ಕೇರಳ ತಕರಾರು ಅರ್ಜಿ ವಜಾ : ‘ಕೆ‌ಎಸ್‌ಆರ್‌ಟಿಸಿ’ ಬಳಕೆಗೆ ಯಾವುದೇ ಅಭ್ಯಂತರವಿಲ್ಲ ಎಂದ ಮದ್ರಾಸ್ ಹೈಕೋರ್ಟ್‌

Date:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ‘ಕೆ‌ಎಸ್‌ಆರ್‌ಟಿಸಿ’ ಹೆಸರು‌ ಬಳಕೆಗೆ ಯಾವುದೇ ಅಭ್ಯಂತರವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಕೇರಳ ಸರ್ಕಾರದ ರಸ್ತೆ ಸಾರಿಗೆ ನಿಗಮವು (ಆರ್‌ಟಿಸಿ) ಸಲ್ಲಿಸಿದ್ದ ತಕರಾರು ಅರ್ಜಿಯನ್ನು ವಜಾಗೊಳಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ‘ಕೆಎಸ್ಆರ್‌ಟಿಸಿ’ ಎಂದು ಸಂಕ್ಷಿಪ್ತ ಬಳಕೆಗಾಗಿ ಟ್ರೇಡ್ ಮಾರ್ಕ್ ಪ್ರಮಾಣ ಪತ್ರವನ್ನು ನೀಡಲು ಅರ್ಜಿ ಸಲ್ಲಿಸಿದ್ದು, ಭಾರತ ಸರ್ಕಾರದ ಟ್ರೇಡ್ ಮಾರ್ಕ್ ರಿಜಿಸ್ಟ್ರಿಯಿಂದ 2013ರಲ್ಲಿ ಟ್ರೇಡ್ ಮಾರ್ಕ್ ಪ್ರಮಾಣ ಪತ್ರಗಳನ್ನು ಸಂಸ್ಥೆಯು 1973ರ ನವೆಂಬರ್ 1ರಿಂದ ಬಳಸುತ್ತಿರುವುದನ್ನು ಮಂಜೂರು ಮಾಡಲಾಗಿದೆ. ಭಾರತ ಸರ್ಕಾರದ ರಿಜಿಸ್ಟ್ರಾರ್ ಆಫ್ ಕಾಪಿ ರೈಟ್ಸ್ ಅವರಿಂದ ‘ಕೆಎಸ್‌ಆರ್‌ಟಿಸಿ’ ಲೋಗೋ ಮತ್ತು ‘ಗಂಡಭೇರುಂಡ ಗುರುತು’ ಬಳಕೆಗಾಗಿ ಕಾಪಿ ರೈಟ್‌ನ್ನು ಸಹ ಪಡೆಯಲಾಗಿದೆ.

ಇದಾದ ನಂತರ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಚೆನ್ನೈನಲ್ಲಿರುವ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಯ ಮುಂದೆ ಇದನ್ನು ಪ್ರಶ್ನಿಸಿದೆ. ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸಂಸ್ಥೆಯು 42 ವರ್ಷಗಳಿಂದ ಕೆಎಸ್‌ಆರ್‌ಟಿಸಿ ಹೆಸರನ್ನು ಬಳಸುತ್ತಿರುವ ಬಗ್ಗೆ ತಿಳಿದಿದೆ. ಆದ್ದರಿಂದ ಕೆಎಸ್‌ಆರ್‌ಟಿಸಿಯು ಪಡೆದಿರುವ ಟ್ರೇಡ್ ಮಾರ್ಕ್ ನೋಂದಣಿ ಅಮಾನ್ಯವಾಗಿದೆ ಎಂದು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ ವಾದಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇರಳ ಕೆಆರ್‌ಟಿಸಿ ಕೂಡ 2019ರಲ್ಲಿ ಕೆಎಸ್‌ಆರ್‌ಟಿಸಿಗೂ ಹಿಂದಿನಿಂದ ಸಂಕ್ಷಿಪ್ತ ಹೆಸರನ್ನು ಬಳಸುತ್ತಿರುವ ಕುರಿತು ನೋಂದಣಿ ಪಡೆದುಕೊಂಡಿದೆ.

ನಂತರ ಕೇಂದ್ರ ಸರ್ಕಾರವು ಐಪಿಎಬಿಯನ್ನು ರದ್ದುಗೊಳಿಸಿದ್ದು, ಐಪಿಎಬಿ ಮುಂದೆ ಬಾಕಿ ಉಳಿದಿದ್ದ ಪ್ರಕರಣಗಳನ್ನು ಚೆನ್ನೈನಲ್ಲಿರುವ ಮದ್ರಾಸ್ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | 202 ಕೆರೆಗಳ ಪೈಕಿ 159 ಕೆರೆಗಳಲ್ಲಿ ಒತ್ತುವರಿ: ಸರ್ವೇ ಕಾರ್ಯಕ್ಕಾಗಿ ಹೆಚ್ಚು ಭೂಮಾಪಕರನ್ನು ನಿಯೋಜಿಸಲು ಸೂಚನೆ

ಈ ಪ್ರಕರಣವು ಡಿ.12 ರಂದು ಮದ್ರಾಸ್ ಹೈಕೋರ್ಟ್ ಮುಂದೆ ಬಂದಿದ್ದು, ಕೇರಳ ಆರ್‌ಟಿಸಿ ಸಲ್ಲಿಸಿದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

ಕೇರಳ ಕೆಆರ್‌ಟಿಸಿ ಸಲ್ಲಿಸಿದ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ‌ (ಕೆಎಸ್‌ಆರ್‌ಟಿಸಿ) ಪ್ರಸಕ್ತ ಹಾಗೂ ಮುಂಬರುವ ದಿನಗಳಲ್ಲಿ ಸಹ ‘ಕೆಎಸ್ಆರ್‌ಟಿಸಿ’ ಹೆಸರನ್ನು ಬಳಸಲು ಯಾವುದೇ ಕಾನೂನು ಅಡಚಣೆಯಿರುವುದಿಲ್ಲ ಎಂದು ನಿಗಮ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...