ಜಮ್ಮು ಕಾಶ್ಮೀರ ಚುನಾವಣೆ | ಅಂತಿಮ ಹಂತದ ಮತದಾನ ಆರಂಭ; ಮಾಜಿ ಸಿಎಂ ತಾರಾ ಚಂದ್, ಮುಜಾಫರ್ ಕಣದಲ್ಲಿ

Date:

ಜಮ್ಮು ಕಾಶ್ಮೀರ ಚುನಾವಣೆ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ. ಇಂದು ಜಮ್ಮು ಕಾಶ್ಮೀರದ ಅಂತಿಮ ಹಂತದ ಮತದಾನ ಆರಂಭವಾಗಿದ್ದು, 415 ಅಭ್ಯರ್ಥಿಗಳ ಪೈಕಿ ಮಾಜಿ ಉಪಮುಖ್ಯಮಂತ್ರಿಗಳಾದ ತಾರಾ ಚಂದ್ ಮತ್ತು ಮುಜಾಫರ್ ಬೇಗ್ ಅವರಂತಹ ಪ್ರಮುಖ ನಾಯಕರು ಚುನಾವಣಾ ಕಣದಲ್ಲಿದ್ದಾರೆ.

40 ಕ್ಷೇತ್ರಗಳ ಮತದಾರರು ಇಂದು ಕೇಂದ್ರಾಡಳಿತ ಪ್ರದೇಶದಲ್ಲಿ ಮೂರನೇ ಮತ್ತು ಅಂತಿಮ ಹಂತದ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಭದ್ರತೆಯ ನಡುವೆ ಮತ ಚಲಾಯಿಸುತ್ತಿದ್ದಾರೆ. 40 ವಿಧಾನಸಭಾ ಕ್ಷೇತ್ರಗಳ ಪೈಕಿ 24 ಜಮ್ಮು ವಿಭಾಗದಲ್ಲಿ ಮತ್ತು 16 ಕಾಶ್ಮೀರ ವಿಭಾಗದಲ್ಲಿವೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ.

ಮೊದಲ ಹಂತದ ಮತದಾನವು ಸೆಪ್ಟೆಂಬರ್ 18ರಂದು ನಡೆಯಿತು. ನಂತರ ಎರಡನೇ ಹಂತವು ಸೆಪ್ಟೆಂಬರ್ 25ರಂದು ನಡೆಯಿತು. ಭಾರತದ ಚುನಾವಣಾ ಆಯೋಗದ ಪ್ರಕಾರ, ಮೊದಲ ಮತ್ತು ಎರಡನೇ ಹಂತದಲ್ಲಿ ಕ್ರಮವಾಗಿ ಶೇಕಡ 61 ಮತ್ತು ಶೇಕಡ 57.31 ಮತದಾನವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ ಚುನಾವಣೆ | ಎರಡನೇ ಹಂತದ ಮತದಾನ ಆರಂಭ, ಒಮರ್ ಅಬ್ದುಲ್ಲಾ ಕಣದಲ್ಲಿ

ಜಮ್ಮು ವಿಭಾಗದ 24 ವಿಧಾನಸಭೆ ಕ್ಷೇತ್ರಗಳಲ್ಲಿ ಹೆಚ್ಚಾಗಿ ಹಿಂದೂ ಸಮುದಾಯದ ಜನರು ಬಹುಸಂಖ್ಯೆಯಲ್ಲಿರುವ ಜಿಲ್ಲೆಗಳಾದ ಜಮ್ಮು, ಸಾಂಬಾ, ಕಥುವಾ ಮತ್ತು ಉಧಂಪುರದಲ್ಲಿ ಮತದಾನ ನಡೆಯಲಿದೆ. ಈ ಕ್ಷೇತ್ರಗಳನ್ನು ಬಿಜೆಪಿ ಗುರಿಯಾಗಿಸಿಕೊಂಡಿದೆ.

ಪ್ರಮುಖ ಅಭ್ಯರ್ಥಿಗಳು ಇವರು

ಇಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡನ್ನೂ ಪ್ರತಿನಿಧಿಸುವ ಹಲವಾರು ರಾಜಕೀಯ ಪ್ರಮುಖರು ಕಣದಲ್ಲಿದ್ದಾರೆ. ಹಾಗೆಯೇ ಮಾಜಿ ಮುಖ್ಯಮಂತ್ರಿಗಳು ಕೂಡಾ ಕಣದಲ್ಲಿದ್ದಾರೆ.

ದೇವೆಂದರ್ ಸಿಂಗ್ ರಾಣಾ: ನಗ್ರೋಟಾದ ಬಿಜೆಪಿ ಅಭ್ಯರ್ಥಿ ದೇವೆಂದರ್ ಸಿಂಗ್ ರಾಣಾ ಅವರಾಗಿದ್ದು, ಅವರ ಚುನಾವಣಾ ಪ್ರಚಾರವು ಅಭಿವೃದ್ಧಿ ಮತ್ತು ಮೂಲಸೌಕರ್ಯಗಳ ಮೇಲೆ ಕೇಂದ್ರೀಕರಿಸಿತ್ತು.

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ: ಮೊದಲ ಹಂತದ 24 ಕ್ಷೇತ್ರಗಳಲ್ಲಿ ಮತದಾನ ಆರಂಭ

ರಾಮನ್ ಭಲ್ಲಾ: ಆರ್‌ಎಸ್ ಪುರ-ಜಮ್ಮು ದಕ್ಷಿಣದ ಕಾಂಗ್ರೆಸ್ ಅಭ್ಯರ್ಥಿ ರಾಮನ್ ಭಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮತ್ತು ಜಮ್ಮು ಕಾಶ್ಮೀರದ ಮಾಜಿ ಸಚಿವರಾಗಿದ್ದಾರೆ. ಭಲ್ಲಾ ಸ್ಥಳೀಯ ಆಡಳಿತ ಸುಧಾರಣೆಯನ್ನು ಮುಂದಿಟ್ಟುಕೊಂಡು ಪ್ರಚಾರ ನಡೆಸಿದ್ದಾರೆ.

ತಾರಾ ಚಂದ್: ಮಾಜಿ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ತಾರಾ ಚಂದ್ ಚಂಬ್ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

ಸಜಾದ್ ಲೋನ್: ಪೀಪಲ್ಸ್ ಕಾನ್ಫರೆನ್ಸ್ ನಾಯಕ ಮತ್ತು ಮಾಜಿ ಪ್ರತ್ಯೇಕತಾವಾದಿ, ಕುಪ್ವಾರ ಮತ್ತು ಹಂದ್ವಾರದಲ್ಲಿ ಜನಪ್ರಿಯರಾದ ಸಜಾದ್ ಲೋನ್ ಅವರು ಚುನಾವಣೆಯಲ್ಲಿ ನಿರ್ಣಾಯಕ ವ್ಯಕ್ತಿಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...