ವಿನೋದ್ ಕುಮಾರ್ ಶುಕ್ಲಾಗೆ ಜ್ಞಾನಪೀಠ ಪ್ರಶಸ್ತಿ: ಅತ್ಯುನ್ನತ ಪ್ರಶಸ್ತಿ ಪಡೆದ ಛತ್ತೀಸ್‌ಗಢದ ಮೊದಲ ಲೇಖಕ

Date:

2024ನೇ ಸಾಲಿನ 59ನೇ ಜ್ಞಾನಪೀಠ ಪ್ರಶಸ್ತಿ ಪ್ರಕಟಿಸಲಾಗಿದ್ದು, ಹಿಂದಿಯ ಹಿರಿಯ ಸಾಹಿತಿ 88 ವರ್ಷದ ವಿನೋದ್​ ಕುಮಾರ್​​ ಶುಕ್ಲಾ ಅವರನ್ನು ಅತ್ಯುನ್ನತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಛತ್ತೀಸ್‌ಗಢದಿಂದ ಭಾರತದ ಅತ್ಯುನ್ನತ ಸಾಹಿತ್ಯ ಗೌರವವನ್ನು ಪಡೆದ ಮೊದಲ ಲೇಖಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಸಿದ್ಧ ಕವಿ, ಸಣ್ಣ ಕಥೆಗಾರ ಮತ್ತು ಪ್ರಬಂಧಕಾರರಾದ ವಿನೋದ್ ಶುಕ್ಲಾ ಈ ಪ್ರಶಸ್ತಿಯನ್ನು ಪಡೆದ 12ನೇ ಹಿಂದಿ ಸಾಹಿತಿಯಾಗಿದ್ದಾರೆ.

88 ವರ್ಷದ ಕವಿ, ಸಣ್ಣ ಕಥೆಗಾರ ಮತ್ತು ಪ್ರಬಂಧಕಾರರಾದ ವಿನೋದ್ ಶುಕ್ಲಾ ಛತ್ತೀಸ್‌ಗಢದಿಂದ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಮೊದಲ ಲೇಖಕರಾಗಿದ್ದಾರೆ. ಸಮಕಾಲೀನ ಹಿಂದಿ ಸಾಹಿತ್ಯದಲ್ಲಿ ಅತ್ಯಂತ ವಿಶಿಷ್ಟ ಧ್ವನಿಗಳಲ್ಲಿ ಒಬ್ಬರೆಂದು ವಿನೋದ್ ಶುಕ್ಲಾ ಅವರನ್ನು ಪರಿಗಣಿಸಲಾಗಿದೆ. 11 ಲಕ್ಷ ರೂ. ನಗದು ಬಹುಮಾನ, ಕಂಚಿನ ಸರಸ್ವತಿ ಪ್ರತಿಮೆ ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುವ ಈ ಪ್ರಶಸ್ತಿಯನ್ನು ಗೆದ್ದ 12ನೇ ಹಿಂದಿ ಬರಹಗಾರ ಇವರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕಕ್ಕೆ ಶಾಸನಸಭೆಯಿಂದ ಅಪಮಾನ; ನೈತಿಕ ಹೊಣೆ ಯಾರದ್ದು?

“ಇದು ತುಂಬಾ ದೊಡ್ಡ ಪ್ರಶಸ್ತಿ. ನಾನು ಅದನ್ನು ಸ್ವೀಕರಿಸುತ್ತೇನೆ ಎಂದು ಎಂದಿಗೂ ಭಾವಿಸಿರಲಿಲ್ಲ. ನಾನು ಪ್ರಶಸ್ತಿಗಳಿಗೆ ನಿಜವಾಗಿಯೂ ಗಮನ ಕೊಡಲಿಲ್ಲ. ಜನರು ಆಗಾಗ ಮಾತನಾಡುವಾಗ ನಾನು ಜ್ಞಾನಪೀಠಕ್ಕೆ ಅರ್ಹನೆಂದು ಹೇಳುತ್ತಿದ್ದರು. ಆದರೆ ಅದಕ್ಕೆ ಪ್ರತಿಕ್ರಿಯಿಸಲು ಸರಿಯಾದ ಪದಗಳು ನನಗೆ ಎಂದಿಗೂ ಸಿಗಲಿಲ್ಲ” ಎಂದು ವಿನೋದ್ ಶುಕ್ಲಾ ಹೇಳಿದ್ದಾರೆ.

“ಬರವಣಿಗೆ ಸಣ್ಣ ಕೆಲಸವಲ್ಲ. ನೀವು ಬರೆಯುತ್ತಿದ್ದರೆ, ಬರೆಯುತ್ತಲೇ ಇರಿ. ನಿಮ್ಮ ಬಗ್ಗೆ ವಿಶ್ವಾಸವಿಡಿ. ಮತ್ತು ನಿಮ್ಮ ಕೃತಿ ಪ್ರಕಟವಾದ ನಂತರ ಇತರರು ಪ್ರತಿಕ್ರಿಯೆ ನೀಡಿದರೆ ಅದರ ಬಗ್ಗೆಯೂ ಗಮನ ಕೊಡಿ” ಎಂದು ಅವರು ಕಿರಿಯ ಬರಹಗಾರರಿಗೆ ಸಲಹೆ ನೀಡಿದ್ದಾರೆ.

ಬರಹಗಾರ್ತಿ ಮತ್ತು ಮಾಜಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಪ್ರತಿಭಾ ರೇ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜ್ಞಾನಪೀಠ ಆಯ್ಕೆ ಸಮಿತಿಯು ವಿನೋದ್ ಶುಕ್ಲಾ ಅವರ ಹೆಸರನ್ನು ಅಂತಿಮಗೊಳಿಸಿತು.

ಈ ಸಭೆಯಲ್ಲಿ ಹಾಜರಿದ್ದ ಇತರ ಸಮಿತಿ ಸದಸ್ಯರಲ್ಲಿ ಮಾಧವ್ ಕೌಶಿಕ್, ದಾಮೋದರ್ ಮೌಜೋ, ಪ್ರಭಾ ವರ್ಮ, ಅನಾಮಿಕಾ, ಎ. ಕೃಷ್ಣ ರಾವ್, ಪ್ರಫುಲ್ ಶಿಲೇದಾರ್, ಜಾನಕಿ ಪ್ರಸಾದ್ ಶರ್ಮಾ ಮತ್ತು ಜ್ಞಾನಪೀಠ ನಿರ್ದೇಶಕ ಮಧುಸೂದನ್ ಆನಂದ್ ಸೇರಿದ್ದಾರೆ. 1961ರಲ್ಲಿ ಸ್ಥಾಪಿಸಲಾದ ಜ್ಞಾನಪೀಠ ಪ್ರಶಸ್ತಿಯನ್ನು ಮೊದಲು ಮಲಯಾಳಂ ಕವಿ ಜಿ. ಶಂಕರ ಕುರುಪ್ ಅವರ ಒಡಕ್ಕುಝಲ್ ಸಂಕಲನಕ್ಕಾಗಿ 1965ರಲ್ಲಿ ನೀಡಲಾಯಿತು. ಕನ್ನಡದ 8 ಸಾಹಿತಿಗಳಿಗೆ ಪ್ರಶಸ್ತಿ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...