80 ವಿದ್ಯಾರ್ಥಿನಿಯರ ಶರ್ಟ್‌ ಬಿಚ್ಚಿಸಿ ಮನೆಗೆ ಕಳುಹಿಸಿದ ಪ್ರಾಂಶುಪಾಲ

Date:

ಜಾರ್ಖಂಡ್‌ನ ಧನ್‌ಬಾದ್‌ನಲ್ಲಿರುವ ಪ್ರತಿಷ್ಠಿತ ಶಾಲೆಯ ಪ್ರಾಂಶುಪಾಲನೊಬ್ಬ ವಿದ್ಯಾರ್ಥಿನಿಯರ ಶರ್ಟ್‌ ಬಿಚ್ಚಿಸಿ ಬ್ಲೇಸರ್‌ನಲ್ಲೇ ಮನೆಗೆ ಕಳುಹಿಸಿರುವ ಅಮಾನವೀಯ ಘಟನೆ ನಡೆದಿದೆ.

ವಿದ್ಯಾರ್ಥಿನಿಯರು ಶರ್ಟ್‌ ಮೇಲೆ ಪೆನ್ನಿನಿಂದ ಬರೆದುಕೊಂಡಿದ್ದರು. ಇದರಿಂದ ಆಕ್ರೋಶಗೊಂಡ ಪ್ರಾಂಶುಪಾಲರು ಅವರ ಶರ್ಟ್‌ ಬಿಚ್ಚಿಸಿ, ಬರೀ ಬ್ಲೇಸರ್‌ನಲ್ಲೇ ಮನೆಗೆ ಕಳುಹಿಸಿದ್ದಾರೆ. ಪ್ರಾಂಶುಪಾಲರ ಈ ನಡೆಗೆ ಪೋಷಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಜಿಲ್ಲಾಧಿಕಾರಿ ಮಾಧವಿ ಮಿಶ್ರಾ ಅವರು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

80 ವಿದ್ಯಾರ್ಥಿನಿಯರು ಶಾಲೆಯಲ್ಲಿ ʻಪೆನ್‌ ಡೇʼ ಆಚರಿಸಿ, ಶರ್ಟ್‌ ಮೇಲೆ ಪೆನ್ನಿನಿಂದ ಬರೆದುಕೊಂಡಿದ್ದರು. ಇದರಿಂದ ಸಿಟ್ಟಾದ ಪ್ರಾಂಶುಪಾಲರು ಶರ್ಟ್‌ ಬಿಚ್ಚಿ ಮನೆಗೆ ಕಳಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಬಗ್ಗೆ ಕೇಜ್ರಿವಾಲ್‌ಗೆ ಇರಲಿ ಎಚ್ಚರ

ಪ್ರಾಂಶುಪಾಲರು ಪೆನ್‌ ಡೇ ಆಚರಣೆಯನ್ನು ವಿರೋಧಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಕ್ಷಮೆಯಾಚಿಸಿದರೂ ಅವರ ಶರ್ಟ್ ತೆಗೆಯುವಂತೆ ಹೇಳಿದ್ದಾರೆ. ಎಲ್ಲ ವಿದ್ಯಾರ್ಥಿನಿಯರನ್ನು ಶರ್ಟ್ ಇಲ್ಲದೆ ಬ್ಲೇಜರ್‌ಗಳಲ್ಲಿ ಮನೆಗೆ ಕಳುಹಿಸಲಾಯಿತು. ಪ್ರಾಂಶುಪಾಲರ ವಿರುದ್ಧ ಹಲವು ಪೋಷಕರು ದೂರು ದಾಖಲಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಮಿಶ್ರಾ ಹೇಳಿದ್ದಾರೆ.

ಸಂತ್ರಸ್ತ ವಿದ್ಯಾರ್ಥಿನಿಯರೊದಿಗೆ ಮಾತುಕತೆ ನಡೆಸಿದ್ದೇವೆ. ಜಿಲ್ಲಾಡಳಿತ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ. ಈ ಸಮಿತಿಯು ಉಪವಿಭಾಗಾಧಿಕಾರಿ , ಜಿಲ್ಲಾ ಶಿಕ್ಷಣಾಧಿಕಾರಿ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಒಳಗೊಂಡಿರುತ್ತದೆ. ತನಿಖಾ ಸಮಿತಿಯ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಝರಿಯಾ ಶಾಸಕಿ ರಾಗಿಣಿ ಸಿಂಗ್ ಕೂಡ ಶನಿವಾರ ಶಾಲೆಯ ಪೋಷಕರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಪ್ರಾಂಶುಪಾಲರ ವಿರುದ್ಧ ದೂರು ದಾಖಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...