ತಿರುಪತಿಯಲ್ಲಿ ಕೆಲಸ – ಹಿಂದುಗಳಿಗಷ್ಟೇ ಅವಕಾಶ, ಇತರರಿಗೆ ವಿಆರ್‌ಎಸ್‌; ಕೋಮುದ್ವೇಷಕ್ಕೆ ಬಲಿಯಾಯ್ತಾ ಟಿಟಿಡಿ?

Date:

ದಕ್ಷಿಣ ಭಾರತದ ಪ್ರಮುಖ ಮತ್ತು ಶ್ರೀಮಂತ ದೇವಾಲಯಗಳಲ್ಲಿ ಒಂದಾದ ತಿರುಪತಿಯ ತಿರುಮಲ ವೆಂಕಟೇಶ್ವರ ದೇವಸ್ಥಾನದಲ್ಲಿ ಕೆಲಸ ಮಾಡುವವ ಎಲ್ಲರೂ ಹಿಂದುಗಳೇ ಆಗಿಬೇಕು. ಹಿಂದುಯೇತರರಿಗೆ ವಿಆರ್‌ಎಸ್‌ (ವಾಲೆಂಟಿಯರ್ ರಿಟೈರ್ಮೆಂಟ್) ಕೊಟ್ಟು ನಿವೃತ್ತಿ ಹೆಸರಿನಲ್ಲಿ ಹೊರದಬ್ಬಲು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿ ತೀರ್ಮಾನಿಸಿದೆ.

ಇತ್ತೀಚೆಗಷ್ಟೇ ಟಿಟಿಡಿ ಅಧ್ಯಕ್ಷರಾಗಿ ಬಿ.ಆರ್ ನಾಯ್ಡು ನೇಮಕಗೊಂಡಿದ್ದಾರೆ ಅವರ ನೇಮಕದ ಬಳಿಕ, ತಿರುಮಲ ದೇವಾಲಯ ಪದೇ-ಪದೇ ಸುದ್ದಿಗೆ ಗ್ರಾಸವಾಗಿದೆ. ಕೆಲ ದಿನಗಳ ಹಿಂದೆ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡಲಾಗುವ ಲಡ್ಡು ವಿಚಾರ ಭಾರೀ ಸದ್ದು ಮಾಡಿತ್ತು. ಇದೀಗ, ಹಿಂದುಗಳಿಗೆ ಮಾತ್ರ ಕೆಲಸವೆಂಬ ನೀತಿ-ನಿರ್ಧಾರಗಳು ಹೊರಬರುತ್ತಿದೆ. ಈ ನಿರ್ಧಾರವು ಟಿಟಿಡಿ ಕೋಮುವಾದಿ, ಕೋಮುದ್ವೇಷದ ರಾಜಕಾರಣಕ್ಕೆ ತುತ್ತಾಗಿದೆಯೇ ಎಂಬ ಅನುಮಾನವನ್ನೂ ಹುಟ್ಟುಹಾಕಿದೆ. ಆಂಧ್ರಪ್ರದೇಶದ ಆಡಳಿತಾರೂಢ ಟಿಡಿಪಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದು ಈ ಅನುಮಾನಗಳಿಗೆ ಪುಷ್ಠಿ ನೀಡುತ್ತದೆ.

ಶುಕ್ರವಾರ, ಸುದ್ದಿಗಾರರೊಂದಿಗೆ ಮಾತನಾಡಿದ ಟಿಟಿಡಿ ಅಧ್ಯಕ್ಷ ಬಿ.ಆರ್ ನಾಯ್ದು, “ತಿತಿರುಮಲದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಹಿಂದುಗಳಾಗಿರಬೇಕು. ಇತರೆ ಧರ್ಮದ ಸಿಬ್ಬಂದಿಯನ್ನು ಹೇಗೆ ನಿಭಾಯಿಸಬೇಕು? ಅವರನ್ನು ಸರ್ಕಾರದ ಬೇರೆ ಇಲಾಖೆಗಳಿಗೆ ವರ್ಗಾಹಿಸಬೇಕೇ ಅಥವಾ ವಿಆರ್‌ಎಸ್ ನೀಡಬೇಕೇ ಎಂಬುದುರ ಬಗ್ಗೆ ಆಂಧ್ರ ಸರ್ಕಾರದೊಂದಿಗೆ ಚರ್ಚಿಸುತ್ತೇವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಿರುಮಲದಲ್ಲಿ ಕೆಲಸ ಮಾಡಲು ಹಿಂದುಗಳಿಗೆ ಮಾತ್ರ ಅವಕಾಶ ಇರಬೇಕು. ಅದೇ ನನ್ನ ಮೊದಲ ಗುರಿ. ಅದಕ್ಕಾಗಿ ಪ್ರಯತ್ನಿಸುತ್ತೇನೆ” ಎಂದು ನಾಯ್ಡು ಹೇಳಿದ್ದಾರೆ.

ಬಿ ಆರ್ ನಾಯ್ಡು ಅವರು ‘ಹಿಂದು ಭಕ್ತಿ ಚಾನೆಲ್’ ಸೇರಿದಂತೆ ಹಲವು ತೆಲುಗು ವಾಹಿನಿಗಳನ್ನು ನಡೆಸುತ್ತಿದ್ದಾರೆ. ಆರ್‌ಎಸ್‌ಎಸ್‌, ಬಿಜೆಪಿ ಜೊತೆ ನಿಕಟ ಸಂಬಂಧ ಹೊಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...