ಆಕ್ಷೇಪಾರ್ಹ ದೃಶ್ಯಗಳಿದ್ದರೆ ಬಿಗ್‌ಬಾಸ್‌ ಪ್ರಸಾರ ನಿಲ್ಲಿಸಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ

Date:

ಮಲಯಾಳಂ ರಿಯಾಲಿಟಿ ಶೋ ಬಿಗ್‌ಬಾಸ್‌ ಕಾರ್ಯಕ್ರಮದಲ್ಲಿ ಪ್ರಸಾರದ ನಿಯಮಾವಳಿಗಳನ್ನು ಉಲ್ಲಂಘಿಸುವ ಆಕ್ಷೇಪಾರ್ಹ ದೃಶ್ಯಗಳಿದ್ದರೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಎ ಮೊಹಮದ್ ಮುಸ್ತಕ್ಯೂ ಹಾಗೂ ಎಂ ಎ ಅಬ್ದುಲ್ ಹಕೀಮ್ ನೇತೃತ್ವದ ಪೀಠವು ನಿಯಮಾವಳಿಗಳನ್ನು ಉಲ್ಲಂಘಿಸುವ ರೀತಿಯಲ್ಲಿ ಸಮಸ್ಯೆಯು ಗಂಭಿರವಾಗಿದೆ ಎಂದರೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆಯು ಬಿಗ್‌ಬಾಸ್‌ ಕಾರ್ಯಕ್ರಮವನ್ನು ನಿಲ್ಲಿಸುವುದು ಸೂಕ್ತ ಎಂದು ನಿರ್ದೇಶಿಸಿತು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮ ಆಯೋಜಿಸುವ ಮಲಯಾಳಂ ನಟ ಮೋಹನ್ ಲಾಲ್, ನಿರ್ಮಾಣ ಸಂಸ್ಥೆ ಎಂಡಿಮೊಲ್‌ ಶೈನ್‌ ಇಂಡಿಯಾ ಹಾಗೂ ಪ್ರಸಾರ ಮಾಡುವ ವಿದ್ಯುನ್ಮಾನ ಮಾಧ್ಯಮಗಳಾದ ಏಷ್ಯಾನೆಟ್ ಹಾಗೂ ಡಿಸ್ನಿ ಸ್ಟಾರ್‌ ಸಂಸ್ಥೆಗಳಿಗೆ ನೋಟಿಸ್‌ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಲಯಾಳಂ ಬಿಗ್‌ಬಾಸ್‌ನಲ್ಲಿ ಸ್ಪರ್ಧಿಯಾಗಿರುವ ಹಸೀಬ್‌ ಎಸ್‌ಕೆ ಅವರಿಗೂ ಕೂಡ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತು. ಈ ಸ್ಪರ್ಧಿಯು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸ್ಪರ್ಧಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

ಬಿಗ್‌ಬಾಸ್‌ ಮಲಯಾಳಂ 6ನೇ ಆವೃತ್ತಿಯಲ್ಲಿ ಹಲ್ಲೆ ನಡೆಯುವಂತಹ ಘಟನೆಗಳು ಸಂಭವಿಸುತ್ತಿರುವುದರಿಂದ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರ್ಟ್‌ಗೆ ಮನವಿ ಮಾಡಿದರು.

ನಟ ಮೋಹನ್‌ ಲಾಲ್ ಕೂಡ ಸ್ಪರ್ಧಿಗಳೊಂದಿಗೆ ಸಂವಾದ ನಡೆಸಿದ ರೀತಿಯೂ ಕೂಡ ಘಟನೆಯ ಗಂಭೀರತೆಯನ್ನು ಎತ್ತಿ ತೋರಿಸಿದೆ. ಹಲ್ಲೆ ನಡೆಯುವ ಘಟನೆಯು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವುದಲ್ಲದೆ ಕೇಂದ್ರ ಮಾಹಿತಿ ಪ್ರಸಾರ ನಿಯಮಗಳನ್ನು ಕೂಡ ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ಕೋರ್ಟ್‌ಗೆ ಮನವರಿಕೆ ಮಾಡಿದರು.

ಅರ್ಜಿದಾರರ ಮನವಿಯನ್ನು ಆಲಿಸಿದ ಕೋರ್ಟ್ ಪ್ರಕರಣವು ಗಂಭೀರ ಆತಂಕವನ್ನು ಉಂಟುಮಾಡಿದೆ ಎಂದು ಅಭಿಪ್ರಾಯಪಟ್ಟಿತ್ತಲ್ಲದೆ ಕೇಂದ್ರವು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ನಿರ್ದೇಶಿಸಿ ವಿಚಾರಣೆಯನ್ನು ಮೇ 20ಕ್ಕೆ ಮುಂದೂಡಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...