ಎನ್‌ಸಿಇಆರ್‌ಟಿ | ಪಠ್ಯ ಪರಿಷ್ಕರಣೆಗೆ ಸಮ್ಮತಿಸದ ಕೇರಳ ಸರ್ಕಾರ

Date:

  • ಎಲ್ಲ ರಾಜ್ಯಗಳ ಜೊತೆ ಸಮಾಲೋಚಿಸಿ ಮತ್ತೊಮ್ಮೆ ಪಠ್ಯ ಪರಿಷ್ಕರಣೆಗೆ ಒತ್ತಾಯ
  • ವಿದ್ಯಾರ್ಥಿಗಳಿಗೆ ಮೂಲ ಪಠ್ಯ ಬೋಧಿಸಲು ಕೇರಳ ಸರ್ಕಾರ ನಿರ್ಧಾರ ಎಂದ ಸಚಿವ

ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿಯ ರಾಷ್ಟ್ರೀಯ ಮಂಡಳಿ (ಎನ್‌ಸಿಇಆರ್‌ಟಿ) ಸೈದ್ಧಾಂತಿಕ ನೆಲೆಯಲ್ಲಿ ಪಠ್ಯ ಪರಿಷ್ಕರಣೆ ಮಾಡಿರುವುದನ್ನು ಕೇರಳ ಸರ್ಕಾರ ಅಸಮಧಾನ ವ್ಯಕ್ತಪಡಿಸಿದೆ.

ಈ ಕುರಿತು ಕೇರಳ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಅವರು ಶನಿವಾರ (ಏಪ್ರಿಲ್‌ 8) ಹೇಳಿಕೆ ನೀಡಿದ್ದು, ಸೈದ್ಧಾಂತಿಕ ನೆಲೆಯಲ್ಲಿ ಪಠ್ಯದ ಅನೇಕ ಭಾಗಗಳನ್ನು ಅಳಿಸಿ ಹಾಕಿರುವ ಮಂಡಳಿ ನಿರ್ಧಾರವನ್ನು ಕೇರಳ ಸರ್ಕಾರ ಒಪ್ಪುವುದಿಲ್ಲ. ಮಂಡಳಿಯು ಮತ್ತೊಮ್ಮೆ ಎಲ್ಲ ರಾಜ್ಯಗಳ ಪ್ರತಿನಿಧಿಗಳ ಜೊತೆ ಚರ್ಚಿಸಿ ಪಠ್ಯ ಪರಿಷ್ಕರಿಸಬೇಕು ಎಂದು ಒತ್ತಾಯಿಸಿದ್ದಾರೆ.

“12ನೇ ತರಗತಿಯ ಇತಿಹಾಸ ಪಠ್ಯಪುಸ್ತಕದಲ್ಲಿ ಸ್ವಾತಂತ್ರ್ಯ ನಂತರದ ಅವಧಿಯ ಭಾಗಗಳನ್ನು ತೆಗೆದುಹಾಕಿರುವುದಕ್ಕೆ ಕೇರಳ ಸರ್ಕಾರದ ಅಸಮ್ಮತಿಯಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ವಿರುದ್ಧವಾದ ಯಾವುದೇ ನಿರ್ಧಾರವನ್ನು ನಾವು ಒಪ್ಪುವುದಿಲ್ಲ” ಎಂದು ಶಿವನ್‌ಕುಟ್ಟಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ವರ್ಷ ಪಠ್ಯಕ್ರಮದಲ್ಲಿ ಸೈದ್ಧಾಂತಿಕ ನೆಲೆಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿದ ಸಂದರ್ಭದಲ್ಲಿ ಎನ್‌ಸಿಇಆರ್‌ಟಿ ಅಳಿಸಿ ಹಾಕಿದ ಕೆಲವು ಬಾಗಗಳು ವಿವಾದ ಸೃಷ್ಟಿಸಿದ್ದವು. ಮಂಡಳಿ ಸೂಚಿಸಿದ ವಿಜ್ಞಾನ ವಿಷಯದ ಭಾಗಗಳಿಗೆ ಕೇರಳ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ ಮಂಡಳಿ ಅಳಿಸಿ ಹಾಕಿದ ಮಾನವೀಯ ವಿಷಯದ ಭಾಗಗಳನ್ನು ಕೇರಳ ಶಿಕ್ಷಣ ಇಲಾಖೆ ಮತ್ತೆ ಸೇರಿಸಿತ್ತು.

ಕೇರಳ ಶೈಕ್ಷಣಿಕ ಮಂಡಳಿ ಮತ್ತು ಎನ್‌ಸಿಇಆರ್‌ಟಿ ಜತೆ ಮಾಡಿಕೊಂಡ ಒಪ್ಪಂದದ ಭಾಗವಾಗಿ ಪ್ರತಿವರ್ಷ ಪಠ್ಯ ಪುಸ್ತಕಗಳನ್ನು ಮರುಮುದ್ರಣ ಮಾಡಲಾಗುತ್ತದೆ. ಆದರೆ ಈ ಬಾರಿ ಮಂಡಳಿಯೇ ತಾನು ಕೈಬಿಟ್ಟ ಪಠ್ಯದ ಭಾಗಗಳನ್ನು ಹೊರತುಪಡಿಸಿ ಉಳಿದ ಪಠ್ಯಪುಸ್ತಕಗಳನ್ನು ಮುದ್ರಿಸುತ್ತಿದೆ.

ಈ ಸುದ್ದಿ ಓದಿದ್ದೀರಾ? ಅಣ್ಣನ ಜೊತೆ ಜಗಳ; ಕೋಪದಲ್ಲಿ ಮೊಬೈಲ್‌ ನುಂಗಿದ 15 ವರ್ಷದ ಬಾಲಕಿ!

“ಕೇರಳ ಸರ್ಕಾರ ಎನ್‌ಸಿಇಆರ್‌ಟಿನಿಂದ ಅಳಿಸದ ಭಾಗಗಳಿರುವ ಪಠ್ಯವನ್ನು ಪಡೆಯಲಿದೆ. ಇದನ್ನೇ ಮಕ್ಕಳಿಗೆ ಕಲಿಸಲು ನೀಡಲಾಗುತ್ತದೆ” ಎಂದು ಕೇರಳ ಸರ್ಕಾರದ ಅಧಿಕಾರಿಯೊಬ್ಬರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...