ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ಹಂತಕರು ದೋಷಿ ಎಂದು ದೆಹಲಿ ಹೈಕೋರ್ಟ್ ತೀರ್ಪು

Date:

2008 ರಲ್ಲಿ ನಡೆದ ದೆಹಲಿ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆಯ ಎಲ್ಲ ಐವರು ಆರೋಪಿಗಳನ್ನು ದೆಹಲಿ ಹೈಕೋರ್ಟ್ ದೋಷಿಗಳು ಎಂದು ತೀರ್ಪು ನೀಡಿದೆ.

ಹೆಡ್‌ಲೈನ್ಸ್ ಟುಡೆ ಸುದ್ದಿ ವಾಹಿನಿಯಲ್ಲಿ ಪತ್ರಕರ್ತರಾಗಿದ್ದ ಸೌಮ್ಯಾ ವಿಶ್ವನಾಥನ್ ಅವರು 2008 ರ ಸೆಪ್ಟೆಂಬರ್‌ನಲ್ಲಿ ಕಚೇರಿಯಿಂದ ಮನೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಹಂತಕರು ಗುಂಡು ಹಾರಿಸಿ ಕೊಂದಿದ್ದರು.

2008ರಲ್ಲಿ 25 ವರ್ಷದ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಅಜಯ್ ಕುಮಾರ್, ಬಲ್ಜೀತ್ ಮಲಿಕ್ ಮತ್ತು ಅಜಯ್ ಸೇಥಿ ಅವರನ್ನು ದೆಹಲಿಯ ಸಾಕೇತ್ ನ್ಯಾಯಾಲಯ ದೋಷಿಗಳೆಂದು ತೀರ್ಪು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಸೌಮ್ಯ ವಿಶ್ವನಾಥನ್ ಅವರ ತಾಯಿ, “ನಮ್ಮ ಮಗಳು ಮೃತಪಟ್ಟಿದ್ದಾಳೆ. ಈ ತೀರ್ಪಿನಿಂದ ಇತರರಿಗೆ ಪಾಠವಾಗುತ್ತದೆ. ಇಲ್ಲದಿದ್ದರೆ ಅಪರಾಧಿಗಳಿಗೆ ಬೆಂಬಲ ಸಿಕ್ಕಂತಾಗುತ್ತದೆ. ಈ ರೀತಿಯ ತೀರ್ಪಿನಿಂದ ಅಪರಾಧಿಗಳ ಒಂದು ಸಮೂಹವಾದರೂ ಕ್ರೌರ್ಯ ನಡೆಸಲು ಹಿಂಜರಿಯುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಅನ್‌ವೆರಿಫೈಡ್ ಟ್ವಿಟರ್ ಬಳಕೆದಾರರಿಗೆ ಶಾಕಿಂಗ್ ಸುದ್ದಿ: ಪೋಸ್ಟ್, ಲೈಕ್, ರೀಟ್ವಿಟ್ಗೂ ಇನ್ಮುಂದೆ ಹಣ ಪಾವತಿಸಬೇಕು !

ಯುವ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಅವರು ಸೆಪ್ಟೆಂಬರ್ 30, 2008 ರಂದು ದಕ್ಷಿಣ ದೆಹಲಿಯ ವಸಂತ್ ಕುಂಜ್ ಪ್ರದೇಶದಲ್ಲಿ ತಮ್ಮ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದರು. ಫೋರೆನ್ಸಿಕ್ ವರದಿಗಳು ತಲೆಗೆ ಗುಂಡೇಟಿನಿಂದ ಸಾವಿಗೆ ಕಾರಣವನ್ನು ಬಹಿರಂಗಪಡಿಸುವವರೆಗೂ ಕಾರು ಅಪಘಾತ ಎಂದು ನಂಬಲಾಗಿತ್ತು.

ಸಿಸಿಟಿವಿ ದೃಶ್ಯಗಳು ಸೌಮ್ಯ ವಿಶ್ವನಾಥನ್ ಅವರ ಹತ್ಯೆಯ ಬಗ್ಗೆ ಹೆಚ್ಚಿನ ಸುಳಿವು ನೀಡಿದವು. ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಇಬ್ಬರು ಆರೋಪಿಗಳಾದ ರವಿ ಕಪೂರ್ ಮತ್ತು ಅಮಿತ್ ಶುಕ್ಲಾ ಅವರು ಹೆಚ್ಚಿನ ವಿಚಾರಣೆಯ ಸಮಯದಲ್ಲಿ ಹತ್ಯೆಯನ್ನು ಒಪ್ಪಿಕೊಂಡಿದ್ದರು.

ಆರೋಪ ಪಟ್ಟಿಯನ್ನು ಜೂನ್ 2010 ರಲ್ಲಿ ಸಲ್ಲಿಸಲಾಯಿತು, ನಂತರ ನವೆಂಬರ್ 2010 ರಲ್ಲಿ ವಿಚಾರಣೆ ಪ್ರಾರಂಭವಾಯಿತು. ಜುಲೈ 2016 ರಲ್ಲಿ ವಿಚಾರಣೆ ಮುಕ್ತಾಯವಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...