ಕಾನೂನುಬಾಹಿರ ಸಭೆ, ಗಲಭೆ ಪ್ರಕರಣ: ಜಿಗ್ನೇಶ್ ಮೇವಾನಿ ಖುಲಾಸೆ

Date:

ಕಾಂಗ್ರೆಸ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಹಾಗೂ ಇತರ ಆರು ಮಂದಿಯ ವಿರುದ್ಧ 2016ರಲ್ಲಿ ದಾಖಲಾಗಿದ್ದ ಕಾನೂನು ಬಾಹಿರ ಸಭೆ, ಗಲಭೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಗುಜರಾತ್‌ ನ್ಯಾಯಾಲಯ ಖುಲಾಸೆಗೊಳಿಸಿದೆ.

ಹೆಚ್ಚುವರಿ ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಟ್ ಪಿ ಎನ್ ಗೋಸ್ವಾಮಿ ಅವರು ಜಿಗ್ನೇಶ್ ಮೇವಾನಿ, ಮನಬಾಯಿ ಪಟೇಲಿಯಾ, ಮುಖೇಶ್ ಪಟೇಲ್, ದಶರತ್ ಪಾಗಿ, ಮೀಶ್ ನರ್ಶಿನಿ ಹಾಗೂ ದರ್ಶನ್ ಪಟದಿಯಾ ವಿರುದ್ಧ ದಾಖಲಾಗಿದ್ದ ಕಾನೂನು ಬಾಹಿರ ಸಭೆ, ಗಲಭೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ ಪ್ರಕರಣದಲ್ಲಿ ಖುಲಾಸೆಗೊಳಿಸಿದ್ದಾರೆ.

2016ರ ಸೆಪ್ಟೆಂಬರ್‌ನಲ್ಲಿ ಅಹಮದಾಬಾದ್‌ನ ಮುನ್ಸಿಪಲ್ ಕಾರ್ಪೋರೇಷನ್‌ನ ಪೌರ ಕಾರ್ಮಿಕರನ್ನು ಬೆಂಬಲಿಸಿ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಂಡು ಸರ್ಕಾರಿ ಆಸ್ತಿಪಾಸ್ತಿಗೆ ನಷ್ಟ ಉಂಟುಮಾಡಿದ್ದಕ್ಕಾಗಿ ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ

ಈ ಪ್ರಕರಣದಲ್ಲಿ ಮೇವಾನಿ ಹಾಗೂ ಬೆಂಬಲಿಗರ ವಿರುದ್ಧ ಐಪಿಸಿ ಸೆಕ್ಷನ್ 143 (ಕಾನೂನುಬಾಹಿರ ಸಭೆ),146(ಗಲಭೆ),147,294(ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಕೃತ್ಯ), 332(ಸರ್ಕಾರಿ ಅಧಿಕಾರಿ ಕರ್ತವ್ಯದಲ್ಲಿರುವಾಗ ತೊಂದರೆಯುಂಟು ಮಾಡುವುದು) ಸೇರಿದಂತೆ ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿತ್ತು.

ಜಿಗ್ನೇಶ್ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲರಾದ ಕಾರಣ ನ್ಯಾಯಾಲಯ ಪ್ರಕರಣಗಳನ್ನು ರದ್ದುಗೊಳಿಸಿತು.

2022ರ ಗುಜರಾತ್ ವಿದಾನಸಭೆಯ ವಡಗಾವ್ ವಿಧಾನಸಭೆಯಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಜಿಗ್ನೇಶ್ ಮೇವಾನಿ ಗೆಲುವು ಸಾಧಿಸಿದ್ದರು. ಜಿಗ್ನೇಶ್ ಅವರು ಗುಜರಾತ್‌ನ ಕಾಂಗ್ರೆಸ್‌ನ ಕಾರ್ಯಕಾರಿ ಅಧ್ಯಕ್ಷ ಹಾಗೂ ಸರ್ಕಾರೇತರ ಸಂಸ್ಥೆ ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್‌ನ ಸಂಚಾಲಕ ಕೂಡ ಆಗಿದ್ದಾರೆ.

ಇದಲ್ಲದೆ 2017ರಲ್ಲಿ ಗುಜರಾತ್‌ ಸರ್ಕಾರದ ವಿರುದ್ಧದ ಪ್ರತಿಭಟನೆಯ ವೇಳೆ ರೈಲು ತಡೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿಯೂ ಜಿಗ್ನೇಶ್ ಮೆವಾನಿ ಮತ್ತು ಇತರ 30 ಮಂದಿಯನ್ನು  ಮೆಟ್ರೋಪಾಲಿಟನ್ ನ್ಯಾಯಾಲಯ ಖುಲಾಸೆಗೊಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...