ಸುಪ್ರೀಂ ಕೋರ್ಟ್‌ನ ಮುಂದಿನ ಸಿಜೆಐ ಬಿ ಆರ್ ಗವಾಯಿಯವರ ವಿಶೇಷತೆಗಳೇನು?

Date:

ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ(ಸಿಜೆಐ) ಭೂಷಣ್ ರಾಮಕೃಷ್ಣ ಗವಾಯಿಯವರ ಹೆಸರನ್ನು ಹಾಲಿ ಸಿಜೆಐ ಸಂಜೀವ್ ಖನ್ನಾ ಅವರು ಕೇಂದ್ರ ಸರ್ಕಾರಕ್ಕೆ ಬುಧವಾರ ಶಿಫಾರಸು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಭೂಷಣ್ ರಾಮಕೃಷ್ಣ ಗವಾಯಿಯವರು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಮೇ 14ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪ್ರಸ್ತುತ ಸಿಜೆಐ ಖನ್ನಾ ಅವರ ನಿವೃತ್ತಿಯ ನಂತರ ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಲಿರುವ ಗವಾಯಿಯವರು ಎರಡನೇ ದಲಿತ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. 2019ರ ಮೇ 24ರಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದ ಇವರಿಗೆ ಸಿಜೆಐ ಆಗಿ ಆರು ತಿಂಗಳಿಗೂ ಹೆಚ್ಚಿನ ಅವಧಿ ಸಿಗಲಿದ್ದು, ಈ ವರ್ಷದ ನವೆಂಬರ್‌ 23ರಂದು ನಿವೃತ್ತರಾಗಲಿದ್ದಾರೆ.

ನ್ಯಾಯಮೂರ್ತಿ ಖನ್ನಾ ಅವರು ಮೇ 13ರಂದು ನಿವೃತ್ತರಾಗಲಿದ್ದಾರೆ. ವಿಶೇಷವೆಂದರೆ, ನ್ಯಾಯಮೂರ್ತಿ ಬಿ ಆರ್ ಗವಾಯಿಯವರೂ ಕೂಡ ಈ ವರ್ಷ ನಿವೃತ್ತರಾಗಲಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸು 65 ವರ್ಷಗಳು. ಹಾಗಾಗಿ ಗವಾಯಿಯವರು ನವೆಂಬರ್ 23ರವರೆಗೆ ಅಧಿಕಾರದಲ್ಲಿ ಇರಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಮೂರ್ತಿ ಬಿ ಆರ್ ಗವಾಯಿ ಯಾರು?

ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರು 1960ರ ನವೆಂಬರ್ 24ರಂದು ಅಮರಾವತಿಯ ದಲಿತ ಕುಟುಂಬದಲ್ಲಿ ಜನಿಸಿದರು. ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರು 2007ರಲ್ಲಿ ನೇಮಕಗೊಂಡ ನಂತರ ನ್ಯಾಯಮೂರ್ತಿ ಗವಾಯಿ ಈ ಹುದ್ದೆಯನ್ನು ಅಲಂಕರಿಸಿದ ಎರಡನೇ ದಲಿತ ಮುಖ್ಯ ನ್ಯಾಯಮೂರ್ತಿಗಳಾಗಿದ್ದಾರೆ.

ಅವರ ಕಾನೂನು ವೃತ್ತಿಜೀವನದ ಒಂದು ನೋಟ

ಗವಾಯಿಯವರು 1985ರ ಮಾರ್ಚ್ 16ರಂದು ವಕೀಲಿ ವೃತ್ತಿಗೆ ಸೇರಿದರು. ಮಾಜಿ ಅಡ್ವೊಕೇಟ್ ಜನರಲ್ ಮತ್ತು ಹೈಕೋರ್ಟ್ ನ್ಯಾಯಾಧೀಶ ದಿವಂಗತ ರಾಜಾ ಎಸ್ ಭೋಂಸ್ಲೆ ಅವರೊಂದಿಗೆ 1987ರವರೆಗೆ ಕೆಲಸ ಮಾಡಿದರು. 1987ರಿಂದ 1990ರವರೆಗೆ ಬಾಂಬೆ ಹೈಕೋರ್ಟ್‌ನಲ್ಲಿ ಸ್ವತಂತ್ರವಾಗಿ ಅಭ್ಯಾಸ ಮಾಡಿದರು. 1990ರ ನಂತರ, ಮುಖ್ಯವಾಗಿ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದ ಎದುರು ಸಾಂವಿಧಾನಿಕ ಕಾನೂನು ಮತ್ತು ಆಡಳಿತಾತ್ಮಕ ಕಾನೂನಿನಲ್ಲಿ ಅಭ್ಯಾಸ ಮಾಡಿದರು.

ಬಿ ಆರ್ ಗವಾಯಿಯವರು ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್, ಅಮರಾವತಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಅಮರಾವತಿ ವಿಶ್ವವಿದ್ಯಾಲಯದ ಸ್ಥಾಯಿ ಸಲಹೆಗಾರರಾಗಿದ್ದರು.

ಸಿಕಾಮ್(SICOM), ಡಿಸಿವಿಎಲ್(DCVL) ಮತ್ತು ವಿದರ್ಭ ಪ್ರದೇಶದ ವಿವಿಧ ಮುನ್ಸಿಪಲ್ ಕೌನ್ಸಿಲ್‌ಗಳಂತಹ ವಿವಿಧ ಸ್ವಾಯತ್ತ ಸಂಸ್ಥೆಗಳು ಮತ್ತು ನಿಗಮಗಳಿಗೆ ಗವಾಯಿ ನಿಯಮಿತವಾಗಿ ಹಾಜರಾಗಿದ್ದರು. 1992ರ ಆಗಸ್ಟ್‌ನಿಂದ ಜುಲೈ 1993ರವರೆಗೆ ಬಾಂಬೆ ಹೈಕೋರ್ಟ್ ನಾಗ್ಪುರ ಪೀಠದಲ್ಲಿ ಸಹಾಯಕ ಸರ್ಕಾರಿ ವಕೀಲರು ಮತ್ತು ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಕಗೊಂಡರು. 2003ರಲ್ಲಿ ಅವರನ್ನು ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಿಸಲಾಯಿತು. 2005ರ ನವೆಂಬರ್ 12ರಂದು ಬಾಂಬೆ ಹೈಕೋರ್ಟ್‌ನ ಖಾಯಂ ನ್ಯಾಯಾಧೀಶರಾದರು.

ನ್ಯಾಯಮೂರ್ತಿ ಗವಾಯಿ ಅವರು ಮುಂಬೈ ಹೈಕೋರ್ಟ್‌ನ ಪ್ರಧಾನ ಸ್ಥಾನದಲ್ಲಿ ಹಾಗೂ ನಾಗ್ಪುರ, ಔರಂಗಾಬಾದ್ ಮತ್ತು ಪಣಜಿಯ ಪೀಠಗಳಲ್ಲಿಯೂ ಸೇವೆ ಸಲ್ಲಿಸಿದ್ದರು. ಬಳಿಕ ಅವರನ್ನು 2019ರ ಮೇ 24ರಂದು ಸುಪ್ರೀಂ ಕೋರ್ಟ್‌ಗೆ ಬಡ್ತಿ ನೀಡಲಾಯಿತು.

ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಪ್ರಮುಖ ತೀರ್ಪುಗಳು

ನ್ಯಾಯಮೂರ್ತಿ ಬಿ ಆರ್ ಗವಾಯಿಯವರು ತಮ್ಮ ಅಧಿಕಾರಾವಧಿಯಲ್ಲಿ ಹಲವಾರು ಹೆಗ್ಗುರುತು ತೀರ್ಪುಗಳಿಗೆ ಕೊಡುಗೆ ನೀಡಿದ್ದಾರೆ.

ಅಪನಗದೀಕರಣ(ನೋಟು ರದ್ದತಿ) ಪ್ರಕರಣ (2023): ಕೇಂದ್ರ ಸರ್ಕಾರದ 2016ರ ಅಪನಗದೀಕರಣ ನಿರ್ಧಾರದ ಕಾನೂನುಬದ್ಧತೆಯನ್ನು ಎತ್ತಿಹಿಡಿದ ಬಹುಮತದ ತೀರ್ಪನ್ನು ನ್ಯಾಯಮೂರ್ತಿ ಗವಾಯಿ ಒಪ್ಪಿಕೊಂಡರು. ಅದನ್ನು ಸಾಂವಿಧಾನಿಕ ಮಿತಿಯೊಳಗೆ ಜಾರಿಗೆ ತರಲಾಗಿದೆ ಎಂದು ದೃಢಪಡಿಸಿದರು.

ಆರ್ಟಿಕಲ್ 370 ತೀರ್ಪು: ಐದು ನ್ಯಾಯಾಧೀಶರ ಸಂವಿಧಾನ ಪೀಠದ ಸದಸ್ಯರಾಗಿ, ಬಿ ಆರ್ ಗವಾಯಿಯವರು 370ನೇ ವಿಧಿಯನ್ನು ರದ್ದುಪಡಿಸುವುದನ್ನು ದೃಢೀಕರಿಸಿದ ಐತಿಹಾಸಿಕ ತೀರ್ಪಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಆ ಮೂಲಕ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡರು. ಜತೆಗೆ ಪ್ರದೇಶದ ಮರುಸಂಘಟನೆಗೆ ಅನುಕೂಲ ಮಾಡಿಕೊಟ್ಟರು.

ಒಳಮೀಸಲಾತಿ ತೀರ್ಪು : ಮೀಸಲಾತಿಗಾಗಿ ಪರಿಶಿಷ್ಟ ಜಾತಿಗಳ ಒಳವರ್ಗೀಕರಣದ ಸಾಂವಿಧಾನಿಕ ಅಧಿಕಾರವು ರಾಜ್ಯ ಸರ್ಕಾರಗಳಿಗೆ ಇದೆ ಎಂದು ಬಹುಮತದ ಆಧಾರದಲ್ಲಿ ತೀರ್ಪು ನೀಡಿದ ಏಳು ನ್ಯಾಯಮೂರ್ತಿಗಳ ಪೀಠದಲ್ಲಿ ಗವಾಯಿಯವರೂ ಒಬ್ಬರಾಗಿದ್ದರು.

ಆಸ್ತಿ ತೆರವಿಗೆ ನೋಟಿಸ್‌ ಪ್ರಕ್ರಿಯೆ : ಗವಾಯಿ ನೇತೃತ್ವದ ನ್ಯಾಯಪೀಠವು ಇಡೀ ದೇಶಕ್ಕೆ ಅನ್ವಯವಾಗುವ ಮಾರ್ಗಸೂಚಿಯೊಂದನ್ನು ಹೊರಡಿಸಿ ಕಾರಣ ಕೇಳಿ ನೋಟಿಸ್‌ ಕೊಡದೆ ಯಾವ ಆಸ್ತಿಯನ್ನೂ ಧ್ವಂಸಗೊಳಿಸುವಂತಿಲ್ಲವೆಂದು ಹೇಳಿತು. ಸಂಬಂಧಪಟ್ಟ ವ್ಯಕ್ತಿಗೆ ನೋಟಿಸ್‌ಗೆ ಪ್ರತಿಕ್ರಿಯೆ ನೀಡಲು 15 ದಿನ ಕಾಲಾವಕಾಶ ಕೊಡಬೇಕು ಎಂದು ಹೇಳಿತ್ತು.

ಚುನಾವಣಾ ಬಾಂಡ್‌ : ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಪಡಿಸಿದ ಸಂವಿಧಾನ ಪೀಠದಲ್ಲಿ ನ್ಯಾಯಮೂರ್ತಿ ಗವಾಯಿಯವರು ಇದ್ದರು.

“ದಲಿತ ಸಮುದಾಯದ ನ್ಯಾಯಾಧೀಶರು ಸುಪ್ರೀಂ ಕೋರ್ಟ್‌ನಲ್ಲಿ ಇರಬೇಕೆಂದು ಕೊಲಿಜಿಯಂ ಬಯಸಿದ್ದರಿಂದ ಎರಡು ವರ್ಷ ಮೊದಲೇ ತಾನು ಸುಪ್ರೀಂ ಕೋರ್ಟ್‌ಗೆ ಪದೋನ್ನತಿ ಪಡೆದೆ” ಎಂದು ನ್ಯಾ. ಗವಾಯಿಯವರು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೇ 5ರ ಮುಂದಿನ ವಿಚಾರಣೆವರೆಗೆ ವಕ್ಫ್ ಕಾಯ್ದೆಗೆ ಯಾವುದೇ ತಿದ್ದುಪಡಿ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್

ಅಮೆರಿಕದ ನ್ಯೂಯಾರ್ಕ್ ಸಿಟಿ ವಕೀಲರ ಸಂಘ(ಎನ್‌ವೈಸಿಬಿ) ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, “ಪರಿಶಿಷ್ಟ ಜಾತಿಗಳಿಗೆ ಪ್ರಾತಿನಿಧ್ಯ ಇರದೇ ಇದ್ದಿದ್ದರೆ, ಬಹುಶಃ ಎರಡು ವರ್ಷಗಳ ನಂತರ ನನಗೆ ಪದೋನ್ನತಿ ದೊರೆಯುತ್ತಿತ್ತು. ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆಯಲು ಕೂಡ ಈ ಅಂಶವೇ ಕಾರಣ. ಆಗ ಹೈಕೋರ್ಟ್‌ನಲ್ಲಿ ದಲಿತ ಸಮುದಾಯವನ್ನು ಪ್ರತಿನಿಧಿಸುವ ನ್ಯಾಯಮೂರ್ತಿಗಳು ಇರಲಿಲ್ಲ” ಎಂದು ತಿಳಿಸಿದರು.

“ಭಾರತೀಯ ಸಂವಿಧಾನ ಹಾಗೂ ಸಮಾಜದಂಚಿನಲ್ಲಿರುವವರಿಗೆ ಸೌಲಭ್ಯ ಒದಗಿಸಬೇಕು ಹಾಗೂ ಎಲ್ಲರನ್ನೂ ಒಳಗೊಳ್ಳಬೇಕೆಂಬ ಅದರ ನಿಲುವಿನಿಂದಾಗಿ ತಾನು ಸುಪ್ರೀಂ ಕೋರ್ಟ್‌ನಲ್ಲಿ ಸೇವೆ ಸಲ್ಲಿಸಲು ಸಾಧ್ಯವಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...