ದಿಢೀರ್ ಭೇಟಿ ಮೂಲಕ ರಾಷ್ಟ್ರಪತಿ ಭವನದ ಸಿಬ್ಬಂದಿಗೂ ಅಚ್ಚರಿ ಮೂಡಿಸಿದ್ದ ಜಗದೀಪ್ ಧನಕರ್

Date:

ದಿಢೀರ್ ರಾಜೀನಾಮೆ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿಯ ಅಲೆ ಸೃಷ್ಟಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್, ಮುಂಚಿತವಾಗಿಯೇ ಸಮಯ ನಿಗದಿ ಮಾಡಿಕೊಳ್ಳದೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲು ರಾಷ್ಟ್ರಪತಿ ಭವನಕ್ಕೆ ಧಾವಿಸುವ ಮೂಲಕ ರಾಷ್ಟ್ರಪತಿ ಭವನದ ಅಧಿಕಾರಿಗಳು ತಬ್ಬಿಬ್ಬಾಗಲು ಕಾರಣರಾದ ಅಂಶ ಇದೀಗ ಬೆಳಕಿಗೆ ಬಂದಿದೆ.

ಶಿಷ್ಟಾಚಾರಕ್ಕೆ ಅನುಸಾರವಾಗಿ ಕಾರ್ಯ ನಿರ್ವಹಿಸುವ ರಾಷ್ಟ್ರಪತಿ ಕಾರ್ಯಾಲಯ, ಧೀರ್ಘಕಾಲದಿಂದ ಇಂಥ ಅನಿರೀಕ್ಷಿತ ಬೆಳವಣಿಗೆಯನ್ನು ಎದುರಿಸಿರಲಿಲ್ಲ. ಮೊದಲೇ ಸಮಯ ನಿಗದಿಪಡಿಸಿಕೊಳ್ಳದೇ ಸಂವಿಧಾನಾತ್ಮಕ ಹುದ್ದೆ ಹೊಂದಿದ ಧನಕರ್ ರಾತ್ರಿ 9 ಗಂಟೆಗೆ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದು, ಸಂಚಲನಕ್ಕೆ ಕಾರಣವಾಯಿತು. ಎಡಿಸಿ ತಕ್ಷಣ ಮಿಲಿಟರಿ ಕಾರ್ಯದರ್ಶಿಯವರ ಬಳಿಗೆ ತೆರಳಿ ಆವರಣಕ್ಕೆ ಧನಕರ್ ಆಗಮಿಸಿದ ಸುದ್ದಿ ಮುಟ್ಟಿಸಿದರು.

ರಾಷ್ಟ್ರಪತಿ ಜತೆಗೆ ತರಾತುರಿಯ ಭೇಟಿ ನಿಗದಿಪಡಿಸಿದ ಬಳಿಕ ಧನಕರ್ ಸಂವಿಧಾನಾತ್ಮಕ ಅಗತ್ಯತೆಯಂತೆ ರಾಜೀನಾಮೆ ಪತ್ರ ಸಲ್ಲಿಸಿದರು. ಎಕ್ಸ್ ಖಾತೆ ಮೂಲಕ ರಾತ್ರಿ 9.25ಕ್ಕೆ ಧನಕರ್ ಈ ಬೆಳವಣಿಗೆಯನ್ನು ಪ್ರಕಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿವೇಶನ ಎಂದಾಕ್ಷಣ ಹೆದರಿ ಓಡುವ ಪ್ರಧಾನಿ ಮೋದಿ

ಈ ತಡರಾತ್ರಿಯ ಪ್ರಸಹನದ ಬಗ್ಗೆ ಯಾವುದೇ ಸುಳಿವು ಕೂಡಾ ಹೊಂದಿರದೇ ಇದ್ದುದನ್ನು ನೋಡಿದರೆ ಅವರ ರಾಜೀನಾಮೆಗೆ ದಿಢೀರ್ ಬೆಳವಣಿಗೆಯೊಂದು ಕಾರಣವಾಗಿತ್ತು ಎನ್ನುವುದನ್ನು ಸ್ಪಷ್ಟಪಡಿಸುತ್ತದೆ. ಧನಕರ್ ರಾಜೀನಾಮೆ ಬಗ್ಗೆ ಗೃಹ ಸಚಿವಾಲಯ ಅಧಿಕೃತ ಹೇಳಿಕೆಯನ್ನು ಮಂಗಳವಾರ ಅಧಿಸೂಚನೆ ಮೂಲಕ ಪ್ರಕಟಿಸಿದ್ದು, ಗಜೆಟ್ ಅಧಿಸೂಚನೆಗೆ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಸಹಿ ಮಾಡಿದ್ದಾರೆ.

ಮತ್ತೊಂದು ಬೆಳವಣಿಗೆಯಲ್ಲಿ ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ ಅವರು ರಾಷ್ಟ್ರಪತಿ ಭವನಕ್ಕೆ ಮಂಗಳವಾರ ಭೇಟಿ ನೀಡಿದ್ದರು. ರಾಜ್ಯಸಭೆಯ ಬೆಳಿಗ್ಗೆಯ ಕಲಾಪದ ಅಧ್ಯಕ್ಷತೆಯನ್ನು ಅವರು ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...