ಸಂಸದರ ಅಮಾನತು ಪೂರ್ವ ನಿರ್ಧಾರಿತ, ಪೂರ್ವ ನಿಯೋಜಿತ: ಧನಕರ್‌ಗೆ ಖರ್ಗೆ ಪತ್ರ

Date:

ಕಾಂಗ್ರೆಸ್ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯ ಅಧ್ಯಕ್ಷರಾದ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದಿದ್ದು, ವಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿದ್ದು ಪೂರ್ವನಿರ್ಧಾರಿತ ಹಾಗೂ ಪೂರ್ವ ನಿಯೋಜಿತ ಕೃತ್ಯವಾಗಿದೆ ಎಂದು ತಿಳಿಸಿದ್ದಾರೆ.

“ಅಮಾನತುಗೊಳಿಸುವಿಕೆಯು ವಿವೇಚನಾ ರಹಿತವಾಗಿದ್ದು, ಸಂಸತ್ತಿನಲ್ಲಿ ಹಾಜರಿಯಿಲ್ಲದ ಇಂಡಿಯಾ ಒಕ್ಕೂಟದ ಸದಸ್ಯರೊಬ್ಬರನ್ನು ಅಮಾನುಗೊಳಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ. ಯಾವುದಾದರೂ ಹಕ್ಕುಚ್ಯುತಿ ನಿರ್ಣಯದ ಅಸ್ತ್ರಗಳಿದ್ದರೆ ಅದನ್ನು ಪ್ರತಿಪಕ್ಷದ ಮೂಗಿಗೆ ಹಾಕಲಾಗುತ್ತದೆ. ಇದು ಸಂಸತ್ತನ್ನು ದುರ್ಬಲಗೊಳಿಸುವ ಸರ್ಕಾರದ ಉದ್ದೇಶಪೂರ್ವಕ ನಡೆಯಾಗಿದೆ. ಒಟ್ಟಾರೆ 146 ಸಂಸದರ ಅಮಾನತುಗೊಳಿಸಿರುವ ಕ್ರಮವು ಸರ್ಕಾರವು ಮತದಾರರ ಧ್ವನಿಯನ್ನು ಪರಿಣಾಮಕಾರಿಯಾಗಿ ಅಡಗಿಸುವುದಾಗಿದೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ಸಂಸತ್ತಿನ ಭದ್ರತಾ ಲೋಪದ ಕುರಿತು ಸದನದಲ್ಲಿ ಹೇಳಿಕೆ ನೀಡದ ಗೃಹ ಸಚಿವರು ಮತ್ತು ಕೇಂದ್ರವನ್ನು ಉಪರಾಷ್ಟ್ರಪತಿ ಕ್ಷಮಿಸಿರುವುದು ವಿಷಾದನೀಯ. ಸಂಸತ್ ಅಧಿವೇಶನದಲ್ಲಿದ್ದಾಗ ಗೌರವಾನ್ವಿತ ಗೃಹ ಸಚಿವರು ಟಿವಿ ಚಾನೆಲ್‌ನ ಮುಂದೆ ತಮ್ಮ ಮೊದಲ ಸಾರ್ವಜನಿಕ ಹೇಳಿಕೆಯನ್ನು ನೀಡಿದರು. ಆದರೆ ಪ್ರಜಾಪ್ರಭುತ್ವದ ದೇವಾಲಯದಲ್ಲಿಅಪಹಾಸ್ಯ ಮಾಡಿರುವುದನ್ನು ಅಧ್ಯಕ್ಷರು ಗಮನಿಸದಿರುವುದು ಹೆಚ್ಚು ವಿಷಾದನೀಯ” ಎಂದು ಖರ್ಗೆ ಹೇಳಿದ್ದಾರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

“ಗೃಹ ಸಚಿವರು ರಾಜ್ಯಸಭೆಗೆ ಹಾಜರಾಗುವುದಕ್ಕೂ ಮುನ್ನ ಹೆಚ್ಚಿನ ಸಂಖ್ಯೆಯ ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗುವುದು ಎಂದು ಕೇಂದ್ರ ಸಚಿವರೊಬ್ಬರು ವಿರೋಧ ಪಕ್ಷದ ನಾಯಕರಿಗೆ ತಿಳಿಸಿದ್ದರು. ಇಂತಹ ಬೆದರಿಕೆಗಳ ಬಗ್ಗೆ ಸಭಾಧ್ಯಕ್ಷಕರು ಪರಿಶೀಲಿಸಬೇಕೆಂದು ನಾವು ಬಯಸುತ್ತೇವೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ಅಮಾನತುಗಳ ಪರಿಣಾಮವು ಚರ್ಚೆಯಿಲ್ಲದೆ ಮಸೂದೆಗಳನ್ನು ಅಂಗೀಕರಿಸುವ ಮೂಲಕ ಶಾಸಕಾಂಗ ವ್ಯವಹಾರವನ್ನು ಸುಗಮಗೊಳಿಸಿದೆ ಎಂದು ಗೌರವಾನ್ವಿತ ಅಧ್ಯಕ್ಷರು ಭಾವಿಸುತ್ತಿರುವುದು ಬೇಸರವಾಗಿದೆ ”ಎಂದು ಹೇಳಿದ್ದಾರೆ.

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭದ್ರತಾ ಲೋಪಕ್ಕೆ ಕೇಂದ್ರ ಸಚಿವ ಅಮಿತ್ ಶಾ ಅವರು ಹೇಳಿಕೆ ನೀಡಬೇಕೆಂದು ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಲೋಕಸಭೆಯ 100 ಮತ್ತು ರಾಜ್ಯಸಭೆಯ 46 ಸಂಸದರನ್ನು ಒಳಗೊಂಡು 146 ಸಂಸದರನ್ನು ಅಮಾನತುಗೊಳಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...