ಪ್ರಸಾದ ವಿಚಾರಕ್ಕೆ ಗಲಾಟೆ; ದೇವಾಲಯ ಸೇವಕನನ್ನು ಹೊಡೆದು ಕೊಂದ ದುರುಳರು

Date:

ಪ್ರಸಾದ ವಿನಿಯೋಗದ ವಿಚಾರವಾಗಿ ಆರಂಭವಾದ ಜಗಳವು ಹಿಂಸಾಚಾರಕ್ಕೆ ತಿರುಗಿದ್ದು, ದೇವಾಲಯದ ಸೇವಕನನ್ನು ಗುಂಪೊಂದು ಹೊಡೆದು ಕೊಂದಿರುವ ಘಟನೆ ದೆಹಲಿಯ ಕಲ್ಕಾಜಿ ಮಂದಿರದಲ್ಲಿ ನಡೆದಿದೆ. ದುರುಳರ ಗುಂಪಿನಲ್ಲಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ದೇವಾಲಯದಲ್ಲಿ ಸೇವಕನಾಗಿ ಕೆಲಸ ಮಾಡುತ್ತಿದ್ದ ಯೋಗೇಂದ್ರ ಅವರನ್ನು ದುರುಳರ ಗುಂಪು ಕೊಂದಿದೆ ಎಂದು ವರದಿಯಾಗಿದೆ.

ಶುಕ್ರವಾರ ರಾತ್ರಿ ಸುಮಾರು 9:30ರ ವೇಳಗೆ ದೇವಾಲಯದ ಆವರಣದಲ್ಲಿ ಜಗಳ ನಡೆಯುತ್ತಿದೆ ಎಂಧು ಪಿಸಿಆರ್‌ ಕರೆ ಬಂದಿತ್ತು. ಪೊಲೀಸರ ತಂಡ ಸ್ಥಳಕ್ಕೆ ತಲುಪಿದಾಗ ಯೋಗೇಂದ್ರ ಅವರು ನಿತ್ರಾಣರಾಗಿ ಬಿದ್ದಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅವರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇವಾಲಯಕ್ಕೆ ಬಂದಿದ್ದ ಐದಾರು ಆರೋಪಿಗಳ ಗುಂಪು ಯೋಗೇಂದ್ರ ಸಿಂಗ್ ಅವರ ಬಳಿ ಚುನ್ನಿ ಪ್ರಸಾದಕ್ಕಾಗಿ ಬೇಡಿಕೆ ಇಟ್ಟಿದೆ. ಆದರೆ, ಪ್ರಸಾದ ಇಲ್ಲವೆಂದು ಯೋಗೇಂದ್ರ ಹೇಳಿದ್ದಾರೆ. ಬಳಿಕ, ಗುಂಪು ಯೋಗೇಂದ್ರರೊಂದಿಗೆ ಜಗಳ ನಡೆಸಿದ್ದು, ಅವರ ಮೇಲೆ ಕೋಲುಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಆರೋಪಿಗಳಲ್ಲಿ ಒಬ್ಬನಾದ ದಕ್ಷಿಣಪುರಿ ನಿವಾಸಿ ಅತುಲ್ ಪಾಂಡೆ (30) ಅವರನ್ನು ಸಾರ್ವಜನಿಕರು ಸ್ಥಳದಲ್ಲೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಶನಿವಾರ ಸಂಜೆ – ತುಘಲಕಾಬಾದ್ ನಿವಾಸಿಗಳಾದ ಮೋಹನ್ (19) ಮತ್ತು ಕುಲದೀಪ್ ಬಿಧುರಿ (20), ಗೋವಿಂದಪುರಿ ನಿವಾಸಿ ನಿತಿನ್ ಪಾಂಡೆ (26) ಹಾಗೂ ಆತ ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಆತನ ತಂದೆ ಅನಿಲ್ ಕುಮಾರ್ (55) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಯ ಆಡಳಿತಾರೂಢ ಬಿಜೆಪಿಯನ್ನು ಎಎಪಿ ತರಾಟೆಗೆ ತೆಗೆದುಕೊಂಡಿದೆ. ಎಎಪಿ ನಾಯಕಿ, ಕಲ್ಕಾಜಿ ಶಾಸಕಿ ಅತಿಶಿ ಅವರು ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ಪತ್ರ ಬರೆದಿದ್ದು, “ಬಿಜೆಪಿ ಆಡಳಿತದಲ್ಲಿ ದೆಹಲಿಯು ಅಪರಾಧ, ಸುಲಿಗೆ ಹಾಗೂ ಗ್ಯಾಂಗ್ ವಾರ್‌ಗಳ ರಾಜಧಾನಿಯಾಗಿ ಮಾರ್ಪಟ್ಟಿದೆ. ದೆಹಲಿಯ ನಿವಾಸಿಗಳು ಇನ್ನು ಮುಂದೆ ತಮ್ಮ ಮನೆಗಳು, ಮಾರುಕಟ್ಟೆಗಳು ಅಥವಾ ಪೂಜಾ ಸ್ಥಳಗಳಲ್ಲಿ ಸುರಕ್ಷಿತವಾಗಿರಲು ಸಾಧ್ಯವಾಗುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್‌ ಅವರು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದು, “ಕಲ್ಕಾಜಿ ದೇವಾಲಯದಲ್ಲಿ ಸೇವಕನನ್ನು ಕ್ರೂರವಾಗಿ ಕೊಲ್ಲುವ ಮೊದಲು ಈ ದುಷ್ಕರ್ಮಿಗಳ ಕೈಗಳು ನಡುಗಲಿಲ್ಲವೇ? ಇದು ಕಾನೂನು ಮತ್ತು ಸುವ್ಯವಸ್ಥೆಯ ವೈಫಲ್ಯವಲ್ಲದಿದ್ದರೆ, ಮತ್ತೇನು? ಬಿಜೆಪಿಯ ನಾಲ್ಕು ಎಂಜಿನ್‌ಗಳು ದೆಹಲಿಯನ್ನು ಇಂತಹ ದುಸ್ಥಿತಿಗೆ ತಂದಿವೆ. ಈಗ ದೇವಾಲಯಗಳಲ್ಲಿಯೂ ಸಹ ಇಂತಹ ಘಟನೆಗಳು ನಡೆಯುತ್ತಿವೆ. ದೆಹಲಿಯಲ್ಲಿ ಯಾರಾದರೂ ಸುರಕ್ಷಿತವಾಗಿದ್ದಾರೆಯೇ ಅಥವಾ ಇಲ್ಲವೇ” ಎಂದು ಪ್ರಶ್ನಿಸಿದ್ದಾರೆ.

ಎಎಪಿಯ ಆರೋಪಕ್ಕೆ ಬಿಜೆಪಿ ಅಥವಾ ದೆಹಲಿ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...