ನಮ್ಮನ್ನು ಪ್ರೀತಿಸಿ, ಮೋದಿಜಿಯನ್ನು ಮದುವೆಯಾದರು: ಎಚ್‌ಡಿ ದೇವೇಗೌಡರ ಕಾಲೆಳೆದ ಖರ್ಗೆ

Date:

ಕರ್ನಾಟಕದಲ್ಲಿ ಎಚ್‌ಡಿ ದೇವೇಗೌಡ ನೇತೃತ್ವದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಮಾತನಾಡುತ್ತಾ, “ನಮ್ಮನ್ನು ಪ್ರೀತಿಸಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಮದುವೆಯಾಗಿದ್ದಾರೆ” ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯು ರಾಜ್ಯಸಭೆಯನ್ನು ನಗೆಗಡಲಲ್ಲಿ ತೇಲಿಸಿತು.

ಸಂಸತ್ತಿನ ಮೇಲ್ಮನೆಯ ವಿರೋಧ ಪಕ್ಷದ ನಾಯಕ ಖರ್ಗೆ ಅವರು ಇಂದು ತಮ್ಮ ವಿದಾಯ ಭಾಷಣ ಮಾಡಿದರು. ಈ ಭಾಷಣದ ವೇಳೆ ರಾಜ್ಯಸಭೆಯಲ್ಲಿ ತಮ್ಮ ಅನುಭವದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲೇ ಜೆಡಿಎಸ್‌-ಬಿಜೆಪಿ ಮೈತ್ರಿ ಬಗ್ಗೆ ವ್ಯಂಗ್ಯವಾಡುತ್ತಾ ಎಚ್‌ಡಿ ದೇವೇಗೌಡರ ಕಾಲೆಳೆದರು.

ಇದನ್ನು ಓದಿದ್ದೀರಾ? ಮಲ್ಲಿಕಾರ್ಜುನ ಖರ್ಗೆ ನನಗೆ ಹಿರಿಯ ಅಣ್ಣ, ಭೇಟಿಗೆ ರಾಜಕೀಯ ಅರ್ಥ ಕಲ್ಪಿಸಬೇಕಿಲ್ಲ: ಸಚಿವ ಪರಮೇಶ್ವರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವೇಗೌಡರು ಪ್ರಧಾನಿಯಾಗಿದ್ದರು ಮತ್ತು ಹಲವಾರು ಇತರ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ನಾನು ಅವರನ್ನು 54 ವರ್ಷಗಳಿಂದ ತಿಳಿದಿದ್ದೇನೆ ಮತ್ತು ಅವರೊಂದಿಗೆ ಕೆಲಸ ಮಾಡಿದ್ದೇನೆ. ಆದರೆ ಏನಾಯಿತು ಎಂದು ನನಗೆ ತಿಳಿದಿಲ್ಲ. ಅವರು ನಮ್ಮೊಂದಿಗೆ ಡೇಟಿಂಗ್ ಮಾಡಿದರು, ನಮ್ಮನ್ನು ಪ್ರೀತಿಸಿದರು, ಆದರೆ ಪ್ರಧಾನಿ ನರೇಂದ್ರ ಮೋದಿಯವರನ್ನು ಮದುವೆಯಾದರು” ಎಂದು ವ್ಯಂಗ್ಯವಾಡಿದರು. ಖರ್ಗೆ ಹೇಳಿಕೆಗೆ ರಾಜ್ಯಸಭೆಯಲ್ಲಿ ಹಾಜರಿದ್ದ ಪ್ರಧಾನಿ ಕೂಡ ನಗುತ್ತಿರುವುದು ಕಂಡುಬಂದಿದೆ.

1996ರ ಲೋಕಸಭಾ ಚುನಾವಣೆಯ ನಂತರ ದೇವೇಗೌಡರು ಒಂದು ವರ್ಷಕ್ಕಿಂತ ಕಡಿಮೆ ಅವಧಿಗೆ ಪ್ರಧಾನಿಯಾಗಿದ್ದರು. ಈ ವೇಳೆ ಜೆಡಿಯು ಸರ್ಕಾರವನ್ನು ಕಾಂಗ್ರೆಸ್ ಬೆಂಬಲಿಸಿತ್ತು. 2018ರ ರಾಜ್ಯ ಚುನಾವಣೆಗೆ ಕರ್ನಾಟಕದಲ್ಲಿ ಎಚ್‌ಡಿ ದೇವೇಗೌಡರ ಜೆಡಿಎಸ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿತ್ತು ಮತ್ತು ಈ ಮೈತ್ರಿಕೂಟ ಗೆದ್ದಿತ್ತು. ದೇವೇಗೌಡರ ಮಗ ಎಚ್‌ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಆದರೆ ಹಲವಾರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಂಡಾಯವೆದ್ದ ನಂತರ 2019ರಲ್ಲಿ ರಾಜ್ಯ ಸರ್ಕಾರ ಪತನಗೊಂಡಿತು. ಅದಾದ ಬಳಿಕ ಈವರೆಗೆ ಕೋಮು ವಿಭಜನೆ ವಿಚಾರದಲ್ಲಿ ಯಾವ ಪಕ್ಷವನ್ನೂ ಟೀಕಿಸುತ್ತಿತ್ತೋ ಅದೇ ಪಕ್ಷದೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...