ಮಣಿಪುರ ವಿದ್ಯಾರ್ಥಿಗಳಿಗೆ ಕಣ್ಣೂರು ವಿವಿ ಸಹಾಯಾಸ್ತ

Date:

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ಉನ್ನತ ಶಿಕ್ಷಣದಿಂದ ವಂಚಿತರಾಗಿರುವ ವಿದ್ಯಾರ್ಥಿಗಳಿಗೆ ಸಹಾಯಾಸ್ತ ನೀಡಲು ಕಣ್ಣೂರು ವಿಶ್ವವಿದ್ಯಾಲಯ ನಿರ್ಧರಿಸಿದೆ. ಹಿಂಸಾಚಾರದಿಂದಾಗಿ ಮಣಿಪುರದಿಂದ ಹೊರಗುಳಿದಿರುವ 70 ವಿದ್ಯಾರ್ಥಿಗಳಿಗೆ ವಿವಿಧ ಪದವಿ ಕೋರ್ಸ್‌ಗಳಿಗೆ ಪ್ರವೇಶ ನೀಡಲು ವಿಶ್ವವಿದ್ಯಾಲಯ ಮುಂದಾಗಿದೆ.

ಹೊಸ ಕೋರ್ಸ್‌ಗಳಿಗೆ ದಾಖಲಾಗುವ ಹಾಗೂ ಅಧ್ಯಯನವನ್ನು ಅರ್ಧಕ್ಕೆ ನಿಲ್ಲಿಸಿರುವ ಮಣಿಪುರದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಲು ಅವಕಾಶ ನೀಡಲು ವಿಶ್ವವಿದ್ಯಾಲಯ ಯೋಜಿಸಿದೆ. ಈಗಾಗಲೇ 13 ವಿದ್ಯಾರ್ಥಿಗಳ ತಂಡ ಕೇರಳ ತಲುಪಿದ್ದು, ತಮ್ಮ ಜೀವನದಲ್ಲಿ ಹೊಸ ಅಧ್ಯಾಯ ಆರಂಭಿಸಲು ಸಿದ್ದರಾಗಿದ್ದಾರೆ.

“ಕಣ್ಣೂರು ನಮ್ಮ ಸ್ವಂತ ಸ್ಥಳವೆಂದು ಭಾವಿಸಿದ್ದೇವೆ. ಆಹಾರದಲ್ಲಿ ಕೆಲವು ವ್ಯತ್ಯಾಸಗಳಿರಬಹುದು. ಆದರೆ, ನಮ್ಮ ರಾಜ್ಯಕ್ಕಿಂತ ಹೆಚ್ಚೇನೂ ಭಿನ್ನವಾಗಿಲ್ಲ. ನಾವು ನಮ್ಮ ಶಿಕ್ಷಣವನ್ನು ಪೂರ್ಣಗೊಳಿಸಲು ಅನುಕೂಲ ದೊರೆತಿದೆ” ಎಂದು ಹಿಂಸಾಚಾರದಿಂದ ಮಣಿಪುರ ತೊರೆದು ಕೇರಳಕ್ಕೆ ಬಂದಿರುವ ವಿದ್ಯಾರ್ಥಿನಿ ಕಿಮ್ಸಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಣ್ಣೂರು ವಿಶ್ವವಿದ್ಯಾನಿಲಯವು ಮಣಿಪುರದ ವಿದ್ಯಾರ್ಥಿಗಳಿಗೆ ಯಾವುದೇ ಅರ್ಹತಾ ಮಾನದಂಡ, ಪ್ರಮಾಣಪತ್ರ ಸೇರಿದಂತೆ ಹೆಚ್ಚಿನ ದಾಖಲೆಗಳನ್ನು ಪಡೆಯದೆ ಪ್ರವೇಶ ನೀಡುತ್ತಿದೆ. ಹೊಸದಾಗಿ ದಾಖಲಾಗುತ್ತಿರುವ ವಿದ್ಯಾರ್ಥಿಗಳು ಹಿಂಸಾಚಾರದಿಂದಾಗಿ ತಮ್ಮ ರಾಜ್ಯ ತೊರೆದು ಬಂದಿದ್ದಾರೆ. ಅವರಿಗೆ ಸಹಾಯ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದೆ” ಎಂದು ವಿಶ್ವವಿದ್ಯಾಲಯದ ಆಡಳಿತ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ?: ಮಣಿಪುರದಿಂದ ʼಈ ದಿನʼ ವರದಿ -10 | ತಾಯ್ನಾಡು ಮತ್ತು ಮ್ಯಾನ್ಮಾರ್‌, ಎರಡೂ ಕಡೆ ಬೆಂಕಿಯ ನಡುವೆ ಸಿಲುಕಿದವರ ಅನುಭವ ಕಥನ

“ನಾವು ಪ್ರಮಾಣಪತ್ರವನ್ನು ಹೊಂದಿರದ ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸುತ್ತಿಲ್ಲ. ನಾವು ಮಣಿಪುರದ ವಿಶ್ವವಿದ್ಯಾಲಯಗಳೊಂದಿಗೆ ಸಂವಹನ ನಡೆಸುತ್ತೇವೆ. ನಮ್ಮ ವಿಶ್ವವಿದ್ಯಾಲಯದಿಂದ ಪದವಿ ಪ್ರಮಾಣಪತ್ರಗಳನ್ನು ನೀಡುವ ಮೊದಲು ಅವರ ಪ್ರಮಾಣಪತ್ರಗಳನ್ನು ಪಡೆಯುತ್ತೇವೆ,” ಎಂದು ಕಣ್ಣೂರು ವಿಶ್ವವಿದ್ಯಾಲಯದ ಉಪಕುಲಪತಿ ಗೋಪಿನಾಥ್ ರವೀಂದ್ರನ್ ತಿಳಿಸಿದ್ದಾರೆ.

ವಿಶ್ವವಿದ್ಯಾಲಯದ ವ್ಯಾಪ್ತಿಯ ವಿವಿಧ ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲಾಗುವುದು. ಅದರಲ್ಲಿಯೂ, ಹಾಸ್ಟೆಲ್‌ಗಳು ಮತ್ತು ಇತರ ಸೌಲಭ್ಯಗಳುಳ್ಳ ವಸತಿ ಕ್ಯಾಂಪಸ್‌ಗಳನ್ನು ಹೊಂದಿರುವ ಕಾಲೇಜುಗಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...