ಜಗನ್‌ಮೋಹನ್‌ ರೆಡ್ಡಿ ದೇಶದ ಅತ್ಯಂತ ಶ್ರೀಮಂತ ಸಿಎಂ; ಮಮತಾ ಬ್ಯಾನರ್ಜಿ ಬಳಿ ಕಡಿಮೆ ಆಸ್ತಿ

Date:

  • ಚುನಾವಣಾ ಪ್ರಮಾಣಪತ್ರಗಳ ವಿಶ್ಲೇಷಣೆ ಆಧಾರದ ಮೇಲೆ ವರದಿ
  • 30 ಮುಖ್ಯಮಂತ್ರಿಗಳಲ್ಲಿ 13 ಮಂದಿ ಕೊಲೆ, ಕೊಲೆ ಯತ್ನ ಆರೋಪ

ಭಾರತದ ಮುಖ್ಯಮಂತ್ರಿಗಳಲ್ಲಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಅತ್ಯಂತ ಶ್ರೀಮಂತರಾಗಿದ್ದರೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಡಿಮೆ ಆಸ್ತಿ ಹೊಂದಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ನೀಡಿದೆ.

ಎಡಿಆರ್ ಸಂಸ್ಥೆ ಅಭ್ಯರ್ಥಿಗಳ ಚುನಾವಣಾ ಪ್ರಮಾಣಪತ್ರಗಳ ವಿಶ್ಲೇಷಣೆ ಆಧಾರದ ಮೇಲೆ ವರದಿ ನೀಡಿದ್ದು, ದೇಶದ 30 ಹಾಲಿ ಮುಖ್ಯಮಂತ್ರಿಗಳಲ್ಲಿ 29 ಮಂದಿ ಕೋಟ್ಯಾಧಿಪತಿಗಳಾಗಿದ್ದಾರೆ. ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ಅವರ ಒಟ್ಟು ಆಸ್ತಿ 510 ಕೋಟಿ ರೂ. ಇದ್ದರೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸುಮಾರು 15 ಲಕ್ಷ ರೂ. ಆಸ್ತಿ ಹೊಂದಿದ್ದಾರೆ.

ಎಲ್ಲಾ 30 ಪ್ರಸ್ತುತ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಪ್ರಮಾಣಪತ್ರಗಳನ್ನು ವಿಶ್ಲೇಷಿಸಿದ ನಂತರ ವರದಿ ನೀಡಲಾಗಿದೆ ಎಂದು ಎಡಿಆರ್ ಮತ್ತು ಚುನಾವಣಾ ಕಾವಲುಪಡೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದ 28 ರಾಜ್ಯಗಳಲ್ಲಿ ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳಾದ ದೆಹಲಿ ಮತ್ತು ಪುದುಚೇರಿಗಳಲ್ಲಿ ಮುಖ್ಯಮಂತ್ರಿಗಳು ಇದ್ದರೆ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಲೆಫ್ಟಿನೆಂಟ್ ಗವರ್ನರ್‌ ಕಾರ್ಯನಿರ್ವಹಿಸುತ್ತಿದ್ದಾರೆ.

30 ಮುಖ್ಯಮಂತ್ರಿಗಳ ಪೈಕಿ 29 (ಶೇ. 97) ಕೋಟ್ಯಾಧಿಪತಿಗಳಾಗಿದ್ದು, ಪ್ರತಿ ಮುಖ್ಯಮಂತ್ರಿಯು ಸರಾಸರಿ ಆಸ್ತಿ 33.96 ಕೋಟಿ ರೂ. ಎಂದು ಎಡಿಆರ್ ಹೇಳಿದೆ.

30 ಮುಖ್ಯಮಂತ್ರಿಗಳಲ್ಲಿ 13 (ಶೇ. 43) ಮಂದಿ ಕೊಲೆ, ಕೊಲೆ ಯತ್ನ, ಅಪಹರಣ ಸೇರಿದಂತೆ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವುದಾಗಿ ತಮ್ಮ ಪ್ರಮಾಣಪತ್ರದಲ್ಲಿ ಘೋಷಿಸಿಕೊಂಡಿದ್ದಾರೆ.

ಗಂಭೀರ ಕ್ರಿಮಿನಲ್ ಪ್ರಕರಣಗಳು ಜಾಮೀನು ರಹಿತ ಅಪರಾಧಗಳಾಗಿದ್ದು, ಐದು ವರ್ಷಗಳಿಗೂ ಹೆಚ್ಚು ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ವರದಿ ಹೇಳಿದೆ.

ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ (510 ಕೋಟಿ ರೂ.ಗಿಂತ ಹೆಚ್ಚು), ಅರುಣಾಚಲ ಪ್ರದೇಶದ ಪೇಮಾ ಖಂಡು (163 ಕೋಟಿ ರೂ.) ಮತ್ತು ಒಡಿಶಾದ ನವೀನ್ ಪಟ್ನಾಯಕ್ (ರೂ. 63 ಕೋಟಿಗಿಂತ ಹೆಚ್ಚು) ಆಸ್ತಿ ಹೊಂದಿರುವ ಅಗ್ರ ಮೂರು ಮುಖ್ಯಮಂತ್ರಿಗಳು.

ಕನಿಷ್ಠ ಘೋಷಿತ ಆಸ್ತಿ ಹೊಂದಿರುವ ಮೂವರು ಮುಖ್ಯಮಂತ್ರಿಗಳೆಂದರೆ – ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ 15 ಲಕ್ಷಕ್ಕೂ ಹೆಚ್ಚು, ಕೇರಳದ ಪಿಣರಾಯಿ ವಿಜಯನ್ 1 ಕೋಟಿಗೂ ಹೆಚ್ಚು ಮತ್ತು ಹರಿಯಾಣದ ಮನೋಹರ್ ಲಾಲ್ 1 ಕೋಟಿಗೂ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂದು ಎಡಿಆರ್ ಹೇಳಿದೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ದೆಹಲಿಯ ಅರವಿಂದ್ ಕೇಜ್ರಿವಾಲ್ ಇಬ್ಬರೂ 3 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂದು ವರದಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...