ದೇವಾಲಯಕ್ಕೆ ಹಿಂದುಯೇತರಿಗೆ ಪ್ರವೇಶ ನಿರ್ಬಂಧ; ಕೇರಳ ಹೈಕೋರ್ಟ್‌ ಕಿಡಿ

Date:

ದೇವಾಲಯಗಳಿಗೆ ಹಿಂದುಯತರರು ಪ್ರವೇಶಿಸದಂತೆ ನಿರ್ಬಂಧ ಹೇರುವ ನಿಯಮಗಳ ಬಗ್ಗೆ ಕೇರಳ ಹೈಕೋರ್ಟ್‌ ಅಸಮಧಾನ ವ್ಯಕ್ತಪಡಿಸಿದೆ. ಹಿಂದುಯೇತರರು ದೇವಾಲಯ ಪ್ರವೇಶಿಸುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ನಿಯಮಗಳು ಸಮುದಾಯಗಳ ನಡುವೆ ಒಡಕು ಹುಟ್ಟುಹಾಕುವ ಸಾಧನಗಳಾಗಲು ಅನುಮತಿಸಬಾರದು ಎಂದು ಹೇಳಿದೆ.

2023ರಲ್ಲಿ ಪತ್ತನಂತಿಟ್ಟದ ಅಡೂರ್‌ನಲ್ಲಿರುವ ಪಾರ್ಥಸಾರಥಿ ದೇವಾಲಯಕ್ಕೆ ಇಬ್ಬರು ಕ್ರಿಶ್ಚಿಯನ್ ಪುರೋಹಿತರು ಅತಿಥಿಗಳಾಗಿ ಭಾಗವಹಿಸಿದ್ದರು. ದೇವಸ್ಥಾನಕ್ಕೆ ಅವರ ಪ್ರವೇಶವನ್ನು ಪ್ರಶ್ನಿಸಿ ಕುಲನಾಡದ ಸನಿಲ್ ನಾರಾಯಣನ್ ನಂಬೂದಿರಿ ಅವರು ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. “ಮತ್ತೊಂದು ಧರ್ಮದ ಮುಖಂಡರು ದೇವಾಲಯ ಪ್ರವೇಶಿಸುವುದು ದೇವಾಲಯದ ಸ್ಥಾಪಿತ ವಿಧಿವಿಧಾನಗಳು, ಬಳಕೆಗಳು ಹಾಗೂ ಪದ್ಧತಿಗಳ ಉಲ್ಲಂಘನೆಯೆಂದು ಅರ್ಥೈಸಲಾಗುವುದಿಲ್ಲ” ಎಂದು ಹೇಳಿದೆ.

ಗಮನಾರ್ಹವಾಗಿ, ಕೆಲವು ದೇವಾಲಯಗಳು ಹಿಂದುಯೇತರರಿಗೆ ಪ್ರವೇಶ ನಿರ್ಬಂಧ ಹೇರುವ ನಿಮಯಗಳನ್ನು ಜಾರಿಗೊಳಿಸಿವೆ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಾಲಯ, “ಹಿಂದುಯೇತರರಿಗೆ ಸಾರ್ವಜನಿಕ ಪೂಜಾ ಸ್ಥಳಕ್ಕೆ ಪ್ರವೇಶಿಸುವುದು ‘ಕೇರಳ ಹಿಂದು ಸಾರ್ವಜನಿಕ ಪೂಜಾ ಸ್ಥಳಗಳ ಕಾಯ್ದೆ-1965’ (ಮಾತೃ ಕಾಯ್ದೆ)ಗೆ ಹೊಂದಿಕೆಯಾಗುವುದಿಲ್ಲ. ಕಾಯ್ದೆಯ ಸೆಕ್ಷನ್ 3ಎ (ಪ್ರವೇಶ ಅಧಿಕಾರ), ಅಡಿಯಲ್ಲಿ ಧಾರ್ಮಿಕ ಪೂಜಾ ಸ್ಥಳಕ್ಕೆ ಹಿಂದುಯೇತರರಿಗೆ ಪ್ರವೇಶದ ಕುರಿತು ಚರ್ಚೆಗಳಿದ್ದು, ಅದನ್ನು ಸರ್ಕಾರವು ಪರಿಶೀಲಿಸಬೇಕು” ಎಂದು ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾನೂನಿನ ಉದ್ದೇಶ ಸಾಮಾಜಿಕ ಸಾಮರಸ್ಯವನ್ನು ಖಚಿತಪಡಿಸಿಕೊಳ್ಳುವುದು ಮತ್ತು ನಾಗರಿಕರ ಕಲ್ಯಾಣವನ್ನು ಉತ್ತೇಜಿಸುವುದು. ಕಾನೂನು ಸ್ಥಿರವಲ್ಲ; ಅದು ಬದಲಾಗುತ್ತಿರುವ ಸಮಾಜದ ಅಗತ್ಯತೆಗಳು ಮತ್ತು ವಾಸ್ತವಗಳೊಂದಿಗೆ ವಿಕಸನಗೊಳ್ಳುತ್ತದೆ. ಸಮಾಜವು ಮುಂದುವರೆದು ಹೆಚ್ಚು ಎಲ್ಲರನ್ನೂ ಒಳಗೊಳ್ಳುವಂತೆ, ಶಾಸನಬದ್ಧ ನಿಬಂಧನೆಗಳು ಮತ್ತು ಅಧೀನ ಶಾಸನಗಳನ್ನು ಸಾಂವಿಧಾನಿಕ ಮೌಲ್ಯಗಳು ಮತ್ತು ಸಾಮಾಜಿಕ ಒಗ್ಗಟ್ಟನ್ನು ಮುನ್ನಡೆಸುವ ರೀತಿಯಲ್ಲಿ ವ್ಯಾಖ್ಯಾನಿಸಬೇಕು” ಎಂದು ಕೋರ್ಟ್‌ ಹೇಳಿದೆ.

“ಶಾಸನಗಳು, ನಿಯಮಗಳು ಹಾಗೂ ನಿಬಂಧನೆಗಳು ವಿವಿಧ ಧರ್ಮಗಳು, ಜಾತಿಗಳು, ಉಪಜಾತಿಗಳು ಅಥವಾ ಸಮುದಾಯಗಳ ನಡುವೆ ಭಿನ್ನಾಭಿಪ್ರಾಯ ಅಥವಾ ಅಸಂಗತತೆಯನ್ನು ಹುಟ್ಟುಹಾಕುವ ಸಾಧನಗಳಾಗಲು ಅನುಮತಿಸಬಾರದು. ಇದಕ್ಕೆ ವಿರುದ್ಧವಾಗಿ, ಕಾನೂನು ಚೌಕಟ್ಟು ಪರಸ್ಪರ ಗೌರವ ಮತ್ತು ಸಹಬಾಳ್ವೆಯನ್ನು ಬೆಳೆಸುವ ಏಕೀಕೃತ ಶಕ್ತಿಯಾಗಿ ಕಾರ್ಯನಿರ್ವಹಿಸಬೇಕು” ಎಂದು ಅದು ಹೇಳಿದೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...