ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

Date:

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು ನಾಮಪತ್ರದೊಂದಿಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಮಂಜೇಶ್ವರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ನಾಯಕ ಕೆ. ಸುರೇಂದ್ರನ್ ಕೂಡಾ ಅಫಿಡವಿಟ್ ಸಲ್ಲಿಸಿದ್ದು, ಅವರ ವಿರುದ್ಧ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ ಎಂದು ತಿಳಿದುಬಂದಿದೆ.

ಸುರೇಂದ್ರನ್ ವಿರುದ್ಧದ 242 ಪ್ರಕರಣಗಳಲ್ಲಿ ಹೆಚ್ಚಿನವು ವಿವಿಧ ಪ್ರತಿಭಟನೆಗಳಲ್ಲಿ ಭಾಗಿಯಾದಾಗ ದಾಖಲಾದ ಪ್ರಕರಣಗಳಾಗಿದೆ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ. 28 ಲಕ್ಷ ರೂ.ಗಿಂತ ಹೆಚ್ಚಿನ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಗಳನ್ನು ಹೊಂದಿದ್ದಾರೆ. ಒಂಬತ್ತು ಲಕ್ಷ ರೂ.ಗಿಂತ ಹೆಚ್ಚಿನ ಸಾಲವನ್ನು ಹೊಂದಿದ್ದಾರೆ ಎಂದು ಘೋಷಿಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಕೇರಳ ಚುನಾವಣೆ | ಕ್ರೈಸ್ತ ಸಮುದಾಯದ ಮತಗಳು ‘ಗೇಮ್‌ ಚೇಂಜರ್’ ಆಗಬಹುದೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಜಿರಪಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೇಂದ್ರ ರಾಜ್ಯ ಸಚಿವ ಜಾರ್ಜ್ ಕುರಿಯನ್ ವಿರುದ್ದ ಕೇವಲ ಒಂದು ಕ್ರಿಮಿನಲ್ ಪ್ರಕರಣವಿದೆ. 2014ರಲ್ಲಿ ತಿರುವನಂತಪುರದಲ್ಲಿ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂದರ್ಭದಲ್ಲಿ ದಾಖಲಾದ ಪ್ರಕರಣವಿದು ಎನ್ನಲಾಗಿದೆ. ಕುರಿಯನ್ ತಮ್ಮ ಅಫಿಡವಿಟ್‌ನಲ್ಲಿ 1.74 ಕೋಟಿ ರೂ.ಗಳಿಗೂ ಹೆಚ್ಚು ಚರ ಮತ್ತು ಸ್ಥಿರ ಆಸ್ತಿಗಳನ್ನು ಹೊಂದಿರುವುದಾಗಿ, ಎರಡು ಲಕ್ಷ ರೂ.ಗಳಷ್ಟು ಸಾಲ ಇರುವುದಾಗಿ ಘೋಷಿಸಿದ್ದಾರೆ.

ಕಜಕೂಟಂ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಮಾಜಿ ಕೇಂದ್ರ ಸಚಿವ ವಿ. ಮುರಳೀಧರನ್ ವಿರುದ್ಧ ಎಂಟು ಕ್ರಿಮಿನಲ್ ಪ್ರಕರಣಗಳಿವೆ. 20 ಲಕ್ಷ ರೂ.ಗಳಿಗೂ ಹೆಚ್ಚು ಮೌಲ್ಯದ ಚರಾಸ್ತಿಯನ್ನು ಘೋಷಿಸಿಕೊಂಡಿದ್ದಾರೆ. ತಮ್ಮ ಬಳಿ ಯಾವುದೇ ಸ್ಥಿರ ಆಸ್ತಿ ಇಲ್ಲ ಎಂದು ಅಫಿಡವಿಟ್‌ ಮೂಲಕ ಹೇಳಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಕೇರಳ ಚುನಾವಣೆಗೂ ಮುನ್ನ ಪಕ್ಷಗಳ ಸಂಕಟ: ಬಂಡಾಯ- ಪಕ್ಷಾಂತರ- ಉಚ್ಚಾಟನೆ ಸಂಕಷ್ಟ

ಪಾಲಕ್ಕಾಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ನಾಯಕಿ ಶೋಭಾ ಸುರೇಂದ್ರನ್ ವಿರುದ್ಧ 35 ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿವೆ. ಅವುಗಳಲ್ಲಿ ಹೆಚ್ಚಿನವು ವಿವಿಧ ಪ್ರತಿಭಟನೆಗಳಲ್ಲಿ ಹಾಜರಾಗಿದ್ದಾಗ ದಾಖಲಾಗಿರುವಂತದ್ದು ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಶೋಭಾ ತಮ್ಮ ಅಫಿಡವಿಟ್‌ನಲ್ಲಿ 1.94 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಚರಾಸ್ತಿ ಮತ್ತು ಸ್ಥಿರ ಆಸ್ತಿಯನ್ನು ಘೋಷಿಸಿದ್ದಾರೆ.

ವಟ್ಟಿಯೂರ್ಕಾವು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಕೌನ್ಸಿಲರ್ ಮತ್ತು ಮಾಜಿ ಡಿಜಿಪಿ ಆರ್. ಶ್ರೀಲೇಖಾ ಅವರು ತಮ್ಮ ಅಫಿಡವಿಟ್‌ನಲ್ಲಿ ಐದು ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಚರಾಸ್ತಿ ಮತ್ತು ಸ್ಥಿರ ಆಸ್ತಿಯನ್ನು ಘೋಷಿಸಿದ್ದಾರೆ. ಶ್ರೀಲೇಖಾ ವಿರುದ್ಧ ಪೋಕ್ಸೊ ಪ್ರಕರಣದ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸಿದ್ದಕ್ಕೆ ಒಂದು ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...