ಕೇರಳ | ಬಸ್‌ನಲ್ಲಿ ಗರ್ಭಿಣಿಗೆ ಹೆರಿಗೆ ನೋವು; ಬಸ್‌ ನೇರವಾಗಿ ಆಸ್ಪತ್ರೆಗೆ ನುಗ್ಗಿಸಿದ ಚಾಲಕ; ವಿಡಿಯೋ ವೈರಲ್

Date:

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಗರ್ಭಿಣಿಯೋರ್ವರಿಗೆ ಹೆರಿಗೆ ನೋವು ಕಾಣಿಸಿದ ಹಿನ್ನೆಲೆಯಲ್ಲಿ ಸರ್ಕಾರಿ ಬಸ್‌ ಚಾಲಕನೋರ್ವ ಸಮಯ ಪ್ರಜ್ಞೆ ಮೆರೆದು, ಬಸ್‌ ಅನ್ನು ನೇರವಾಗಿ ಆಸ್ಪತ್ರೆಗೆ ನುಗ್ಗಿಸಿದ ಘಟನೆ ಕೇರಳದಲ್ಲಿ ಬುಧವಾರ ನಡೆದಿದೆ. ಬಸ್‌ ಅನ್ನು ಆಸ್ಪತ್ರೆಗೆ ನುಗ್ಗಿಸಿದ ಕೂಡಲೇ ವೈದ್ಯರ ತಂಡವು ಮಹಿಳೆಗೆ ಬಸ್‌ನಲ್ಲೇ ಹೆರಿಗೆ ಮಾಡಿಸಿದ್ದಾರೆ.

ಈ ಘಟನೆಯು ಕೇರಳದ ತ್ರಿಶೂರ್‌ನಲ್ಲಿ ನಡೆದಿದ್ದು, ಇದರ ಸಿಸಿಟಿವಿ ದೃಶ್ಯವು ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ತ್ರಿಶೂರ್‌ನಲ್ಲಿ 37 ವರ್ಷದ ಮಹಿಳಾ ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ತಿರುನವಾಯದಲ್ಲಿನ ನಿವಾಸಿ ಲಿಜೇಶ್ ಎಂಬವರ ಪತ್ನಿ ಸೆರೀನಾ ಅವರು ಬುಧವಾರ ಅಂಗಮಾಲಿಯಿಂದ ತೊಟ್ಟಿಲ್‌ಪಾಲಂಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಪೇರಮಂಗಲಂ ಪೊಲೀಸ್ ಠಾಣೆಯ ಸಮೀಪ ತಲುಪಿದ ನಂತರ ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡಿತು. ಇದನ್ನು ಗಮನಿಸಿದ ಇತರೆ ಪ್ರಯಾಣಿಕರು ಕೂಡಲೇ ಚಾಲಕನ ಗಮನಕ್ಕೆ ತಂದಿದ್ದಾರೆ. ಆ ಕೂಡಲೇ ಸಮಯ ಪ್ರಜ್ಞೆ ಮೆರೆದ ಸರ್ಕಾರಿ ಬಸ್  ಚಾಲಕ, ತ್ರಿಶೂರ್‌ನ ಅಮಲಾ ಆಸ್ಪತ್ರೆಯ ಆವರಣಕ್ಕೆ ನುಗ್ಗಿಸಿ, ತುರ್ತು ಚಿಕಿತ್ಸಾ ಘಟಕದ ಬಳಿ ಬಸ್‌ ನಿಲ್ಲಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸ್‌ ಆಸ್ಪತ್ರೆಯೊಳಗೆ ಬಂದ ಕೂಡಲೇ ನಿರ್ವಾಹಕ ಹಾಗೂ ಇತರೆ ಪ್ರಯಾಣಿಕರು ವೈದ್ಯರನ್ನು ಕರೆದಿದ್ದಾರೆ. ಕೂಡಲೇ  ಮಹಿಳೆ ನೋವು ಅನುಭವಿಸುತ್ತಿರುವುದರ ಮಧ್ಯೆ ಹೆರಿಗೆ ಬಹುತೇಕ ಪೂರ್ಣಗೊಂಡಿರುವುದನ್ನು ಮನಗಂಡ ವೈದ್ಯರ ತಂಡ, ನೇರವಾಗಿ ವೈದ್ಯಕೀಯ ಸಲಕರಣೆಗಳೊಂದಿಗೆ ಬಸ್‌ನಲ್ಲೇ ಮಗುವನ್ನು ಹೊರತೆಗೆಯಲು ಸಹಾಯ ಮಾಡಿದರು. ಹೆರಿಗೆಯಾದ ಕೂಡಲೇ ಮಗು ಹಾಗೂ ಬಾಣಂತಿ ಸೆರೀನಾರನ್ನು ಆಸ್ಪತ್ರೆಯಲ್ಲಿ ದಾಖಲಿಸಿಕೊಂಡಿದ್ದಾರೆ. ಸದ್ಯ ಹೆಣ್ಣು ಮಗು ಹಾಗೂ ತಾಯಿ ಕ್ಷೇಮವಾಗಿರುವುದಾಗಿ ವರದಿಯಾಗಿದೆ.

ಈ ಎಲ್ಲ ಘಟನೆಯ ವಿಡಿಯೋ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಈ ಬೆಳವಣಿಗೆಯ ಬಗ್ಗೆ ಮಾಹಿತಿ ನೀಡಿರುವ ತ್ರಿಶೂರ್‌ನ ಅಮಲಾ ಆಸ್ಪತ್ರೆಯ ವಕ್ತಾರರು, “ಗರ್ಭಿಣಿ ಸೆರೀನಾ ಒಂಭತ್ತನೇ ತಿಂಗಳಿನಲ್ಲಿದ್ದರು. ಆಸ್ಪತ್ರೆಗೆಂದು ಬಸ್‌ನಲ್ಲಿ ಹೋಗುತ್ತಿದ್ದರು. ಮಧ್ಯಾಹ್ನ 12.30ರ ಸುಮಾರಿಗೆ ವೇಳೆಗೆ ಬಸ್ ಚಾಲಕ ಸಮಯ ಪ್ರಜ್ಞೆ ಮೆರೆದು ಆಸ್ಪತ್ರೆಯ ಆವರಣಕ್ಕೆ ಬಸ್‌ ನುಗ್ಗಿಸಿದ್ದರು. ಬಸ್‌ನಲ್ಲಿದ್ದಾಗಲೇ ಬಹುತೇಕ ಮಗು ಹೊರಗೆ ಬಂದಿದ್ದರಿಂದ ಅಲ್ಲೇ ನಿಂತು ನಮ್ಮ ವೈದ್ಯರು ಮತ್ತು ನರ್ಸ್‌ಗಳ ತಂಡ ಹೆರಿಗೆ ಮಾಡಿಸಿದೆ. ಇಬ್ಬರೂ ಕೂಡ ಸುರಕ್ಷಿತವಾಗಿದ್ದಾರೆ. ಘಟನೆ ನಡೆದ ಕೂಡಲೇ ಪತಿ ಲಿಜೇಶ್ ಅವರಿಗೆ ಮಾಹಿತಿ ನೀಡಿದೆವು. ಅವರು ಕೂಡ ಆಸ್ಪತ್ರೆಗೆ ಬಂದಿದ್ದಾರೆ. ಮಗುವನ್ನು NICU (ನಿಯೋ-ನಾಟಲ್ ಇಂಟೆನ್ಸಿವ್ ಕೇರ್ ಯುನಿಟ್) ಗೆ ಸ್ಥಳಾಂತರಿಸಿದ್ದೇವೆ. ಸೆರೀನಾ ನಿಗಾದಲ್ಲಿದ್ದಾರೆ. ತಾಯಿ ಮತ್ತು ಮಗುವಿನ ಆರೋಗ್ಯ ಸ್ಥಿರವಾಗಿದೆ” ಎಂದು ತಿಳಿಸಿದ್ದಾರೆ.

ಸಮಯಪ್ರಜ್ಞೆ ಮೆರೆದ ಸರ್ಕಾರಿ ಬಸ್‌ನ ಚಾಲಕ ಹಾಗೂ ಕೂಡಲೇ ಕಾರ್ಯಪ್ರವೃತ್ತರಾಗಿ ಹೆರಿಗೆ ಮಾಡಿಸಿದ ವೈದ್ಯರ ತಂಡಕ್ಕೆ ನೆಟ್ಟಿಗರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...