ಎಸ್‌ಐಆರ್‌ ವಿವಾದ | ಚುನಾವಣಾ ಬಹಿಷ್ಕಾರದ ಬಗ್ಗೆ ಮಾತನಾಡಿದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್

Date:

ರಾಷ್ಟ್ರೀಯ ಜನತಾ ದಳದ ಸಾಂಪ್ರದಾಯಿಕ ಮತದಾರರ ಹೆಸರುಗಳನ್ನು ಪರಿಷ್ಕರಣೆಯ ನೆಪದಲ್ಲಿ ತೆಗೆದು ಹಾಕಲಾಗುತ್ತಿದೆ ಎಂದು ಬಿಹಾರದ ಪ್ರತಿಪಕ್ಷದ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಕಳವಳ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತ ಪರಿಷ್ಕರಣೆ ಬಗ್ಗೆ ಕಿಡಿಕಾರಿರುವ ಅವರು, ಚುನಾವಣಾ ಆಯೋಗವು ಉದ್ದೇಶಪೂರ್ವಕವಾಗಿಯೇ ಪ್ರತಿಪಕ್ಷವನ್ನು, ವಿಶೇಷವಾಗಿ ಆರ್‌ಜೆಡಿಯನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ವಿಶೇಷ ಸಮಗ್ರ ಮತ ಪರಿಷ್ಕರಣೆ ಎನ್ನುವುದು ಒಂದು ಪಿತೂರಿ. ಸಾಂಪ್ರದಾಯಿಕ ರಾಷ್ಟ್ರೀಯ ಜನತಾ ದಳದ ಮತದಾರರ ಹೆಸರುಗಳನ್ನು ಪರಿಷ್ಕರಣೆಯ ನೆಪದಲ್ಲಿ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ. ಹೀಗೆ ಮಾಡುವ ಮೂಲಕ ಭಾರತೀಯ ಚುನಾವಣಾ ಆಯೋಗವು ಆಡಳಿತಾರೂಢ ಪಕ್ಷದ ಅಣತಿಯಂತೆ ಕಾರ್ಯನಿರ್ವಹಿಸುತ್ತಿದೆ ಎಂಬ ಅನುಮಾನ ಮೂಡಿದೆ. ಈ ಬಗ್ಗೆ ಅಧಿವೇಶನದಲ್ಲಿಯೂ ಚರ್ಚಿಸಲಾಗಿದೆ. ನಮ್ಮ ಮತದಾರರನ್ನು ಗುರಿಯಾಗಿಸಿಕೊಂಡು ಆಯೋಗವು ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದ್ದು, ಇದನ್ನೆಲ್ಲ ನೋಡಿದರೆ ಚುನಾವಣೆ ನಡೆಸುವುದೇ ಅರ್ಥಹೀನ ಎಂದು ಅನ್ನಿಸುತ್ತದೆ ಎಂದು ತೇಜಸ್ವಿ ಯಾದವ್‌ ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹದಾಯಿ: ನಾಯಕರೇ ನಾಡದ್ರೋಹಿಗಳು

ಚುನಾವಣೆಗಳನ್ನು ಬಹಿಷ್ಕರಿಸುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಬಹಿಷ್ಕಾರ ಒಂದು ಆಯ್ಕೆ. ಆದರೆ, ಈ ಬಗ್ಗೆ ಮೈತ್ರಿಕೂಟದ ಮುಖಂಡರೊಂದಿಗೆ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ಕೈಕೊಳ್ಳಲಾಗುತ್ತದೆ. ಅಲ್ಲದೇ ಈ ಕುರಿತು ಸಾರ್ವಜನಿಕವಾಗಿಯೂ ಪ್ರಕಟಿಸಲಾಗುವುದು. ಇದೇ ಪರಿಸ್ಥಿತಿ ಮುಂದುವರಿದರೆ ಮುಂಬರುವ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ ತೇಜಸ್ವಿ ಯಾದವ್‌, ಯಾರಿಗೆ ಎಷ್ಟು ಸ್ಥಾನಗಳು ಸಿಗುತ್ತವೆ ಎಂಬುದರ ಕುರಿತು ಚುನಾವಣೆಗೂ ಮುನ್ನ ಎಲ್ಲವೂ ಈಗಲೇ ಸಿದ್ಧವಾಗಿದ್ದರೆ, ಚುನಾವಣೆ ನಡೆಸುವ ಅಗತ್ಯವೇನು ಎಂದು ಪ್ರಶ್ನಿಸಿದರು.

ಚುನಾವಣಾ ಆಯೋಗ ಇತ್ತೀಚಿಗೆ ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿದ್ದು, ಅದರಲ್ಲಿ 52-55 ಲಕ್ಷ ಮತದಾರರು (ಅವರ ವಿಳಾಸದಲ್ಲಿ) ಕಂಡುಬಂದಿಲ್ಲ ಎಂದು ಹೇಳಿದೆ. ಇದನ್ನು ಗಮನಿಸಿದರೆ ಈ ಮತದಾರರ ಹೆಸರುಗಳ ಪರಿಷ್ಕರಣಾ ಪ್ರಕ್ರಿಯೆ ಕೇವಲ ಔಪಚಾರಿಕ ಅಂತ ಅನ್ನಿಸುತ್ತಿದೆ. ಅಲ್ಲದೇ ಇಲ್ಲಿ ಯಾವುದೇ ಪಾರದರ್ಶಕತೆ ಉಳಿದಿಲ್ಲ ಎಂಬ ಅನುಮಾನ ಕೂಡ ಕಾಡುತ್ತಿದೆ. ಮತದಾರರ ಪಟ್ಟಿಯಿಂದ ತಮ್ಮ ಹೆಸರುಗಳು ಅಳಿಸಿಹೋದದ್ದೇ ಆದಲ್ಲಿ ತಮ್ಮ ಪಡಿತರ ಮತ್ತು ಪಿಂಚಣಿ ನಿಲ್ಲಬಹುದು ಎಂಬ ಚಿಂತೆಯಲ್ಲಿದ್ದಾರೆ. ಮೊದಲು ಮತದಾರರು ಸರ್ಕಾರಗಳನ್ನು ಆಯ್ಕೆ ಮಾಡುತ್ತಿದ್ದರು. ಆದರೆ, ಈಗ ಸರ್ಕಾರ ಮತದಾರರನ್ನು ಆಯ್ಕೆ ಮಾಡುತ್ತಿದೆ. ಚುನಾವಣಾ ಆಯೋಗದ ಮೂಲಕ ಇದನ್ನೆಲ್ಲ ಹೀಗೆ ಮಾಡಲಾಗುತ್ತಿದೆ ಎಂದು ತೇಜಸ್ವಿ ಯಾದವ್‌ ಗಂಭೀರ ಆರೋಪ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...