ಭಾರತದಲ್ಲಿ ಟೆಲಿಗ್ರಾಂ ನಿರ್ಬಂಧ ಕೋರಿದ್ದ ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್

Date:

  • ಅಶ್ಲೀಲ ಸಂದೇಶಗಳು ಟೆಲಿಗ್ರಾಂನಲ್ಲಿ ಹಂಚಿಕೆಯಾಗುತ್ತಿವೆ ಎಂದು ಆರೋಪ
  • ನ್ಯಾ. ಎಸ್‌ ಮಣಿಕುಮಾರ್, ನ್ಯಾ. ಮುರಳಿ ಪುರುಷೋತ್ತಮನ್ ಪೀಠ ವಿಚಾರಣೆ

ಭಾರತದಲ್ಲಿ ತ್ವರಿತ ಸಂದೇಶ ನೀಡುವ ಟೆಲಿಗ್ರಾಂ ಸೇವೆಗೆ ನಿರ್ಬಂಧ ವಿಧಿಸುವಂತೆ ಕೋರಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ಬುಧವಾರ (ಮಾರ್ಚ್‌ 23) ವಜಾಗೊಳಿಸಿದೆ.

ಈ ಸಂಬಂಧ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್‌ ಮಣಿಕುಮಾರ್‌ ಮತ್ತು ಮುರಳಿ ಪುರುಷೋತ್ತಮನ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಆಕ್ಷೇಪಾರ್ಹ ಸಂಗತಿಗಳನ್ನು ತೆರವುಗೊಳಿಸುವುದಕ್ಕೆ ಸಂಬಂಧಿಸಿ ಮಾಹಿತಿ ತಂತ್ರಜ್ಞಾನ ನಿಯಮಗಳು, 2021 (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್‌ ಮಾಧ್ಯಮ ನೀತಿ ಸಂಹಿತೆ) ಅಡಿಯಲ್ಲಿ ನೇಮಕಗೊಂಡಿರುವ ಕುಂದು ಕೊರತೆ ಅಧಿಕಾರಿಗೆ ಅರ್ಜಿದಾರರು ಮನವಿ ಸಲ್ಲಿಸಬಹುದು ಎಂದು ಸೂಚಿಸಿ ಪೀಠ ಅರ್ಜಿ ವಿಲೇವಾರಿ ಮಾಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಸರ್ಕಾರದ ಪರ ವಕೀಲರ ಮೂಲಕ ಮಹಿಳೆಯೊಬ್ಬರು ಅರ್ಜಿ ಸಲ್ಲಿಸಿದ್ದರು. ಮಹಿಳೆಯರು ಮತ್ತು ಮಕ್ಕಳ ಕುರಿತ ಅಶ್ಲೀಲ ಸಂಗತಿಗಳು ಟೆಲಿಗ್ರಾಂ ಸಂದೇಶದಲ್ಲಿ ಹಂಚಿಕೆಯಾಗುತ್ತಿವೆ ಎಂದು ಮಹಿಳೆ ಅರ್ಜಿಯಲ್ಲಿ ದೂರಿದ್ದರು.

“ಭಯೋತ್ಪಾದನೆ ಪ್ರಸಾರ ಮಾಡಲು ಮತ್ತು ಸಮಾಜದಲ್ಲಿ ಅನಿಶ್ಚಿತ ವಾತಾವರಣ ಸೃಷ್ಟಿಸಲು ಟೆಲಿಗ್ರಾಂ ವೇದಿಕೆಯನ್ನು ಬಳಸಿಕೊಳ್ಳಲಾಗುತ್ತಿದೆ. ಭಾರತದಲ್ಲಿ ಟೆಲಿಗ್ರಾಂಗೆ ನಿರ್ದಿಷ್ಟ ಯೋಜನಾ ಅಧಿಕಾರಿ ಅಥವಾ ನೋಂದಾಯಿತ ಕಚೇರಿ ಇಲ್ಲ. ಇದರಲ್ಲಿ ಬಳಕೆದಾರರು ತಮ್ಮ ಗುರುತು ಬಹಿರಂಗಪಡಿಸುವ ಅಗತ್ಯವಿಲ್ಲದ ಕಾರಣ ತನಿಖಾ ಸಂಸ್ಥೆಗಳು ಸೂಕ್ತ ತನಿಖೆ ನಡೆಸಿಲ್ಲ” ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಮಹಿಳೆ ಕುಂದು ಕೊರತೆ ಅಧಿಕಾರಿಗೆ ದೂರು ಸಲ್ಲಿಸುವ ಬದಲಿಗೆ ಸೈಬರ್‌ ಕ್ರೈಂ ಘಟಕ ಅಥವಾ ಸಂಬಂಧಿತ ಸೂಕ್ತ ಕಾನೂನಿನಡಿ ದೂರು ದಾಖಲಿಸಬಹುದು ಎಂದು ಕೇಂದ್ರ ಸರ್ಕಾರದ ಪರ ವಕೀಲರು ತಿಳಿಸಿದರು.

3fc71c934f523957b32c0dd3d0e48cbcbd9cdd59923741ff837bb405a2b7ba0f?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...