ಬಿಜೆಪಿ ವಿರುದ್ಧ ಉತ್ತರದಲ್ಲಿ ನಡೆಯಲಿದೆ ‘ಜನ ಚೇತನ ಯಾತ್ರೆ’

Date:

ಬಿಜೆಪಿಯ ಕೋಮು ರಾಜಕಾರಣದ ವಿರುದ್ಧ ಮತ್ತು ಪ್ರಜಾಪ್ರಭುತ್ವ ಭಾರತಕ್ಕಾಗಿ ಎಲ್ಲರನ್ನು ಬೆಸೆಯಲು ಡಿಸೆಂಬರ್ 6ರಿಂದ ‘ಜನ ಚೇತನ ಯಾತ್ರೆ’ ನಡೆಸಲು ಹಲವಾರು ಸಂಘಟನೆಗಳು ಮುಂದಾಗಿವೆ.

ಬಾಬರಿ ಮಸೀದಿ ಧ್ವಂಸಗೊಂಡ ದಿನವಾದ ಡಿಸೆಂಬರ್ 6ರಂದು ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಯಾತ್ರೆ ಆರಂಭವಾಗಲಿದೆ. ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಬಿಹಾರದ ಮೂಲಕ ಹಾದು ಡಿಸೆಂಬರ್ 20ರಂದು ಉತ್ತರ ಪ್ರದೇಶದ ಬನಾರಸ್‌ಗೆ ಯಾತ್ರೆ ತಲುಪಲಿದೆ ಎಂದು ಸಂಘಟನೆಗಳು ತಿಳಿಸಿವೆ.

ಕೋಮುವಾದದ ವಿರುದ್ಧ ಪ್ರತಿಜ್ಞೆಯನ್ನು ಕೈಗೊಳ್ಳುವುದು, ಪ್ರಜಾಪ್ರಭುತ್ವ ಭಾರತಕ್ಕಾಗಿ ಪ್ರಗತಿಪರ ಧ್ವನಿಗಳನ್ನು ಬಲಪಡಿಸುವುದು ಹಾಗೂ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ದಾಳಿಯನ್ನು ಎತ್ತಿ ತೋರಿಸುವುದು ಯಾತ್ರೆಯ ಉದ್ದೇಶವಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಎಸ್‌ಎಸ್-ಬಿಜೆಪಿಯ ಹೆಚ್ಚುತ್ತಿರುವ ಫ್ಯಾಸಿಸ್ಟ್ ಆಕ್ರಮಣ, ದೇಶದ ಸಾಮಾನ್ಯ ಜನರ ಮೇಲಿನ ನವ ಉದಾರವಾದಿ ದಾಳಿಗಳು, ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ನಡೆಯುತ್ತಿರುವ ದ್ವೇಷ ಮತ್ತು ಹಿಂಸೆಗಳು,
ಜನರ ಮೇಲಿನ ಎಲ್ಲ ರೀತಿಯ ಶೋಷಣೆ, ದಬ್ಬಾಳಿಕೆ ಮತ್ತು ದಮನಗಳ ವಿರುದ್ಧ ದನಿಯನ್ನು ಒಗ್ಗೂಡಿಸುವುದು ಕಾರ್ಯ ಯಾತ್ರೆಯಲ್ಲಿ ನಡೆಯಲಿದೆ ಎಂದು ಯಾತ್ರೆಯ ನೇತಾರರು ತಿಳಿಸಿದ್ದಾರೆ.

ಯಾತ್ರೆಯಲ್ಲಿ ಅಖಿಲ್ ಹಿಂದ್ ಫಾರ್ವರ್ಡ್ ಬ್ಲಾಕ್ (ಕ್ರಾಂತಿಕಾರಿ), ಆಜಾದ್ ಗಾನ ಮೋರ್ಚಾ, ಬಿಎಎಫ್‌ಆರ್‌ಬಿ, ಬಿಹಾರ ನಿರ್ಮಾಣ ಮತ್ತು ಅಸಂಗತಿತ್ ಶ್ರಮಿಕ್ ಯೂನಿಯನ್, ಸಿಬಿಎಸ್‌ಎಸ್ (ಚಾಯ್ ಬಗನ್ ಸಂಗ್ರಾಮ್ ಸಮಿತಿ), ಸಿಸಿಐ, ಸಿಪಿಐ-ಎಂಎಲ್, ಸಿಪಿಐ-ಎಂಎಲ್(ಎನ್‌ಡಿ), ಸಿಪಿಐ-ಎಂಎಲ್, ಜನವಾಡಿ ಲೋಕ ಮಂಚ್, ಮಾರ್ಕ್ಸ್‌ವಾದಿ ಸಮನ್ವಯ ಸಮಿತಿ, ಎಂಕೆಪಿ, ನಾಗರಿಕ್ ಅಧಿಕಾರ ರಕ್ಷಾ ಮಂಚ್ ಸೇರಿದಂತೆ ಹಲವಾರು ಸಂಘಟನೆಗಳು ಭಾಗಿಯಾಗಲಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...