ತೆಲಂಗಾಣದ ಬಿಆರ್ಎಸ್ ಪಕ್ಷದಿಂದ ಅಮಾನತುಗೊಂಡಿದ್ದ ಕೆ.ಸಿ. ಚಂದ್ರಶೇಖರ ರಾವ್ ಅವರ ಪುತ್ರಿ ಕೆ. ಕವಿತಾ ಅವರು ಪಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ.
ದೆಹಲಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಆರ್ಎಸ್ಗೆ ರಾಜೀನಾಮೆ ನೀಡುತ್ತಿದ್ದೇನೆ. ಮತ್ತು ಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದು, ಪತ್ರವನ್ನು ಪರಿಷತ್ತಿನ ಸ್ಪೀಕರ್ಗೆ ಸಲ್ಲಿಸುತ್ತಿರುವೆ” ಎಂದು ಹೇಳಿದ್ದಾರೆ.
ಅಧ್ಯಕ್ಷ ಕೆ. ಚಂದ್ರಶೇಖರ್ ರಾವ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಕವಿತಾ ಅವರನ್ನು ಸೋಮವಾರ ಅಮಾನತು ಮಾಡಿದ್ದರು. ಕವಿತಾ ಅವರ ಇತ್ತೀಚೆಗೆ ನಡೆ ಮತ್ತು ಅವರ ಪಕ್ಷ ವಿರೋಧಿ ಚಟುವಟಿಕೆಗಳು ಬಿಆರ್ಎಸ್ಗೆ ಇರಿಸುಮುರಿಸು ಉಂಟು ಮಾಡಿದ್ದವು. ಇದರಿಂದಾಗಿ ಅವರನ್ನು ಅಮಾನತು ಮಾಡುವ ನಿರ್ಧಾರವನ್ನು ಪಕ್ಷ ತೆಗೆದುಕೊಂಡಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಟಿ.ರವೀಂದರ್ ರಾವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.





