ಜೆಎನ್‌ಯುವಿನಲ್ಲಿ ಎಬಿವಿಪಿ ಕ್ಲೀನ್‌ಸ್ವೀಪ್ ಎಂದು ಸುಳ್ಳು ಸುದ್ದಿ ಪ್ರಕಟಿಸಿದ ಸುವರ್ಣ ನ್ಯೂಸ್!

Date:

ದೆಹಲಿಯ ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಘಟಕದ ಚುನಾವಣೆಯಲ್ಲಿ ಎಡ-ವಿದ್ಯಾರ್ಥಿ ಸಂಘಟನೆಗಳು ಭರ್ಜರಿ ಗೆಲುವು ಸಾಧಿಸಿದೆ. ಆದರೆ ಸುವರ್ಣ ನ್ಯೂಸ್ ಮಾತ್ರ ಜೆಎನ್‌ಯುವಿನಲ್ಲಿ ಎಬಿವಿಪಿ ಕ್ಲೀನ್‌ಸ್ವೀಪ್ ಎಂದು ಸುಳ್ಳು ಸುದ್ದಿ ಪ್ರಕಟಿಸಿದೆ. ಇದನ್ನೇ ಹಿಂಬಾಳಿಸಿದ ಕರಾವಳಿಯ ಪತ್ರಿಕೆ ಜಯಕಿರಣ ಕೂಡಾ ಜೆಎನ್‌ಯು ಚುನಾವಣೆಯಲ್ಲಿ ಎಬಿವಿಪಿ ಕ್ಲೀನ್ ಸ್ವೀಪ್ ಎಂದು ಪ್ರಕಟಿಸಿದೆ.

ಮಾರ್ಚ್ 24ರಂದು ಸಂಜೆ 6:54 ಗಂಟೆಗೆ ಸುವರ್ಣ ನ್ಯೂಸ್ “ಜೆಎನ್‌ಯುನಲ್ಲಿ ಚುನಾವಣೆಯಲ್ಲಿ ಎಬಿವಿಪಿ ಕ್ಲೀನ್ ಸ್ವೀಪ್, ಅಧ್ಯಕ್ಷ ಸೇರಿ ನಾಲ್ಕೂ ಸ್ಥಾನದಲ್ಲಿ ಗೆಲುವು!” ಎಂದು ನಕಲಿ ಸುದ್ದಿ ಪ್ರಕಟಿಸಿತ್ತು. ಆದರೆ ಬಳಿಕ ತಡರಾತ್ರಿ 12:48ರ ಸಮಯದಲ್ಲಿ ಈ ಸುದ್ದಿಯನ್ನು ಸಂಪೂರ್ಣವಾಗಿ ಬದಲಾಯಿಸಿದ್ದು “ಜೆಎನ್‌ಯುನಲ್ಲಿ ಚುನಾವಣೆಯಲ್ಲಿ ಲೆಫ್ಟ್ ವಿದ್ಯಾರ್ಥಿ ಘಟಕ ಕ್ಲೀನ್ ಸ್ವೀಪ್, ಎಬಿವಿಪಿಗೆ ಹಿನ್ನಡೆ!” ಎಂದು ಶೀರ್ಷಿಕೆ ಬದಲಾಯಿಸಿದೆ.

ಜೆಎನ್‌ಯು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರಂಭದಲ್ಲಿ ನಕಲಿ ಸುದ್ದಿ ಮಾಡಿದ್ದ ಸುವರ್ಣ ನ್ಯೂಸ್, “ಜೆಎನ್‌ಯು ವಿದ್ಯಾರ್ಥಿ ಘಟಕದ ಫಲಿತಾಂಶ ಹೊರಬಿದ್ದಿದೆ. ಎಡಪಂಥ ವಿಚಾರಧಾರೆಗಳಿಂದಲೇ ಸುದ್ದಿಯಾಗುತ್ತಿದ್ದ ಜವಾಹರ್‌ಲಾಲ್ ನೆಹರೂ ಯೂನಿವರ್ಸಿಟಿಯಲ್ಲಿ ಇದೀಗ ಎಬಿವಿಪಿ ಹೊಸ ಅಧ್ಯಾಯ ಬರೆದಿದೆ. ಜೆಎನ್‌ಯು ವಿದ್ಯಾರ್ಥಿ ಘಟಕದ ಅಧ್ಯಕ್ಷ ಸ್ಥಾನ ಎಬಿವಿಪಿ ಪಾಲಾಗಿದೆ. ಇದರ ಜೊತೆಗೆ ನಾಲ್ಕೂ ಸ್ಥಾನ ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಗೆಲುವು ದಾಖಲಿಸಿದೆ” ಎಂದು ಬರೆದುಕೊಂಡಿತ್ತು. ಈ ಸುದ್ದಿಯನ್ನು ಬಿಜೆಪಿ, ಆರ್‌ಎಸ್‌ಎಸ್ ಬೆಂಬಲಿಗರು ಹಂಚಿಕೊಂಡು, ಹರ್ಷ ವ್ಯಕ್ತಪಡಿಸಿದ್ದರು.

ಚಚ 1
ಬದಲಾವಣೆ ಮಾಡಿರುವ ಸುದ್ದಿಯ ಶೀರ್ಷಿಕೆ

 

ಸುವರ್ಣ ನ್ಯೂಸ್ ಪ್ರಕಟಿಸಿದ್ದ ಸುದ್ದಿಯನ್ನೇ ಅನುಸರಿಸಿದ ಕರಾವಳಿಯ ಸಂಜೆ ದಿನಪತ್ರಿಕೆ ‘ಜಯಕಿರಣ’ ಕೂಡ ಅದನ್ನೇ ಸೋಮವಾರ ಬೆಳಗ್ಗೆ ಮುಖಪುಟದಲ್ಲಿ ಪ್ರಕಟಿಸಿದೆ.

ಜಕ
ಜಯಕಿರಣ ಪತ್ರಿಕೆಯ ಮಾ.25ರ ಮುಖಪುಟ

4 ವರ್ಷಗಳ ಬಳಿಕ ಜವಾಹರ್‌ಲಾಲ್ ನೆಹರೂ ವಿದ್ಯಾರ್ಥಿ ಘಟಕ ಚುನಾವಣೆ ನಡೆದಿದ್ದು ಶೇಕಡ 73ರಷ್ಟು ಮತದಾನವಾಗಿದೆ. 12 ವರ್ಷಗಳಲ್ಲೇ ಗರಿಷ್ಠ ಮತದಾನ ದಾಖಲಾಗಿದ್ದು 7,700 ವಿದ್ಯಾರ್ಥಿಗಳು ತಮ್ಮ ಹಕ್ಕು ಚಲಾಯಿಸಿದ್ದರು. ಎಡ-ವಿದ್ಯಾರ್ಥಿ ಸಂಘಟನೆಗಳು ಒಕ್ಕೂಟ (AISA, SFI, DSF ಮತ್ತು AISF) ಮತ್ತು BAPSA ವಿದ್ಯಾರ್ಥಿ ಸಂಘಟನೆ ವಿಜಯಶಾಲಿಯಾಗಿವೆ.

ಇದನ್ನು ಓದಿದ್ದೀರಾ?  ಜೆಎನ್‌ಯು| ಮೂರು ದಶಕಗಳ ಬಳಿಕ ದಲಿತ ವಿದ್ಯಾರ್ಥಿಗೆ ಅಧ್ಯಕ್ಷಗಿರಿ

ಸುಮಾರು 30 ವರ್ಷಗಳ ಬಳಿಕ ಜೆಎನ್‌ಯುನಲ್ಲಿ ದಲಿತ ವಿದ್ಯಾರ್ಥಿ ಅಧ್ಯಕ್ಷರಾಗಿದ್ದಾರೆ. 1996-97ರಲ್ಲಿ ದಲಿತ ಮುಖಂಡ ಬಾಟಿ ಲಾಲ್ ಬೈರ್ವಾ ಜೆಎನ್‌ಯುನಲ್ಲಿ ಅಧ್ಯಕ್ಷರಾಗಿದ್ದು, ಅದಾದ ಬಳಿಕ ಈ ವರ್ಷದ (2024) ಚುನಾವಣೆಯಲ್ಲಿ ಧನಂಜಯ್ ಎಡ ವಿದ್ಯಾರ್ಥಿ ಸಂಘಟನೆಗಳನ್ನು ಪ್ರತಿನಿಧಿಸಿ ಚುನಾವಣೆ ಗೆದ್ದು ಅಧ್ಯಕ್ಷಗಿರಿಯನ್ನು ಪಡೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...