ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿ ಸೋಮವಾರ 47 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಲವಾರು ಕ್ಷೇತ್ರಗಳಿಂದ ರಾಜ್ಯ ನಾಯಕರು ಮತ್ತು ಪ್ರಮುಖ ನಾಯಕರುಗಳನ್ನು ಕಣಕ್ಕಿಳಿಸಿದೆ.
ಮಂಜೇಶ್ವರದಿಂದ ಪಕ್ಷದ ಅಭ್ಯರ್ಥಿಯಾಗಿ ರಾಜ್ಯ ನಾಯಕ ಕೆ. ಸುರೇಂದ್ರನ್ ಅವರು ಸ್ಪರ್ಧೆಯಲ್ಲಿದ್ದರೆ, ಕೋಝಿಕ್ಕೋಡ್ ಉತ್ತರದಲ್ಲಿ ನವ್ಯಾ ಹರಿದಾಸ್ ಕಣದಲ್ಲಿದ್ದಾರೆ. ಕಜಕೂಟ್ಟಂನಲ್ಲಿ ವಿ. ಮುರಳೀಧರನ್, ಕಾಂಜಿರಪಳ್ಳಿಯಲ್ಲಿ ವಕೀಲ ಜಾರ್ಜ್ ಕುರಿಯನ್ ಸ್ಪರ್ಧಿಸುತ್ತಿದ್ದಾರೆ.
ಇದನ್ನು ಓದಿದ್ದೀರಾ? ಮತದಾನ ಮಾಡಿ ಫಲಿತಾಂಶಕ್ಕಾಗಿ 25 ದಿನ ಕಾಯಬೇಕು ಕೇರಳ, ಅಸ್ಸಾಂ, ಪುದುಚೇರಿ ಜನತೆ!
ರಾಜ್ಯದಲ್ಲಿ ಬಿಜೆಪಿಯ ಪ್ರಮುಖ ಸ್ಥಾನಗಳಲ್ಲಿ ಒಂದೆಂದು ಪರಿಗಣಿಸಲಾದ ನೇಮೊಮ್ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು ಕಣದಲ್ಲಿದ್ದಾರೆ.
ಕೇರಳದಲ್ಲಿ ಒಟ್ಟು 140 ವಿಧಾನಸಭೆ ಕ್ಷೇತ್ರಗಳಿದ್ದು, ಏಪ್ರಿಲ್ 9ರಂದು ಚುನಾವಣೆ ನಡೆಯಲಿದೆ. ಮತದಾನ ನಡೆದ 25 ದಿನಗಳ ನಂತರ ಅಂದರೆ ಮೇ 4ರಂದು ಫಲಿತಾಂಶ ಹೊರಬೀಳಲಿದೆ.





