ಜಲ್ಲಿಕಟ್ಟು | 7 ಮಂದಿ ಸಾವು – 400ಕ್ಕೂ ಹೆಚ್ಚು ಮಂದಿಗೆ ಗಾಯ

Date:

ತಮಿಳುನಾಡಿನಲ್ಲಿ ಆಚರಿಸಲಾಗುವ ಜಲ್ಲಿಕಟ್ಟು ಮತ್ತು ಹೋರಿ ಪಳಗಿಸುವ ಸ್ಪರ್ಧೆಗಳಲ್ಲಿ ಗುರುವಾರ ಏಳು ಮಂದಿ ಸಾವನ್ನಪ್ಪಿದ್ದಾರೆ. 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಗುರುವಾರ ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಜಲ್ಲಿಕಟ್ಟು ಮತ್ತು ಹೋರಿ ಪಳಗಿಸುವ ಸ್ಪರ್ಧೆಗಳು ನಡೆದಿವೆ. ಈ ವೇಳೆ, ಹಲವೆಡೆ ಸ್ಪರ್ಧೆಯಲ್ಲಿದ್ದವರು ಮತ್ತು ಪ್ರೇಕ್ಷಕರು ಗಾಯಗೊಂಡಿದ್ದಾರೆ ಮೃತಪಟ್ಟಿದ್ದಾರೆ. ಸಾವನ್ನಪ್ಪಿದ ಏಳು ಮಂದಿಯ ಪೈಕಿ ಆರು ಮಂದಿ ಪ್ರೇಕ್ಷಕರು.

ಕೃಷ್ಣಗಿರ ಜಿಲ್ಲೆಯ ಬಸ್ತಲಪಲ್ಲಿ, ಸೇಲಂ ಜಿಲ್ಲೆಯ ಸೆಂಥರಪಟ್ಟಿ, ಶಿವಗಂಗಾ ಜಿಲ್ಲೆಯ ಸಿರವಾಯಲ್ ಮಂಜುವಿರಟ್ಟು, ಮೆಟ್ಟುಪಟ್ಟಿ ಹಾಗೂ ಮಧುರೈನ ಅಲಂಗನಲ್ಲೂರು ಎಂಬಲ್ಲಿ ಜಲ್ಲಿಕಟ್ಟು ಸ್ಪರ್ಧೆಯನ್ನು ವೀಕ್ಷಿಸಲು ತೆರಳಿದ್ದವರಲ್ಲಿ ತಲಾ ಒಬ್ಬ ಪ್ರೇಕ್ಷಕರೊಬ್ಬರು ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ಒದುರಂಪಟ್ಟಿಯ ಮಂಗಲದೇವನಪಟ್ಟಿ ಎಂಬಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವ್ಯಕ್ತಿಗೆ ಸ್ಪರ್ಧಾಕಣದಿಂದ ಓಡಿಬಂದ ಎತ್ತು ಗುದ್ದಿದ್ದು, ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಸಿರವಾಯಲ್‌ನಲ್ಲಿ ಹೋರಿಯನ್ನು ಹಿಡಿಯಲು ಪ್ರಯತ್ನಿಸಿದ ಹೋರಿಯ ಮಾಲೀಕ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಪದುಕೊಟ್ಟೈ, ಕರೂರು ಮತ್ತು ತಿರುಚ್ಚಿ ಜಿಲ್ಲೆಗಳಲ್ಲಿ ನಡೆದ ಜಲ್ಲಿಕಟ್ಟು ಸ್ಪರ್ಧೆಗಳಲ್ಲಿ 156 ಮಂದಿ ಗಾಯಗೊಂಡಿದ್ದಾರೆ. ಅಲಂಗನಲ್ಲೂರು ಜಲ್ಲಿಕಟ್ಟುವಿನಲ್ಲಿ 17 ಮಂದಿ ಹೋರಿ ಮಾಲೀಕರು ಮತ್ತು 33 ಮಂದಿ ಪ್ರೇಕ್ಷಕರು ಸೇರಿ 76 ಮಂದಿ ಗಾಯಗೊಂಡಿದ್ದಾರೆ. ಅಲ್ಲದೆ, ವಿವಿಧ ಸ್ಥಳಗಳಲ್ಲಿ ಸುಮಾರು 150ಕ್ಕೂ ಮಂದಿ ಗಾಯಗೊಂಡಿದ್ದಾರೆ.

ತಮಿಳುನಾಡಿನಲ್ಲಿ ಪೊಂಗಲ್ (ಸಂಕ್ರಾಂತಿ) ಸಂದರ್ಭದಲ್ಲಿ ಜಲ್ಲಿಕಟ್ಟು ಕ್ರೀಡೆಯನ್ನು ಸಾಂಪ್ರದಾಯಿಕವಾಗಿ ಏರ್ಪಡಿಸಲಾಗುತ್ತದೆ. ಆದರೆ, ಇದು ಪ್ರಾಣಿ ಹಿಂಸೆಯ ಕ್ರೀಡೆ ಎಂಬ ಕಾರಣ, ವಿವಿಧ ಸಂದರ್ಭಗಳಲ್ಲಿ ಜಲ್ಲಿಕಟ್ಟು ಆಚರಣೆಯನ್ನು ನಿಷೇಧಿಸಲಾಗಿತ್ತು. 2014 ಮತ್ತು 2016ರಲ್ಲಿ ನಿಷೇಧ ಹೇರಲಾಗಿತ್ತು. ನಿಷೇಧ ತೆರವಿಗೆ ಆಗ್ರಹಿಸಿ ಪ್ರತಿಭಟನೆಗಳು ನಡೆದಿದ್ದವು. ಆ ನಂತರ, ಪ್ರಾಣಿಗಳನ್ನು ಬಳಸದೆ ಜಲ್ಲಿಕಟ್ಟು ಆಚರಿಸಬೇಕು ಎಂಬ ಷರತ್ತಿನ ಮೇಲೆ ನಿಷೇಧಗಳನ್ನು ತೆರೆಯಲಾಗಿತ್ತು.

ಆದಾಗ್ಯೂ, 2023ರಲ್ಲಿ ಮತ್ತೆ ಜಲ್ಲಿಕಟ್ಟು ನಿಷೇಧಿಸುವ ಚರ್ಚೆ ಮುನ್ನೆಲೆಗೆ ಬಂದಿತ್ತು. ಆಗ, ತಮಿಳನಾಡು ಸರ್ಕಾರವು ಜಲ್ಲಿಕಟ್ಟು ತಮಿಳುನಾಡಿ ಪರಂಪರೆ, ಕ್ರೀಡೆಗೆ ಅವಕಾಶ ಇರುತ್ತದೆ ಎಂದು ಕಾನೂನು ಜಾರಿ ಮಾಡಿತು. ಆ ಕಾನೂನನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಆದರೆ, ಜಲ್ಲಿಕಟ್ಟು ತಮಿಳುನಾಡಿನ ಸಾಂಸ್ಕೃತಿಕ ಪರಂಪರೆ ಎಂದು ಶಾಸಕಾಂಗವೇ ಘೋಷಣೆ ಮಾಡಿರುವಾಗ, ನ್ಯಾಯಾಂಗವು ವಿಭಿನ್ನ ಅಭಿಪ್ರಾಯ ಪ್ರಕಟಿಸುವುದು ಸಾಧ್ಯವಿಲ್ಲ ಎಂದಿದ್ದ ಸುಪ್ರೀಂ ಕೋರ್ಟ್‌, ಜಲ್ಲಿಕಟ್ಟು ಕ್ರೀಡೆಗೆ ಅವಕಾಶ ನೀಡುವ ಸರ್ಕಾರದ ನೀತಿಯನ್ನು ಎತ್ತಿಹಿಡಿದಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...