ಕೇರಳ ಮಾಜಿ ಸಿಎಂ ಕರುಣಾಕರನ್ ಪುತ್ರಿ ಬಿಜೆಪಿಗೆ ಸೇರ್ಪಡೆ

Date:

ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಕೇರಳದ ಮಾಜಿ ಮುಖ್ಯಮಂತ್ರಿ ದಿವಗಂತ ಕೆ ಕರುಣಾಕರನ್ ಅವರ ಪುತ್ರಿ ಪದ್ಮಜಾ ವೇಣುಗೋಪಾಲ್ ಇಂದು ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಲೋಕಸಭಾ ಚುನಾವಣೆ ಕೆಲವು ದಿನಗಳು ಇರುವ ಮುನ್ನವೆ ಬಿಜೆಪಿಗೆ ಸೇರಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಕೇರಳ ಬಿಜೆಪಿ ಮುಖ್ಯಸ್ಥ ಕೆ ಸುರೇಂದ್ರನ್‌, “ಇಂದು ಕೇರಳದ ಮುಖ್ಯ ಗೌರವಾನ್ವಿತ ಕಾಂಗ್ರೆಸ್ ನಾಯಕರಾದ ಮಾಜಿ ಮುಖ್ಯಮಂತ್ರಿ ಕರುಣಾಕರನ್ ಅವರ ಪುತ್ರಿ ಹಾಗೂ ಕಾಂಗ್ರೆಸ್ ಸಂಸದ ಕೆ ಮುರುಳೀಥರನ್ ಅವರ ಸಹೋದರಿ ಪದ್ಮಜಾ ವೇಣು ಗೋಪಾಲ್ ಅವರನ್ನು ಕೇರಳದ ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಅವರ ಉಪಸ್ಥಿತಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿದೇಶಿ ಪ್ರವಾಸಿ ಮೇಲೆ ಅತ್ಯಾಚಾರ; ʼಅತಿಥಿ ದೇವೋಭವʼ ಎಂದ ದೇಶದಲ್ಲಿ ಇದೆಂಥಾ ಕ್ರೌರ್ಯ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೂ ಮುನ್ನ ಪದ್ಮಜಾ ಅವರ ಸಹೋದರ ಕಾಂಗ್ರೆಸ್ ಸಂಸದ ಕೆ ಮುರಳೀಥರನ್ ಅವರು ಮಾತನಾಡಿ, ಆಕೆಯ ನಿರ್ಧಾರ ವಿಶ್ವಾಸದ್ರೋಹವಾಗಿದೆ. ಇದರಿಂದ ಬಿಜೆಪಿಗೆ ಒಂದಿಷ್ಟು ಉಪಯೋಗವಾಗುವುದಿಲ್ಲ. ಕರುಣಾಕರನ್‌ ಅವರು ಕೋಮುವಾದಿಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಂಡಿರಲಿಲ್ಲ. ಇಂತಹ ಕುಟುಂಬದ ಸದಸ್ಯರೊಬ್ಬರು ಬಿಜೆಪಿ ಸೇರ್ಪಡೆಗೊಂಡಿರುವುದರಿಂದ ಜಾತ್ಯಾತೀತ ಮನೋಭಾವ ಹೊಂದಿರುವ ಜನರ ಭಾವನೆಗಳಿಗೆ ನೋವಾಗಿದೆ” ಎಂದು ಹೇಳಿದ್ದಾರೆ.

ಕೇರಳ ಕಾಂಗ್ರೆಸ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಲ್ಲ 20 ಸ್ಥಾನ ಗೆಲ್ಲಲು ಶ್ರಮಿಸಲಿದೆ. ಕಾಂಗ್ರೆಸ್ ಪಕ್ಷ ಆಕೆಗೆ ಯಾವಾಗಲು ಹೆಚ್ಚಿನ ಪ್ರಾಮುಖ್ಯತೆ ನೀಡಿತ್ತು. ಬಿಜೆಪಿ ಆಕೆಯ ಸೇರ್ಪಡೆಯಿಂದ ಯಾವುದೇ ಪ್ರಯೋಜನ ಪಡೆಯುವುದಿಲ್ಲ” ಎಂದು ಮುರುಳೀಥರನ್ ತಿಳಿಸಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಕೇರಳದಿಂದ ರಾಹುಲ್‌ ಗಾಂಧಿ ಸೇರಿ 15 ಕಾಂಗ್ರೆಸ್ ಸದಸ್ಯರು ಗೆಲುವು ಸಾಧಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...