ಫೇಸ್‌ಬುಕ್ ಲೈವ್‌ನಲ್ಲಿ ಹಾಸ್ಯನಟ ತೀರ್ಥಾನಂದ್ ರಾವ್ ಆತ್ಮಹತ್ಯೆಗೆ ಯತ್ನ

Date:

ಹಿಂದಿ ಕಿರುತೆರೆಯ ಪ್ರಸಿದ್ಧ ಹಾಸ್ಯ ಕಾರ್ಯಕ್ರಮ ʻಕಪಿಲ್‌ ಶರ್ಮಾ ಶೋʼದ ಮಾಜಿ ಸಹ ನಟ, ಖ್ಯಾತ ಹಾಸ್ಯನಟ ತೀರ್ಥಾನಂದ್ ರಾವ್, ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡುತ್ತಿದ್ಧ ವೇಳೆಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ.

‘ಲಿವ್-ಇನ್’ ಸಂಬಂಧ ಹೊಂದಿದ್ದ ಗೆಳತಿಯ ಕಿರುಕುಳದ ಕಾರಣದಿಂದ ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿರುವುದಾಗಿ  ತೀರ್ಥಾನಂದ್ ವಿಡಿಯೋದಲ್ಲಿ ಹೇಳಿದ್ಧಾರೆ.

ʻ2022ರ ಅಕ್ಟೋಬರ್‌ನಲ್ಲಿ ಭೇಟಿಯಾದ ಮಹಿಳೆಯೊಂದಿಗೆ ‘ಲಿವ್-ಇನ್’ ಸಂಬಂಧವನ್ನು ಹೊಂದಿದ್ದೇನೆ. ಮದುವೆಯಾಗುವಂತೆ ಆಕೆ ನನ್ನನ್ನು ‘ಭಾವನಾತ್ಮಕವಾಗಿ ಬ್ಲ್ಯಾಕ್‌ಮೇಲ್’ ಮಾಡಿ ಹಣ ವಸೂಲಿ ಮಾಡುತ್ತಾಳೆ’ ಎಂದು ರಾವ್‌ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʻಈ ಮಹಿಳೆಯಿಂದಾಗಿ ನಾನು ಇದೀಗ ₹3-4 ಲಕ್ಷ ಸಾಲದಲ್ಲಿದ್ದೇನೆ. ನನ್ನ ವಿರುದ್ಧ ಭಾಯಂದರ್‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ ಯಾವ ಕಾರಣಕ್ಕಾಗಿ ನನ್ನ ವಿರುದ್ಧ ಆಕೆ ದೂರು ದಾಖಲಿಸಿದ್ದಾಳೆ ಎಂಬುದು ನನಗೆ ತಿಳಿದಿಲ್ಲ. ಪದೆ ಪದೇ ಕರೆ ಮಾಡಿ ಭೇಟಿಯಾಗಬೇಕೆಂದು ಒತ್ತಾಯಿಸುತ್ತಿದ್ದಳುʼ ಎಂದು ತೀರ್ಥಾನಂದ್ ವಿಡಿಯೋದಲ್ಲಿ ಹೇಳಿದ್ದಾರೆ.

‘ಜೂನಿಯರ್ ನಾನಾ ಪಾಟೇಕರ್’ ಎಂದು ಸ್ನೇಹಿತರ ವಲಯದಲ್ಲಿ ಕರೆಯಲ್ಪಡುತ್ತಿದ್ದ ತೀರ್ಥಾನಂದ್‌, ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡುತ್ತಿರುವ ನಡುವೆಯೇ, ಕೀಟನಾಶಕವನ್ನು ಬಾಟಲಿಯಿಂದ ಗ್ಲಾಸ್‌ವೊಂದಕ್ಕೆ ಸುರಿದು ಕುಡಿಯುತ್ತಿರುವುದು ವಿಡಿಯೋದಲ್ಲಿದೆ.

ವಿಡಿಯೋ ನೋಡಿದ ಬಳಿಕ ನಟನ ಮನೆಗೆ ಧಾವಿಸಿದ ಸ್ನೇಹಿತರು, ರಾವ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತೀರ್ಥಾನಂದ್ ಆತ್ಮಹತ್ಯೆಗೆ ಯತ್ನಿಸುತ್ತಿರುವುದು ಇದು ಮೊದಲೇನಲ್ಲ. 2021ರಲ್ಲಿ ಆರ್ಥಿಕ ತೊಂದರೆಗೆ ಸಿಲುಕಿದ್ದೇನೆ ಎಂದು ಹೇಳಿದ್ದ ಹಾಸ್ಯನಟ ಆತ್ಮಹತ್ಯೆಗೆ ಯತ್ನಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...