ಬರ ಪರಿಹಾರಕ್ಕಾಗಿ ಕರ್ನಾಟಕಕ್ಕೆ 18,171 ಕೋಟಿ ರೂ. ಬಿಡುಗಡೆಗೆ ಕೇಂದ್ರಕ್ಕೆ ಖರ್ಗೆ ಮನವಿ

Date:

ಭೀಕರ ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿಆರ್‌ಎಫ್) 18,171 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬುಧವಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಶೂನ್ಯ ವೇಳೆಯಲ್ಲಿ ರಾಜ್ಯಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಖರ್ಗೆ, ಕರ್ನಾಟಕವು 123 ವರ್ಷಗಳಲ್ಲಿ ಅತ್ಯಂತ ಭೀಕರ ಬರಗಾಲವನ್ನು ಎದುರಿಸುತ್ತಿದೆ ಮತ್ತು ಬೆಳೆ ಹಾನಿ ಅಂದಾಜು 35,162 ಕೋಟಿ ರೂ. ಇದ್ದು, ಶೇ.40 ರಿಂದ 90 ರಷ್ಟು ಬೆಳೆಗಳಿಗೆ ಹಾನಿಯುಂಟಾಗಿದೆ ಎಂದು ಹೇಳಿದರು.

“ಸಂತ್ರಸ್ತರ ನೆರವಿಗಾಗಿ ರಾಜ್ಯ ಸರ್ಕಾರ ಎನ್‌ಡಿಆರ್‌ಎಫ್‌ನಿಂದ 18,171 ಕೋಟಿ ರೂ.ಗಳಿಗೆ ಮನವಿ ಸಲ್ಲಿಸದೆ. ಸಬ್ಸಿಡಿಗಳನ್ನು ಒದಗಿಸಲು, ಅನಪೇಕ್ಷಿತ ಪರಿಹಾರ ಮತ್ತು ಕಡಿಮೆ ಮಳೆಯಿಂದಾಗಿ ತಕ್ಷಣದ ಬೆಳವಣಿಗೆಯ ಕ್ರಮಗಳನ್ನು ಜಾರಿಗೆ ತರಲು ಈ ಹಣಕಾಸಿನ ನೆರವು ನಿರ್ಣಾಯಕವಾಗಿದೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೆಯಲ್ಲಿ ಗೆದ್ದಿರುವುದರಿಂದ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬಿಜೆಪಿ ಗಮನ ಹರಿಸುತ್ತಿಲ್ಲ. ಕರ್ನಾಟಕದ ವಿವಿಧ ಜಲಾಶಯಗಳಲ್ಲಿ ನೀರಿನ ಮಟ್ಟ ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಬಹುದು ಎಂದು ತಿಳಿಸಿದ ಖರ್ಗೆ, ಚೆನ್ನೈ ಸೇರಿದಂತೆ ತಮಿಳುನಾಡಿನ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿಯ ಬಗ್ಗೆಯೂ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಟ್ಟುವ ಮುನ್ನವೇ ಹೆಣ್ಣು ಜೀವಗಳನ್ನು ಬಲಿ ಪಡೆಯುತ್ತಿರುವ ಅನಾಗರಿಕ ವ್ಯವಸ್ಥೆ

ಈ ನಡುವೆ ಕಾಂಗ್ರೆಸ್‌ನ ಅಮೀ ಯಾಜ್ಞಿಕ್ ಅವರು ಮಹಿಳೆಯರ ಸುರಕ್ಷತೆಯ ವಿಷಯವನ್ನು ಪ್ರಸ್ತಾಪಿಸಿ, ಇದಕ್ಕೆ ಸಂಬಂಧಿಸಿದ ಎಲ್ಲ ಕಾನೂನುಗಳನ್ನು ಕಟ್ಟುನಿಟ್ಟಾ ಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

“ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವು ರಾಷ್ಟ್ರದ ಅಭಿವೃದ್ಧಿ ಮತ್ತು ಅದರ ಆರ್ಥಿಕತೆಯ ಮೇಲೆ ದೊಡ್ಡ ಹಾನಿಕಾರಕ ಪರಿಣಾಮವನ್ನು ಬೀರುತ್ತದೆ” ಎಂದು ಅಮೀ ಯಾಜ್ಞಿಕ್ ಹೇಳಿದರು.

ಕಾಂಗ್ರೆಸ್ ಸಂಸದ ರಾಜೀವ್ ಶುಕ್ಲಾ, ದೇಶದ ಜೈಲುಗಳಲ್ಲಿ ಬಂಧಿತರಾಗಿರುವ ವಿಚಾರಣಾಧೀನ ಕೈದಿಗಳ ದುಸ್ಥಿತಿಯ ವಿಷಯವನ್ನು ಪ್ರಸ್ತಾಪಿಸಿ, ಈ ವಿಷಯವನ್ನು ನಿಭಾಯಿಸಲು ನ್ಯಾಯಾಂಗ ಸುಧಾರಣೆ ಜಾರಿಗೆ ಒತ್ತಾಯಿಸಿದರು.

ಮತ್ತೊಬ್ಬ ಕಾಂಗ್ರೆಸ್ ಸಂಸದ ಇಮ್ರಾನ್ ಪ್ರತಾಪ್‌ಗರ್ಹಿ ಮಾತನಾಡಿ, ರೈಲುಗಳಲ್ಲಿನ ಸೌಲಭ್ಯಗಳನ್ನು ಸುಧಾರಿಸಲು ಸರ್ಕಾರ ಗಮನಹರಿಸಬೇಕು ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...