ಜಮ್ಮು-ಕಾಶ್ಮೀರ | ನಿಗೂಢ ಕಾಯಿಲೆ; ಒಂದೇ ಗ್ರಾಮದಲ್ಲಿ 10 ಮಕ್ಕಳು ಸೇರಿ 13 ಮಂದಿ ಸಾವು

Date:

ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಗಡಿ ಜಿಲ್ಲೆಯ ಬಾಧಾಲ್ ಗ್ರಾಮದಲ್ಲಿ 10 ಮಕ್ಕಳು ಸೇರಿದಂತೆ 13 ಜನರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಅವರು ನಿಗೂಢ ಕಾಯಿಲೆಯಿಂದ ಮರಣ ಹೊಂದಿದ್ದಾರೆ ಎಂದು ವೈದ್ಯರು ಹೇಳುತ್ತಿದ್ದಾರೆ.

ನಿಗೂಢ ಕಾಯಿಲೆಯ ಕಾರಣವನ್ನು ಕಂಡುಹಿಡಿಯಲು ಆರೋಗ್ಯ ಇಲಾಖೆ ಗ್ರಾಮದಲ್ಲಿ ತೀವ್ರ ಕಾರ್ಯಾಚರಣೆ ನಡೆಸುತ್ತಿದೆ. ಮಾದರಿಗಳನ್ನು (ಸ್ಯಾಂಪಲ್) ಸಂಗ್ರಹಣೆ ಮಾಡುತ್ತಿದೆ.

ಮೊಹಮ್ಮದ್ ಯೂಸುಫ್ ಎಂದು ಗುರುತಿಸಲಾದ ವೃದ್ಧ ವ್ಯಕ್ತಿ ಸೋಮವಾರ ಸಂಜೆ ನಿಗೂಢ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಇದಕ್ಕೂ ಮೊದಲು, ಸೋಮವಾರ ಬೆಳಿಗ್ಗೆ 10 ವರ್ಷದ ಬಾಲಕ ಮೊಹಮ್ಮದ್ ಮರೂಫ್ ಅನಾರೋಗ್ಯದಿಂದ ಸಾವನ್ನಪ್ಪಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ, ಭಾನುವಾರ ಕೂಡ ಇದೇ ನಿಗೂಢ ಕಾಯಿಲೆಯಿಂದ ಜಹೂರ್ ಅಹ್ಮದ್ (14 ವರ್ಷ) ಮತ್ತು ನಬೀನಾ ಅಖ್ತರ್ (5 ವರ್ಷ) ಎಂಬ ಇಬ್ಬರು ಮಕ್ಕಳು ಮರಣ ಹೊಂದಿದ್ದರು.

ಡಿಸೆಂಬರ್ ಆರಂಭದಲ್ಲಿ ನಿಗೂಢ ಕಾಯಿಲೆ ಕಾಣಿಸಿಕೊಂಡಿತ್ತು. ಒಂದೇ ಕುಟುಂಬದ ಏಳು ಮಂದಿ ಡಿಸೆಂಬರ್ 7ರಂದು ಸಾವನ್ನಪ್ಪಿದ್ದರು. ಅಂದಿನಿಂದ ಇಂದಿನವರೆಗೆ ಸಾವನ್ನಪ್ಪಿರುವ 13 ಮಂದಿಯೂ ಜ್ವರ, ಬೆವರು, ವಾಂತಿ, ನಿರ್ಜಲೀಕರಣ ಹಾಗೂ ಪ್ರಜ್ಞೆ ಕಳೆದುಕೊಳ್ಳುವ ರೋಗಲಕ್ಷಣಗಳನ್ನು ಹೊಂದಿದ್ದರು ಎಂದು ವರದಿಯಾಗಿದೆ.

ರಾಜೌರಿ ಮುಖ್ಯ ವೈದ್ಯಾಧಿಕಾರಿ (CMO) ಡಾ. ಮನೋಹರ್ ಲಾಲ್ ಹೇಳುವಂತೆ, ಸಂಭಾವ್ಯ ಆರೋಗ್ಯ ಅಪಾಯಗಳನ್ನು ಗುರುತಿಸಲು ಮತ್ತು ಪರಿಹರಿಸಲು ಗ್ರಾಮದಲ್ಲಿ ತ್ವರಿತವಾಗಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

ಇಲ್ಲಿಯವರೆಗೆ, ನಿಗೂಢ ಕಾಯಿಲೆಯು ಗ್ರಾಮದ ಮೂರು ಕುಟುಂಬಗಳಿಗೆ ಸೀಮಿತವಾಗಿದೆ. ಇತರರಿಗೂ ಕಾಯಿಲೆ ಹರಡದಂತೆ ತಡೆಯಬೇಕಾಗಿದೆ. ಗ್ರಾಮದಲ್ಲಿ ಒಟ್ಟು 5,700 ಜನರಿದ್ದು, 12,000 ಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಿದ್ದೇವೆ. ನಾವು ಪುನರಾವರ್ತಿತ ಪರೀಕ್ಷೆಗಳನ್ನು ನಡೆಸುತ್ತಿದ್ದೇವೆ ಎಂದು ಮನೋಹರ್ ತಿಳಿಸಿದ್ದಾರೆ.

ಗ್ರಾಮದಲ್ಲಿ ಪರೀಕ್ಷೆಯ ಸಮಯದಲ್ಲಿ, ಯಾವುದೇ ವೈರಾಣು ಕಂಡುಬಂದಿಲ್ಲ. ನೀರು ಸಹ ಶುದ್ಧವಾಗಿದೆ ಎಂದು ದೃಢಪಡಿಸಲಾಗಿದೆ. ಮೃತರ ಮರಣೋತ್ತರ ಪರೀಕ್ಷೆ ಮತ್ತು FSL ವರದಿಗಳಿಗಾಗಿ ಕಾಯಲಾಗುತ್ತಿದೆ. ಆ ವರದಿಯಿಂದ ಏನಾದರೂ ಹೆಚ್ಚಿನ ಮಾಹಿತಿ ತಿಳಿಯಬಹುದೆಂದು ಎದುರು ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಪ್ರಸ್ತುತ, ಜಮ್ಮುವಿನ ಆಸ್ಪತ್ರೆಯಲ್ಲಿ ಮೂವರು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...