ಉತ್ತರ ಪ್ರದೇಶದ ಕನ್ವರ್ ಯಾತ್ರೆಯಲ್ಲಿ ಅಂಗಡಿ ಮಾಲೀಕರ ಹೆಸರು ಪ್ರದರ್ಶಿಸಲು ಆದೇಶ: ಸುಪ್ರೀಂನಲ್ಲಿ ಅರ್ಜಿ

Date:

ಕನ್ವರ್‌ ಯಾತ್ರೆ ಯುದ್ದಕ್ಕೂ ಇರುವ ಅಂಗಡಿ ಮಾಲೀಕರು ತಮ್ಮ ಹೆಸರುಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶ ಸರ್ಕಾರ ಹೊರಡಿಸಿರುವ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ನ್ಯಾಯಮೂರ್ತಿ ಹೃಷಿಕೇಶ್‌ ರಾಯ್‌ ನೇತೃತ್ವದ ಪೀಠ ಜುಲೈ 22 ರಂದು(ಸೋಮವಾರ) ಈ ಅರ್ಜಿಯನ್ನು ವಿಚಾರಣೆಗೊಳಪಡಿಸಲಿದೆ.

ಮುಜಾಫರ್‌ನಗರದಲ್ಲಿ ಅಂಗಡಿ ಮಾಲೀಕರು ತಮ್ಮ ಹೆಸರನ್ನು ಪ್ರದರ್ಶಿಸಬೇಕೆಂದು ಆದೇಶಿಸಲಾಗಿತ್ತು. ನಂತರದಲ್ಲಿ ಉತ್ತರ ಪ್ರದೇಶ ಸರ್ಕಾರ ಜು.19ರಂದು ಈ ವಿವಾದಾತ್ಮಕ ಆದೇಶವನ್ನು ರಾಜ್ಯದಾದ್ಯಂತ ವಿಸ್ತರಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರಾಖಂಡ್‌ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಕೂಡ ಇದೇ ರೀತಿಯ ಸೂಚನೆಗಳನ್ನು ರಾಜ್ಯದಲ್ಲಿ ಹೊರಡಿಸಿದ್ದರು.

ಈ ಸುದ್ದಿ ಓದಿದ್ದೀರಾ? ಕನ್ವರ್ ಯಾತ್ರೆ ಬಳಿಕ ರೈತರ ಬೃಹತ್ ಪ್ರತಿಭಟನೆ; ಕೇಂದ್ರಕ್ಕೆ ರಾಕೇಶ್ ಟಿಕಾಯತ್ ಎಚ್ಚರಿಕೆ

ಉತ್ತರ ಭಾರತದ ಪ್ರಖ್ಯಾತ ಕನ್ವರ್ ಯಾತ್ರೆ ಆರಂಭವಾಗಿದ್ದು, ಉತ್ತರ ಪ್ರದೇಶದಲ್ಲಿ ಜಾರಿಗೆ ತಂದಿರುವ ”ನಾಮಫಲಕ ಪ್ರದರ್ಶನ” ನಿಯಮವನ್ನು ಇದೀಗ ಮಧ್ಯ ಪ್ರದೇಶದಲ್ಲೂ ಜಾರಿಗೆ ತರಲಾಗಿದೆ.

ಮಧ್ಯ ಪ್ರದೇಶದ ಪುರಾತನ ನಗರ ಬಿಜೆಪಿ ಆಡಳಿತವಿರುವ ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಶನ್ ಅಂಗಡಿ ಮಾಲೀಕರಿಗೆ ತಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಗಳನ್ನು ಕನ್ವರ್ ಯಾತ್ರೆಯ ಮಾರ್ಗದುದ್ದಕ್ಕೂ ತಿನಿಸುಗಳ ಮಾರಾಟ ಮಾಡುವ ತಮ್ಮ ಅಂಗಡಿಗಳ ಹೊರಗೆ ಪ್ರದರ್ಶಿಸುವಂತೆ ಸೂಚಿಸಿದೆ.

ಅಲ್ಲದೆ ಈ ನಿಯಮ ಉಲ್ಲಂಘಿಸುವವರರ ವಿರುದ್ಧ ಮೊದಲ ಬಾರಿಗೆ 2,000 ರೂಪಾಯಿ ದಂಡ ಮತ್ತು ಎರಡನೇ ಬಾರಿಗೆ ಈ ಆದೇಶವನ್ನು ಉಲ್ಲಂಘಿಸಿದರೆ 5,000 ರೂಪಾಯಿಗಳನ್ನು ಪಾವತಿಸಬೇಕಾಗುತ್ತದೆ ಎಂದು ಉಜ್ಜಯಿನಿ ಮೇಯರ್ ಮುಖೇಶ್ ತತ್ವಾಲ್ ಶನಿವಾರ ಹೇಳಿದ್ದರು.

ಬಿಜೆಪಿ ರಾಜ್ಯಗಳ ಆದೇಶದ ವಿರುದ್ಧ ವಿಪಕ್ಷ ನಾಯಕರು ದೇಶಾದ್ಯಂತ ಆಕ್ರೋಶ ವ್ಯಕ್ತಪಡಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...