ಜಮ್ಮು ಕಾಶ್ಮೀರ ಕುಪ್ವಾರ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಸೇನೆಯ ಮೂನರು ಲೆಫ್ಟಿನೆಂಟ್ ಕರ್ನಲ್ ಹಾಗೂ 13 ಸಿಬ್ಬಂದಿಯ ವಿರುದ್ಧ ಕೊಲೆ ಯತ್ನ ಹಾಗೂ ಡಕಾಯಿತಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ಬುಧವಾರ ಘಟನೆ ನಡೆದಿದ್ದು, ಸೈನಿಕನೊಬ್ಬನನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದಾಗ ಗಲಭೆ ಉಂಟಾಗಿದೆ. ಈ ಘಟನೆ ನಡೆದ ನಂತರ ಸುಮಾರು 60 ಮಂದಿ ಯೋಧರು ಪೊಲೀಸ್ ಠಾಣೆಯ ದಾಳಿ ನಡೆಸಿದ್ದಾರೆ.
ಎಫ್ಐಆರ್ ಪ್ರಕಾರ ಸೇನಾ ಯೋಧರ ಗುಂಪು ಲೆಫ್ಟಿನೆಮಟ್ ಕರ್ನಲ್ಗಳಾದ ಅಂಕಿದ್ ಸೂದ್, ರಾಜೀವ್ ಚೌಹಾನ್ ಹಾಗೂ ನಿಖಿಲ್ ಅವರ ನೇತೃತ್ವದಲ್ಲಿ ದಾಳಿ ನಡೆಸಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೋರಾಟಗಳನ್ನು ಹತ್ತಿಕ್ಕಿದ ಗೌಡರ ಹಾಸನದಲ್ಲಿ ಮತ್ತೆ ಮೊಳಗಿದ ಹೋರಾಟದ ಕೂಗು
ಬಲವಂತವಾಗಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ ಈ ಗುಂಪು ಪೊಲೀಸ್ ಸಿಬ್ಬಂದಿಯ ಮೇಲೆ ಬಂದೂಕು ಹಾಗೂ ದೊಣ್ಣೆಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ದಾಳಿ ನಡೆಸಿದ ನಂತರವೂ ಇನ್ನಷ್ಟು ಸಿಬ್ಬಂದಿಯೊಂದಿಗೆ ಆಗಮಿಸಿದ ಗುಂಪು ಪೊಲೀಸರ ಮೊಬೈಲ್ ಫೋನುಗಳನ್ನು ವಶಪಡಿಸಿಕೊಂಡಿತ್ತಲ್ಲದೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬರನ್ನು ಸ್ಥಳದಿಂದ ಅಪಹರಿಸಿದರು.
ಹಿರಿಯ ಪೊಲೀಸ್ ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಪೊಲೀಸ್ ಕಾನ್ಸ್ಟೇಬಲ್ ಅವರನ್ನು ಸೇನೆಯಿಂದ ಬಿಡಿಸಿಕೊಳ್ಳಲಾಯಿತು.
ಘಟನೆಗೆ ಸಂಬಂಧಿಸಿದಂತೆ ಸೇನಾ ಅಧಿಕಾರಿಗಳ ವಿರುದ್ಧ 186, 332, 307,342 ಹಾಗೂ 147ರ ಐಪಿಸಿ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿದೆ.




