ʼನ್ಯಾನೋ ಚಿಪ್‌ʼ ವದಂತಿ ಹಬ್ಬಿಸಿದ್ದ ʼಆಜ್‌ ತಕ್‌ʼ ನಿರೂಪಕಿಗೆ ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಪಾಠ

Date:

2 ಸಾವಿರ ಮುಖಬೆಲೆಯ ನೋಟಿನಲ್ಲಿ ಚಿಪ್‌ ಇದೆ ಎಂದಿದ್ದ ಶ್ವೇತಾ ಸಿಂಗ್‌

ಪ್ರಶ್ನೆ ಕೇಳಿದ್ದಕ್ಕೆ ಕೇಸು ಹಾಕ್ತೀನಿ ಎಂದ ʼಆಜ್‌ ತಕ್‌ʼ ವಾಹಿನಿ ನಿರೂಪಕಿ

ಇತ್ತೀಚೆಗೆ ಭಾರತೀಯ ರಿಸರ್ವ್‌ ಬ್ಯಾಂಕ್‌ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಘೋಷಿಸಿತ್ತು. ರಿಸರ್ವ್‌ ಬ್ಯಾಂಕ್‌ನ ಈ ನಡೆಗೆ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಹಿಂಪಡೆಯುವುದೇ ಆಗಿದ್ದರೆ, ಈ ನೋಟುಗಳನ್ನು ಕೇಂದ್ರ ಸರ್ಕಾರ ಚಲಾವಣೆಗೆ ತಂದಿದ್ದಾದರೂ ಯಾಕೆ ಎಂಬ ಚರ್ಚೆ ಶುರುವಾಗಿತ್ತು. ಜೊತೆಗೆ ಈ ಗುಲಾಬಿ ನೋಟುಗಳಲ್ಲಿ ʼನ್ಯಾನೋ ಚಿಪ್‌ʼ ಇದೆ ಎಂದು ಆರಂಭದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ ಕೆಲ ಪತ್ರಕರ್ತರನ್ನು ಕೂಡ ಟ್ರೋಲ್‌ ಮಾಡಲಾಗಿತ್ತು. ಹೀಗೆ ವದಂತಿ ಹಬ್ಬಿಸಿದ್ದ ಪತ್ರಕರ್ತರ ಪೈಕಿ ʼಆಜ್‌ ತಾಕ್‌ʼ ಸುದ್ದಿ ವಾಹಿನಿಯ ನಿರೂಪಕಿ ಶ್ವೇತಾ ಸಿಂಗ್‌ ಕೂಡ ಒಬ್ಬರು. ಈಗ ಪತ್ರಿಕೋದ್ಯಮದ ವಿದ್ಯಾರ್ಥಿಗಳೇ ಸುದ್ದಿಯ ಹೆಸರಲ್ಲಿ ಸುಳ್ಳು ಹರಡಿದ ನಿರೂಪಕಿಯನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತ್ರಿಕೋದ್ಯಮದ ವಿದ್ಯಾರ್ಥಿಗಳು ಶ್ವೇತಾ ಸಿಂಗ್‌ ಅವರನ್ನು ಪ್ರಶ್ನಿಸಿರುವ ವಿಡಿಯೋವನ್ನು ʼಆಲ್ಟ್‌ ನ್ಯೂಸ್‌ʼ ಸಂಸ್ಥಾಪಕ ಮೊಹಮ್ಮದ್‌ ಜುಬೇರ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಎರಡು ನಿಮಿಷಗಳ ವಿಡಿಯೋದಲ್ಲಿ ಯುವಕನೊಬ್ಬ “2 ಸಾವಿರದ ನೋಟಿನಲ್ಲಿ ಚಿಪ್‌ ಇದೆ ಎಂದು ಹೇಳಿದ್ದು ನೀವೇ ಅಲ್ಲವೇ” ಎಂದು ಪ್ರಶ್ನಿಸಿದ್ದಾನೆ. ಆತನ ಪ್ರಶ್ನೆಗೆ ಉತ್ತರಿಸಿರುವ ಶ್ವೇತಾ ಸಿಂಗ್‌, “ನಾನು ಹಾಗೆ ಹೇಳಿಯೇ ಇಲ್ಲ. ಮನಸ್ಸು ಮಾಡಿದರೆ ನಿಮ್ಮ ಮೇಲೆ ಕೇಸು ಹಾಕಬಲ್ಲೆ. ನೀವು 45 ಸೆಕಂಡ್‌ಗಳ ತಿರುಚಿದ ವಿಡಿಯೋವನ್ನು ನೋಡಿದ್ದೀರಿ. ಆದರೆ, ನಾನು 45 ನಿಮಿಷಗಳ ವಿಡಿಯೋದಲ್ಲಿ ವಿವರವಾಗಿ ಮಾತನಾಡಿದ್ದೀನಿ. ಇದು ವಾಟ್ಸಪ್‌ನಲ್ಲಿ ಹರಿದಾಡುತ್ತಿರುವ ಸುದ್ದಿ ಎಂದು ಉಲ್ಲೇಖಿಸಿದ್ದೀನಿ” ಎಂದಿದ್ದಾರೆ.

ಕೇಸು ದಾಖಲಿಸುತ್ತೇನೆ ಎಂದು ಶ್ವೇತಾ ಸಿಂಗ್‌ ಧಮ್ಕಿ ಹಾಕಿದರೂ ಯುವಕ ಹಿಂಜರಿದಿಲ್ಲ. “140 ಕೋಟಿ ಜನತೆಯ ಭವಿಷ್ಯಕ್ಕೆ ಸಂಬಂಧಿಸಿದ ವಿಚಾರದ ಬಗ್ಗೆ ನಿಮಗೆ ಸುಳ್ಳು ಹೇಳಲು ಮನಸ್ಸಾದರೂ ಹೇಗೆ ಬಂತು? ನೋಟಿನಲ್ಲಿ ಚಿಪ್‌ ಇದೆ. ನೋಟಿನ ಕಂತೆ ಭೂಮಿಯ ಕೇಳಗಿದ್ದರೂ ಗೊತ್ತಾಗುತ್ತೆ ಎಂದವರು ನೀವೇ. ನಮ್ಮಂಥ ಯುವಜನತೆ ನಿಮ್ಮನ್ನು ಮಾದರಿ ವ್ಯಕ್ತಿಗಳನ್ನಾಗಿ ಕಾಣಲು ಹೇಗೆ ಸಾಧ್ಯ?” ಎಂದು ತರಾಟೆಗೆ ತೆಗೆದುಕೊಂಡಿದ್ದಾನೆ.

ಶ್ವೇತಾ ಸಿಂಗ್‌, ನಾನು ನೋಟಿನಲ್ಲಿ ಚಿಪ್‌ ಇದೆ ಎಂದು ಹೇಳಿಯೇ ಇಲ್ಲ ಎಂದ ವಿಡಿಯೋ ವೈರಲ್‌ ಆಗುತ್ತಲೇ, ಆಕೆ 2 ಸಾವಿರ ಮುಖಬೆಲೆ ನೋಟಿನ ವಿಶೇಷತೆಯ ಬಗ್ಗೆ ಫುಂಕಾನು ಫುಂಕವಾಗಿ ಮಾತನಾಡಿದ ಹಳೆಯ ವಿಡಿಯೋವನ್ನು ಕೆದಕಿ, ನೆಟ್ಟಿಗರು ಸಾಕ್ಷಿ ಸಮೇತ ಪ್ರಶ್ನೆ ಮಾಡುತ್ತಿದ್ದಾರೆ.

ಗುಲಾಬಿ ನೋಟಿನ ವೈಶಿಷ್ಟ್ಯಗಳ ಬಗ್ಗೆ ವದಂತಿ ಹಬ್ಬಿಸಿದ್ದು ಶ್ವೇತಾ ಸಿಂಗ್‌ ಮಾತ್ರವಲ್ಲ, ʼಝೀ ನ್ಯೂಸ್‌ʼನ ಸುಧೀರ್‌ ಚೌಧರಿ, ಕನ್ನಡದ ಪಬ್ಲಿಕ್‌ ಟಿ.ವಿ ಮುಖ್ಯಸ್ಥ ಹೆಚ್‌. ಆರ್‌ ರಂಗನಾಥ್‌ ಮುಂತಾದವರು ನೋಟಿನಲ್ಲಿ ʼನ್ಯಾನೋ ಚಿಪ್‌ʼ ಇದೆ ಎಂದು ವದಂತಿ ಹಬ್ಬಿಸಿ ಕೊನೆಯಲ್ಲಿ ಟ್ರೋಲ್‌ ಪಡೆಗೆ ಆಹಾರವಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...