ. ಮಧ್ಯಮ ಆದಾಯವುಳ್ಳ ರಾಜ್ಯದಲ್ಲಿ ನೀವು ಆದಾಯ ಉತ್ಪತ್ತಿ ಹಾಗೂ ಹೊಸ ಮೂಲ ಸೌಲಭ್ಯಗಳ ಬಗ್ಗೆ ಮಾತನಾಡದೆ ಹಂಚುವುದರ ಕಡೆ ಗಮನ ಹರಿಸುತ್ತಿದ್ದರೆ ಬಹು ದೊಡ್ಡ ಗಂಡಾಂತರವನ್ನು ತಂದುಕೊಳ್ಳುತ್ತೀರಿ. ಜಗನ್ ಸರ್ಕಾರವು ಹೆಚ್ಚುವರಿ ಸಾಲದ ವೆಚ್ಚದಲ್ಲಿಯೂ ಸಹ ನಿರುದ್ಯೋಗಿಗಳಿಗೆ ಪಾವತಿ ಹಾಗೂ ನೇರ ಲಾಭ ವರ್ಗಾವಣೆಗಳ ಕಡೆ ಹೆಚ್ಚು ಆದ್ಯತೆ ನೀಡುತ್ತಿದೆ. ಇದು ಕಡಿಮೆ ಆದಾಯವುಳ್ಳ ರಾಜ್ಯಕ್ಕೆ ಪ್ರಯೋಜನವಾಗುತ್ತದೆ ಆದರೆ ಆಂಧ್ರ ಪ್ರದೇಶದಲ್ಲಿ ನಗರೀಕರಣ ಶೇ.50 ರಷ್ಟಿದೆ. ಜನರಿಗೆ ಸರ್ಕಾರ ನೀಡುತ್ತಿರುವ ಉಚಿತ ಯೋಜನೆಗಳು ಹೆಚ್ಚು ಸರಿ ಹೊಂದುವುದಿಲ್ಲ. ಏಕೆಂದರೆ ಜನಸಂಖ್ಯೆಯಲ್ಲಿ ಅರ್ಧದಷ್ಟು ಅರ್ಹರಿರುವುದಿಲ್ಲ, ನೀವು ಅರ್ಹರನ್ನು ತಲುಪುವುದಿಲ್ಲ” ಎಂದರು.

ಪ್ರಶಾಂತ್ ಕಿಶೋರ್ ಕೆಲವು ತಿಂಗಳ ಹಿಂದೆ ವಿಜಯವಾಡದಲ್ಲಿ ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾಗಿ ಮೂರು ಗಂಟೆಗಳ ಕಾಲ ಚರ್ಚಿಸಿದ್ದಾರೆ. ಭೇಟಿಯ ಬಗ್ಗೆ ಸಂವಾದದಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಶಾಂತ್ ಕಿಶೋರ್, ಅವರ ಪಕ್ಷದೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...