ರಾಜಸ್ಥಾನ ಉಪ ಚುನಾವಣೆ: ಬಿಜೆಪಿ ಮಂತ್ರಿಯನ್ನು ಸೋಲಿಸಿದ ಕಾಂಗ್ರೆಸ್ ಅಭ್ಯರ್ಥಿ

Date:

ರಾಜಸ್ಥಾನದ ಕರಾನ್‌ಪುರ್‌ ಕ್ಷೇತ್ರಕ್ಕೆ ನಡೆದ ವಿಧಾನಸಬಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ವಿರುದ್ಧ ಭಾರಿ ಅಂತರದ ಮತಗಳಿಂದ ಜಯ ಸಾಧಿಸಿದೆ.

ಶ್ರೀಗಂಗಾನಗರ್ ಜಿಲ್ಲೆಯ ಕರಾನ್‌ಪುರ್‌ ಕ್ಷೇತ್ರಕ್ಕೆ ಶುಕ್ರವಾರ ಜ.5 ರಂದು ಮತದಾನ ನಡೆದಿತ್ತು. ಇಂದು ನಡೆದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರೂಪೇಂದರ್ ಸಿಂಗ್ ಬಿಜೆಪಿಯ ಸುರೇಂದರ್ ಪಾಲ್ ಸಿಂಗ್‌ ಅವರನ್ನು 12,570 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಸುರೇಂದರ್ ಪಾಲ್ ಇತ್ತೀಚಿಗಷ್ಟೆ ರಚನೆಗೊಂಡ ರಾಜಸ್ಥಾನ ಬಿಜೆಪಿ ಸರ್ಕಾರದ ಸಂಪುಟದಲ್ಲಿ ಮಂತ್ರಿಯಾಗಿದ್ದರು. ಚುನಾವಣೆ ಘೋಷಣೆಯಾದ ನಂತರ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್‌ನ ಅಭ್ಯರ್ಥಿ ಗುರುಮೀತ್ ಸಿಂಗ್ ಮೃತಪಟ್ಟ ಕಾರಣ ಕರಾನ್‌ಪುರ್ ಕ್ಷೇತ್ರದ ಮತದಾನವನ್ನು ಚುನಾವಣಾ ಆಯೋಗ ಮುಂದೂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್‌ ರಾಜಕಾರಣ

ಈ ಕ್ಷೇತ್ರಕ್ಕೆ ಗುರುಮೀತ್ ಸಿಂಗ್ ಅವರೇ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಶ್ರೀಗಂಗಾನಗರ್ ಜಿಲ್ಲೆಯಲ್ಲಿ ಒಟ್ಟು ಐದು ಕ್ಷೇತ್ರಗಳಿದ್ದು, ಡಿಸೆಂಬರ್ 5 ರಂದು ನಡೆದ ಫಲಿತಾಂಶದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದವು. ಕರಾನ್‌ಪುರ್‌ ಕ್ಷೇತ್ರ ಕೈ ಅಭ್ಯರ್ಥಿ ಗೆಲುವು ಗಳಿಸಿರುವುದರಿಂದ ಕಾಂಗ್ರೆಸ್ ಈ ಜಿಲ್ಲೆಯಲ್ಲಿ ಮೂರು ಕ್ಷೇತ್ರಗಳಲ್ಲಿ ವಿಜಯ ಸಾಧಿಸಿದೆ.

ಕೈ ಅಭ್ಯರ್ಥಿ ಗೆಲುವು ಸಾಧಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಈ ಚುನಾವಣೆಯು ಹಲವು ಸಂದೇಶಗಳನ್ನು ನೀಡಿದೆ. ಬಿಜೆಪಿಯ ಅಹಂನಿಂದ ಅಲ್ಲಿನ ನಾಯಕರು ಹೇಗೆ ನೈತಿಕತೆಯನ್ನು ತೊರೆದಿದ್ದಾರೆ ಎಂಬುದನ್ನು ತೋರಿಸುತ್ತದೆ. ಇದು ಜನರು ಬಿಜೆಪಿಗೆ ನೀಡಿದ ಕಪಾಳ ಮೋಕ್ಷವಾಗಿದೆ ಎಂದು ತಿಳಿಸಿದ್ದಾರೆ.

ನವೆಂಬರ್‌ 25 ರಂದು 199 ಕ್ಷೇತ್ರಗಳಿಗೆ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 115 ಗಳಿಸಿ ಅಧಿಕಾರ ಹಿಡಿದರೆ, ಕೈ ಪಕ್ಷ 69 ಕ್ಷೇತ್ರಗಳಲ್ಲಿ ಜಯಗಳಿಸಿತ್ತು. ಇಂದಿನ ಗೆಲುವಿನೊಂದಿಗೆ ಕಾಂಗ್ರೆಸಿನ ಸಂಖ್ಯೆ 70ಕ್ಕೆ ಏರಿಕೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...