ಚೆನ್ನೈ | ವಿದ್ಯಾರ್ಥಿಗಳ ಪ್ರತಿಭಟನೆ; ಕಲಾಕ್ಷೇತ್ರ ಸ್ಥಗಿತ

Date:

  • 2 ದಿನದಲ್ಲಿ ಕಲಾಕ್ಷೇತ್ರದ ಹಾಸ್ಟೆಲ್ ತೆರವಿಗೆ ಸೂಚನೆ
  • ಪ್ರತಿಭಟನೆ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಿಕೆ

ಲೈಂಗಿಕ ಕಿರುಕುಳ ನೀಡುತ್ತಿದ್ದ ನೃತ್ಯ ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚೆನ್ನೈನ ಕಲಾಕ್ಷೇತ್ರ ಫೌಂಡೇಷನ್ ಶಿಕ್ಷಣ ಸಂಸ್ಥೆಯ ಹಲವು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಗುರುವಾರ (ಮಾರ್ಚ್ 30) ಮೌನ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ನಂತರ ವಿದ್ಯಾಸಂಸ್ಥೆಯನ್ನು ಮುಚ್ಚಲಾಗಿದೆ. ಪ್ರತಿಭಟನೆಯ ಗಂಟೆಗಳ ನಂತರ ಕಲಾಕ್ಷೇತ್ರ ಮುಚ್ಚಲಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ವಸತಿಗೃಹಗಳನ್ನು (ಹಾಸ್ಟೆಲ್) ತೆರವುಗೊಳಿಸುವಂತೆ ಕಲಾಕ್ಷೇತ್ರ ಸೂಚಿಸಿದೆ.

ಲಲಿತ ಕಲೆಯ ರುಕ್ಮಿಣಿ ದೇವಿ ಕಾಲೇಜು (ಆರ್‌ಡಿಸಿಎಫ್ಎ) ಮಾರ್ಚ್ 30 ಸಂಜೆ 5.15ರಿಂದ ಏಪ್ರಿಲ್ 6ವರೆಗೆ ಸ್ಥಗಿತಗೊಳ್ಳಲಿದೆ ಎಂದು ಕಲಾಕ್ಷೇತ್ರ ಸುತ್ತೋಲೆ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಶಿಕ್ಷಕನ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲು ಆಗ್ರಹಿಸಿ ಕಾಲೇಜಿನ ಆವರಣದಲ್ಲಿರುವ ಆಲದ ಮರದ ಕೆಳಗೆ ವಿದ್ಯಾರ್ಥಿಗಳು ಗುರುವಾರ ಬೆಳಿಗ್ಗೆಯಿಂದ ಮೌನ ಪ್ರತಿಭಟನೆ ನಡೆಸಿದ್ದಾರೆ. ಸಂಜೆಯ ನಂತರ ಕಾಲೇಜಿನಿಂದ ತಿರುವನ್ಮಯೂರ್ ರಸ್ತೆಯವರೆಗೆ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕಲಾಕ್ಷೇತ್ರದ ನಿರ್ದೇಶಕರಾದ ರೇವತಿ ರಾಮಚಂದ್ರನ್ ಅವರು ಪ್ರತಿಭಟನೆ ಕೈಬಿಡುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದರು. ಆದರೆ ಆಡಳಿತ ಮಂಡಳಿ ವಿಷಯವನ್ನು ನಿರ್ವಹಿಸುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರು ವಿದ್ಯಾರ್ಥಿನಿಯರ ಸಮಸ್ಯೆ ಆಲಿಸಲು ಬಂದಾಗ ಅವರೊಂದಿಗೆ ಮಾತನಾಡುವುದಕ್ಕೂ ಸೂಕ್ತ ಅವಕಾಶ ಕಲ್ಪಿಸಲಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

“ತಕ್ಷಣದಿಂದ ಅನ್ವಯವಾಗುವಂತೆ ವಿದ್ಯಾರ್ಥಿಗಳು ಎರಡು ದಿನಗಳಲ್ಲಿ ವಸತಿಗೃಹ ತೆರವುಗೊಳಿಸಲು ಮನವಿ ಮಾಡಲಾಗಿದೆ. ಈ ದಿನಗಳಲ್ಲಿನ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಹೊಸ ದಿನಾಂಕಗಳನ್ನು ಶೀಘ್ರ ಪ್ರಕಟಿಸಲಾಗುವುದು” ಎಂದು ಕಾಲೇಜಿನ ಪ್ರಾಂಶುಪಾಲ ಪಕಲಾ ರಾಮ್ದಾಸ್ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಕಲಾಕ್ಷೇತ್ರ ಆವರಣದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವಿಡಿಯೋಗಳನ್ನು ನೃತ್ಯಪಟು ಹಾಗೂ ಬರಹಗಾರ್ತಿ ನೃತ್ಯಾ ಪಿಳ್ಳೈ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕಲಾಕ್ಷೇತ್ರ ತೆರವುಗೊಳಿಸುವಂತೆ ಸೂಚನೆ ನೀಡಿರುವುದಕ್ಕೆ ವಿದ್ಯಾರ್ಥಿಗಳು ಅಸಮಾಧಾನಗೊಂಡಿದ್ದಾರೆ ಎಂದು ಬರೆದಿದ್ದಾರೆ.

ವಿದ್ಯಾರ್ಥಿಗಳು ಕಲಾಕ್ಷೇತ್ರದ ಆವರಣದಲ್ಲಿ ಜಮಾಯಿಸಿ ಪೊಲೀಸರ ಸುಪರ್ದಿಯಲ್ಲಿ ಪ್ರತಿಭಟನೆ ನಡೆಸಿದರು. ಅನೇಕ ಪೊಲೀಸ್ ವಾಹನಗಳು ಅಲ್ಲಿದ್ದವು. ಈ ಕುರಿತ ಫೋಟೋಗಳು ಎಲ್ಲೆಡೆ ಹರಿದಾಡಿವೆ. ಪೊಲೀಸರು ವಿದ್ಯಾರ್ಥಿಗಳ ಬೇಡಿಕೆಗಳನ್ನು ಆಲಿಸಲು ಮುಂದಾಗಿದ್ದಾರೆ.

ಕಲಾಕ್ಷೇತ್ರದ ನಾಲ್ವರು ಅಧ್ಯಾಪಕರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿರುವ ವಿದ್ಯಾರ್ಥಿಗಳು, ಗುರುವಾರ ಬೆಳಿಗ್ಗೆಯಿಂದ ಪ್ರತಿಭಟನೆ ನಡೆಸಿದರು. ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿರುವ ವಿದ್ಯಾರ್ಥಿಗಳು, ಹರಿ ಪದ್ಮನ್ ಎಂಬ ವ್ಯಕ್ತಿಯನ್ನು ಆರೋಪಿಯನ್ನಾಗಿ ಹೆಸರಿಸಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳು ಕಲಾಕ್ಷೇತ್ರದ ಆರು ಸಿಬ್ಬಂದಿಯನ್ನು ಹೆಸರಿಸಿದ್ದಾರೆ. ಆರೋಪಿ ಕಾಲೇಜು ಸಿಬ್ಬಂದಿ ಹರಿ ಪದ್ಮನ್ ಬೆಳಗಿನ ಪ್ರಾರ್ಥನೆ ವೇಳೆ ಕಾಲೇಜು ಆವರಣಕ್ಕೆ ಆಗಮಿಸಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬಾಂಬೆ ಐಐಟಿ ದಲಿತ ವಿದ್ಯಾರ್ಥಿ ದರ್ಶನ್ ತಂದೆಗೆ ಪೊಲೀಸರಿಂದ ಕಿರುಕುಳ; ಮಹಾರಾಷ್ಟ್ರ ಸಿಎಂಗೆ ಪತ್ರ

ಹರಿ ಪದ್ಮನ್ ಹಾಗೂ ಇತರ ಮೂವರು ಅಧ್ಯಾಪಕರ ವಿರುದ್ಧ ಆರೋಪಗಳ ಹೊರತಾಗಿಯೂ ಕ್ರಮ ಕೈಗೊಳ್ಳದ ಕಲಾಕ್ಷೇತ್ರ ವಿದ್ಯಾ ಸಂಸ್ಥೆಯ ನಿಷ್ಕ್ರಿಯತೆ ಖಂಡಿಸಿ ಪ್ರತಿಭಟನಾ ರೂಪದಲ್ಲಿ, ಬೆಳಿಗ್ಗೆ 8.30ಕ್ಕೆ ತಪೋವನದ ಆಲದ ಮರದ ಕೆಳಗೆ ನಿತ್ಯವೂ ನಡೆಯುತ್ತಿದ್ದ ಧ್ಯಾನ ಹಾಗೂ ಪ್ರಾರ್ಥನಾ ಸಭೆಯನ್ನು ವಿದ್ಯಾರ್ಥಿಗಳು ಬಹಿಷ್ಕರಿಸಿದ್ದಾರೆ.

ಆರೋಪಿಗಳನ್ನು ಕೆಲಸದಿಂದ ಅಮಾನತುಗೊಳಿಸಿ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಕಲಾಕ್ಷೇತ್ರದ ಆವರಣವನ್ನು ಭೀತಿರಹಿತ ಸುರಕ್ಷಿತ ವಾತಾವರಣವಾಗಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...