ಕೇರಳದಲ್ಲಿ ಕರ್ನಾಟಕ ವಿರೋಧ, ಕರ್ನಾಟಕದಲ್ಲಿ ಕೇರಳ ವಿರೋಧ! BJPಯ ಡಬಲ್ ಗೇಮ್ ಹುನ್ನಾರ ಕಾಣಿರಿ!

Date:

‘ಮಾಡೋದು ಅನಾಚಾರ, ಮನೆ ಮುಂದೆ ಬೃಂದಾವನ’ – ಈ ಮಾತು ಸೂಕ್ತವಾಗಿ ಅನ್ವಯವಾಗುವುದು ಬಿಜೆಪಿಗೆ. ತಾವು ಏಕತೆಯ ಪ್ರತಿಪಾದಕರು, ತಮ್ಮ ನಡೆ-ನುಡಿ ಎಲ್ಲವೂ ಏಕತೆಯ ಕಡೆಗೆ, ‘ಸಬ್‌ಕಾ ಸಾಥ್-ಸಬ್‌ಕಾ ವಿಕಾಸ್’ ನಮ್ಮ ಧ್ಯೇಯವೆಂದು ಬಿಜೆಪಿಗರು ಬಡಾಯಿಬಿಡುತ್ತಾರೆ. ಆದರೆ, ಅವರು ವಾಸ್ತವದಲ್ಲಿ ಅನುಸರಿಸುತ್ತಿರುವುದು ‘ಒಡೆದು ಆಳುವ ನೀತಿ’. ಇದು ಬಿಜೆಪಿಯ ಹಿಡನ್ ಅಜೆಂಡಾ ಕೂಡ ಆಗಿದೆ. ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಹಲವು ರಾಜ್ಯಗಳಲ್ಲಿ ಜನರನ್ನು ಭಾಷೆ, ಪ್ರದೇಶ ಹಾಗೂ ಸಮುದಾಯದ ಆಧಾರದಲ್ಲಿ ಒಡೆದು ರಾಜಕೀಯ ಲಾಭ ಪಡೆಯುವ ತಂತ್ರವನ್ನು ಅನುಸರಿಸುತ್ತದೆ. ಅದು, ಈಗ ಚರ್ಚೆಯಲ್ಲಿರುವ ಕರ್ನಾಟಕ ಮತ್ತು ಕೇರಳ ನಡುವಿನ ಸಂಬಂಧದ ವಿಚಾರದಲ್ಲಿ ಮತ್ತೆ ಬಟಾಬಯಲಾಗಿದೆ. ಸೂಕ್ಷ್ಮ ವಿಚಾರವನ್ನಿಟ್ಟುಕೊಂಡು ಬಿಜೆಪಿಗರು, ಎರಡೂ ರಾಜ್ಯಗಳ ನಡುವೆ ವಿವಾದ ಹುಟ್ಟುಹಾಕುತ್ತಿದ್ದಾರೆ.

ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿನ ಫಕೀರ್ ಕಾಲೋನಿ ಪ್ರದೇಶವು ಸರ್ಕಾರಿ ಜಮೀನು. ಆ ಭೂಮಿಯನ್ನು ಅತಿಕ್ರಮಣ ಮಾಡಿ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆಂದು ಆರೋಪಿಸಿ, ಅಲ್ಲಿನ ಸುಮಾರು ೨00 ಮನೆಗಳನ್ನು ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ (ಜಿಬಿಎ) ಅಧಿಕಾರಿಗಳು ಇತ್ತೀಚೆಗೆ ಧ್ವಂಸಗೊಳಿಸಿದರು. ಯಾವುದೇ ನೋಟಿಸ್‌ ನೀಡದೆ ನಡೆದ ಧ್ವಂಸ ಕೃತ್ಯದಿಂದ ಸಾವಿರಾರು ಜನರು ಬೀದಿ ಪಾಲಾದರು. ತಾವು ಅಲ್ಲಿನ ದೀರ್ಘಕಾಲದ ನಿವಾಸಿಗಳೆಂದು ಸಂತ್ರಸ್ತರು ತಮ್ಮ ದಾಖಲೆಗಳನ್ನು ತೋರಿಸಿದರು.

ಸರ್ಕಾರದ ಕಾರ್ಯಾಚರಣೆಯ ವಿರುದ್ಧ ವ್ಯಾಪಕ ಆಕ್ರೋಶವೂ ವ್ಯಕ್ತವಾಯಿತು. ಸರ್ಕಾರದ ಕ್ರಮವನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ‘ಬುಲ್ಡೋಜರ್ ಕ್ರಮ’ವೆಂದು ಟೀಕಿಸಿದರು. ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕೂಡ ಸಂತ್ರಸ್ತರಿಗೆ ಸರ್ಕಾರ ನೆರವು ನೀಡಬೇಕೆಂದು ಆಗ್ರಹಿಸಿದರು. ಇದೆಲ್ಲದರ ನಡುವೆ, ಸಂತ್ರಸ್ತ ಕುಟುಂಬಗಳಿಗೆ ತಾತ್ಕಾಲಿಕ ಆಶ್ರಯವನ್ನೂ, ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ನಿರ್ಮಾಣಗೊಂಡಿರುವ ಕಟ್ಟಡಗಳಲ್ಲಿ ಶಾಶ್ವತ ಮನೆಗಳನ್ನೂ ಒದಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಿಣರಾಯಿ ವಿಜಯನ್ ಅವರ ಟೀಕೆ ಮತ್ತು ಸಿದ್ದರಾಮಯ್ಯ ಅವರ ನೆರವಿನ ಘೋಷಣೆಯನ್ನು ತಳುಕು ಹಾಕಿಕೊಂಡ ಬಿಜೆಪಿಗರು, ತಮ್ಮ ರಾಜಕೀಯಕ್ಕೆ ದಾಳವಾಗಿ ಬಳಸುತ್ತಿದ್ದಾರೆ. ಕರ್ನಾಟಕ ಬಿಜೆಪಿಯ ಅಧಿಕೃತ ‘ಎಕ್ಸ್‌’ ಖಾತೆಯಲ್ಲಿ, “ಕರ್ನಾಟಕದಲ್ಲಿ ಕೇರಳ ದರ್ಬಾರ್ ನಡೆಯುತ್ತಿದೆ!! ಅಕ್ರಮ ಮನೆ ಕಟ್ಟಿಕೊಂಡಿದ್ದವರಿಗೆ ಕಾಂಗ್ರೆಸ್ ಸರ್ಕಾರ ‘ಪುನರ್ವಸತಿ’ ನೀಡುತ್ತಿದೆ! ಕನ್ನಡೇತರರಿಗೆ ರಾಜೋಪಚಾರ ನೀಡಿ, ಕಾನೂನು ಉಲ್ಲಂಘಿಸುವವರಿಗೆ ನಮ್ಮ ಭೂಮಿಯನ್ನು ವೋಟ್ ಬ್ಯಾಂಕ್‌ಗಾಗಿ ಕೊಡುತ್ತಿದ್ದಾರೆ” ಎಂದು ಆರೋಪಿಸಿದೆ.

ಬಿಜೆಪಿ ತನ್ನ ಈ ಒಂದೇ ಪೋಸ್ಟ್‌ನಲ್ಲಿ, ಒಂದೆಡೆ – ಮುಸ್ಲಿಮರ ವಿರುದ್ಧವೂ, ಮತ್ತೊಂದೆಡೆ – ಕೇರಳಿಗರ ವಿರುದ್ಧವೂ ಕನ್ನಡಿಗರನ್ನು ಪ್ರಚೋದಿಸಲು ಯತ್ನಿಸಿದೆ. ಕೇರಳದ ಪ್ರಭಾವದಡಿ ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತ ನಡೆಸುತ್ತಿದೆ ಎಂದು ದೂಷಿಸಿದೆ. ಪ್ರಾದೇಶಿಕ ಬಿರುಕು ಮೂಡಿಸುವ ತಂತ್ರ ಹೆಣೆದಿದೆ.

ಇನ್ನು, ‘ಕೇರಳಿಗರ ಸಲಹೆ ನಮಗೆ ಬೇಡ’ವೆಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದ ಹೇಳಿಕೆಯನ್ನು ಬಳಸಿಕೊಂಡಿರುವ ಕೇರಳ ಬಿಜೆಪಿ, ಕನ್ನಡಿಗರ ವಿರುದ್ಧ ಕೇರಳಿಗರನ್ನು ಪ್ರಚೋದಿಸಲು ಯತ್ನಿಸಿದೆ.

ಈ ಲೇಖನ ಓದಿದ್ದೀರಾ?: ಶರದ್ ಪವಾರ್ – ಅದಾನಿ ಸ್ನೇಹವೂ, ಪೊಲಿಟಿಕಲ್-ಕಾರ್ಪೊರೇಟ್ ಸಂಬಂಧವೂ!

ಆದರೆ, ಇದೇ ಕರ್ನಾಟಕ ಬಿಜೆಪಿಗರು ಮಹಾರಾಷ್ಟ್ರ ಅಥವಾ ಗೋವಾದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯಗಳು ನಡೆದಾಗ ಖಂಡಿಸುವುದು, ಟೀಕಿಸುವುದನ್ನೂ ಮಾಡುತ್ತಾರೆ. ಅಂದಮೇಲೆ, ದೇಶದ ಯಾವುದೇ ಮೂಲೆಯಲ್ಲಿ ಯಾರೇ ದೌರ್ಜನ್ಯ ಎಸಗಿದರೂ, ಖಂಡಿಸುವುದು, ಟೀಕಿಸುವುದು, ಸಲಹೆ ನೀಡುವುದು ಸಾಮಾನ್ಯ. ಇದೇ ಏಕತೆ, ಸಹಕಾರ, ಬಹುತ್ವದ ಆಶಯ. ಆದರೆ, ಕೇರಳ-ಕರ್ನಾಟಕದ ವಿಚಾರದಲ್ಲಿ ಬಿಜೆಪಿ, ಪ್ರದೇಶಿಕತೆ ಆಧಾರದ ಮೇಲೆ ಎರಡೂ ರಾಜ್ಯಗಳ ಜನರನ್ನು ಪ್ರಚೋದಿಸುವ ಮೂಲಕ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸಿದೆ.

ಬಿಜೆಪಿಯ ಈ ಒಡೆದು ಆಳುವ ತಂತ್ರ-ಕುತಂತ್ರಗಳು ಇದೇ ಮೊದಲೇನೂ ಅಲ್ಲ. ಮುಲ್ಲಪೆರಿಯಾರ್ ಅಣೆಕಟ್ಟು ವಿವಾದದಲ್ಲಿಯೂ ಬಿಜೆಪಿಗರು ಕೇರಳದಲ್ಲಿ ಮಲೆಯಾಳಿಗರನ್ನೂ, ಕರ್ನಾಟಕದಲ್ಲಿ ಕನ್ನಡಗರನ್ನೂ, ತಮಿಳುನಾಡಿನಲ್ಲಿ ತಮಿಳರನ್ನೂ ಪ್ರಚೋದಿಸುವ ಪ್ರಯತ್ನ ಮಾಡಿದ್ದಾರೆ. ಅಂತೆಯೇ, ವಿವಿಧ ರಾಜ್ಯಗಳಲ್ಲಿ ಸ್ಥಳೀಯ ಜನರನ್ನು ತಮ್ಮತ್ತ ಸೆಳೆಯಲು ಬೇಕಾದ ರೀತಿಯಲ್ಲಿ ಬಿಜೆಪಿಗರು ವಿಭಿನ್ನ ರೀತಿಯ ನಿಲುವುಗಳನ್ನು ತೆಗೆದುಕೊಂಡಿರುವ ಉದಾಹರಣೆಗಳೂ ಇವೆ. ಇದು, ಬಿಜೆಪಿ ರಾಷ್ಟ್ರೀಯ ಮಟ್ಟದಲ್ಲಿ ಏಕತೆಯ ಬಗ್ಗೆ ಮಾತನಾಡಿದರೂ, ಸ್ಥಳೀಯ ಮಟ್ಟದಲ್ಲಿ ಪ್ರಾದೇಶಿಕ ಭಾವನೆಗಳನ್ನು ಉದ್ವಿಗ್ನಗೊಳಿಸುವುದನ್ನು ಸ್ಪಷ್ಟವಾಗಿ ಎತ್ತಿತೋರುತ್ತದೆ.

ಹೀಗಾಗಿ, ಬಿಜೆಪಿಯು ಬ್ರಿಟಿಷರ ಒಡೆದು ಆಳುವ ತಂತ್ರವನ್ನು ಅಳವಡಿಸಿಕೊಂಡಿದೆ ಎಂಬ ಗಂಭೀರ ಆರೋಪಗಳಿವೆ. ರಾಷ್ಟ್ರಮಟ್ಟದಲ್ಲಿ ಕೋಮು ಧ್ರುವೀಕರಣವನ್ನು ಬಂಡವಾಳ ಮಾಡಿಕೊಂಡಿರುವ ಬಿಜೆಪಿ, ಹಿಂದು-ಮುಸ್ಲಿಮರ ನಡುವೆ ಕೋಮುಭಾವನೆಯನ್ನು ಪ್ರಚೋದಿಸಿ ರಾಜಕೀಯ ಮಾಡುತ್ತಿದೆ.

ರಾಜ್ಯಗಳಲ್ಲಿ ಜಾತಿ ಆಧಾರಿತ ಮೀಸಲಾತಿಯನ್ನು ಪರೋಕ್ಷವಾಗಿ ವಿರೋಧಿಸುತ್ತಲೇ, ಸಮುದಾಯಗಳ ನಡುವೆ ದ್ವೇಷದ ವಿಷಬಿತ್ತಿ, ಮತಬ್ಯಾಂಕ್‌ ಕಟ್ಟಿಕೊಳ್ಳುವ ನಿರಂತರ ಪ್ರಯತ್ನ ಮಾಡುತ್ತಿದೆ. ಉತ್ತರ ಪ್ರದೇಶದಲ್ಲಿ ಒಬಿಸಿ ಮತ್ತು ಎಸ್‌ಸಿ/ಎಸ್‌ಟಿ ಮತಗಳಿಗಾಗಿ ಮೀಸಲಾತಿ ಪರವಾಗಿ ಮಾತನಾಡುವ ಬಿಜೆಪಿ, ಕರ್ನಾಟಕದಲ್ಲಿ ಪ್ರಬಲ ಜಾತಿಗಳನ್ನು ಸೆಳೆಯಲು ಮೀಸಲಾತಿ ವಿರೋಧಿ ಧೋರಣೆಯನ್ನು ಮುನ್ನೆಲೆಗೆ ತರುತ್ತದೆ. ಇದು, ಸ್ಥಳೀಯವಾಗಿ ಸಮುದಾಯಗಳನ್ನು ಒಡೆಯುವುದು, ಪ್ರಬಲರನ್ನು ಸೆಳೆಯುವ ತಂತ್ರವಾಗಿದೆ ಎಂದು ವಿಶ್ಲೇಷಕರು ಹೇಳುತ್ತಾರೆ.

ಅಂತೆಯೇ, ಉತ್ತರ ಮತ್ತು ದಕ್ಷಿಣ ಭಾರತದ ನಡುವಿನ ವಿಭಜನೆಯನ್ನು ಬಿಜೆಪಿ ಉತ್ತೇಜಿಸುತ್ತಿದೆ. ಲೋಕಸಭಾ ಕ್ಷೇತ್ರಗಳ ಮರುಹಂಚಿಕೆಯಲ್ಲಿ ಉತ್ತರ ಸ್ಥಾನಗಳನ್ನು ಹೆಚ್ಚಿಸಿ, ದಕ್ಷಿಣ ಭಾರತದ ಸ್ಥಾನಗಳನ್ನು ಕಡಿಮೆಯಲ್ಲಿಯೇ ಇರಿಸಿ, ಕೇಂದ್ರ ಸರ್ಕಾರದ ಆಡಳಿತದಲ್ಲಿ ಉತ್ತರ ಭಾರತವು ಮೇಲುಗೈ ಸಾಧಿಸುವಂತೆ ಮಾಡುತ್ತಿದೆ. ಆ ಮೂಲಕ ದಕ್ಷಿಣ ಭಾರತದ ಮೇಲೆ ಉತ್ತರ ಭಾರತದ ಧೋರಣೆಗಳನ್ನು ಹೇರಲು ಬಿಜೆಪಿ ಮುಂದಾಗಿದೆ ಎಂಬ ಆರೋಪಗಳೂ ಇವೆ. ಇದು ಸತ್ಯವೂ ಹೌದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...