ಸೋದರನಿಂದ ಗರ್ಭವತಿ; ಅಪ್ರಾಪ್ತೆಯ ಗರ್ಭಪಾತಕ್ಕೆ ಕೇರಳ ಹೈಕೋರ್ಟ್ ಅನುಮತಿ

Date:

ತನ್ನ ಸೋದರನಿಂದಲೇ ಗರ್ಭಿಣಿಯಾದ ಅಪ್ರಾಪ್ತೆಗೆ ವೈದ್ಯಕೀಯ ಗರ್ಭಪಾತ ಮಾಡಿಸಿಕೊಳ್ಳಲು ಕೇರಳ ಹೈಕೋರ್ಟ್ ಅನುಮತಿ ನೀಡಿದೆ.

ವೈದ್ಯಕೀಯ ಮಂಡಳಿ ಸಲ್ಲಿಸಿದ ವರದಿ ಪರಿಗಣಿಸಿದ ನ್ಯಾಯಮೂರ್ತಿ ಜಿಯಾದ್ ರಹಮಾನ್ ಎ ಎ ಅವರು, “7 ತಿಂಗಳ ಗರ್ಭದ ಗರ್ಭಪಾತಕ್ಕೆ ಅನುಮತಿ ನೀಡದಿದ್ದರೆ ವಿವಿಧ ಸಾಮಾಜಿಕ ಮತ್ತು ವೈದ್ಯಕೀಯ ತೊಡಕುಗಳು ಉದ್ಭವಿಸುವ ಸಾಧ್ಯತೆಯಿದೆ” ಎಂದು ಅಭಿಪ್ರಾಯಪಟ್ಟರು.

ವೈದ್ಯಕೀಯವಾಗಿ ಗರ್ಭಾವಸ್ಥೆ ಅಂತ್ಯಗೊಳಿಸಲು ನಿರ್ದೇಶನ ನೀಡುವಂತೆ ಕೋರಿ ಅಪ್ರಾಪ್ತ ಬಾಲಕಿಯ ತಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಾಸ್ತವಾಂಶ ಪರಿಗಣಿಸಿ ಮಗು ಸೋದರನಿಂದಲೇ ಜನಿಸುವುದರಿಂದ ವಿವಿಧ ಸಾಮಾಜಿಕ ಮತ್ತು ವೈದ್ಯಕೀಯ ತೊಡಕುಗಳು ಉದ್ಭವಿಸುವ ಸಾಧ್ಯತೆಯಿದೆ. ಇಂತಹ ಸಂದರ್ಭಗಳಲ್ಲಿ ಗರ್ಭಾವಸ್ಥೆ ಅಂತ್ಯಗೊಳಿಸುವ ಅರ್ಜಿದಾರರ ಕೋರಿಕೆಗೆ ಅನುಮತಿ ನೀಡುವುದು ಅನಿವಾರ್ಯವಾಗುತ್ತದೆ. ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸೂಕ್ತ ಆದೇಶ ಹೊರಡಿಸಿದ ಹೊರತಾಗಿಯೂ ವೈದ್ಯಕೀಯ ಮಂಡಳಿ ಒತ್ತಿ ಹೇಳಿರುವಂತೆ ಜೀವಂತ ಮಗುವಿಗೆ ಜನ್ಮ ನೀಡುವ ಸಾಧ್ಯತೆಯನ್ನು ತಳ್ಳಿಹಾಕಲಾಗದು. ಹೀಗಾಗಿ, ಅರ್ಜಿದಾರರ ಮಗಳ ಗರ್ಭಾವಸ್ಥೆಯ ವೈದ್ಯಕೀಯ ಗರ್ಭಪಾತಕ್ಕೆ ಅನುಮತಿ ನೀಡಲು ನಾನು ಒಲವು ತೋರುತ್ತೇನೆ” ಎಂದು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ರಧಾನಿ ಮೋದಿ ಜಪಾನ್‌ಗೆ ಹೋದಾಗಲೆಲ್ಲ ಭಾರತದಲ್ಲಿ ನೋಟು ನಿಷೇಧ: ಖರ್ಗೆ ಆರೋಪ

“ಗರ್ಭಾವಸ್ಥೆ ಮುಂದುವರಿಸುವುದು ಹುಡುಗಿಯ ಸಾಮಾಜಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಗಂಭೀರವಾದ ಧಕ್ಕೆ ಉಂಟುಮಾಡುವ ಸಾಧ್ಯತೆಯಿದ್ದು, ಹದಿಹರೆಯದ ಗರ್ಭಧಾರಣೆಯ ತೊಡಕುಗಳಿಂದ ಆಕೆಯ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಆದ್ದರಿಂದ, ಅಪ್ರಾಪ್ತ ಬಾಲಕಿಯು ದೈಹಿಕವಾಗಿ ಮತ್ತು ಮಾನಸಿಕವಾಗಿ ವೈದ್ಯಕೀಯ ಗರ್ಭಧಾರಣೆಯ ಮುಕ್ತಾಯಕ್ಕೆ ಅರ್ಹಳಾಗಿದ್ದಾಳೆ” ಎಂದು ವೈದ್ಯಕೀಯ ಮಂಡಳಿ ಅಭಿಪ್ರಾಯಪಟ್ಟಿತ್ತು.

ಹೀಗಾಗಿ ನ್ಯಾಯಾಲಯ “ಯಾವುದೇ ವಿಳಂಬವಿಲ್ಲದೆ ಬಾಲಕಿಯ ಗರ್ಭಧಾರಣೆ ಅಂತ್ಯಗೊಳಿಸಲು ತುರ್ತು ಕ್ರಮ ತೆಗೆದುಕೊಳ್ಳುವಂತೆ” ಜಿಲ್ಲಾ ವೈದ್ಯಾಧಿಕಾರಿ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಅಧೀಕ್ಷಕರಿಗೆ ಸೂಚಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...