ಶೀಘ್ರದಲ್ಲೇ ತೆಲಂಗಾಣದಲ್ಲಿ ಕಿಂಗ್‌ಫಿಶರ್‌ ಬಿಯರ್‌ ಗ್ರಾಹಕರಿಗೆ ಅಲಭ್ಯ

Date:

ತೆಲಂಗಾಣ ರಾಜ್ಯದಲ್ಲಿ ಕಿಂಗ್‌ಫಿಶರ್ ಮತ್ತು ಹೈನೆಕೆನ್ ಬಿಯರ್‌ಗಳ ತಯಾರಕರಾದ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್ , ತೆಲಂಗಾಣ ಬೆವರೇಜಸ್ ಕಾರ್ಪೊರೇಷನ್ ಲಿಮಿಟೆಡ್‌ಗೆ ತನ್ನ ಬಿಯರ್ ಪೂರೈಕೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.

2 ವರ್ಷದಿಂದಲೂ ತೆಲಂಗಾಣದಲ್ಲಿ ಬಿಯರ್‌ ಮೂಲ ದರ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕಂಪನಿ ಮನವಿ ಮಾಡಿತ್ತು. ಆದರೆ ತೆಲಂಗಾಣ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಇದರಿಂದಾಗಿ ಭಾರೀ ಪ್ರಮಾಣದ ನಷ್ಟವಾಗಿದೆ ಎಂದು ಕಂಪನಿ ಹೇಳಿಕೊಂಡಿದೆ. ಅಂದರೆ 2019-20ನೇ ಹಣಕಾಸು ವರ್ಷದಿಂದ ಯುನೈಟೆಡ್ ಬ್ರೇವರಿಸ್‌ ಬಿಯರ್‌ನ ಮೂಲ ಬೆಲೆಯನ್ನು ಟಿಜಿಬಿಸಿಎಲ್ ಪರಿಷ್ಕರಿಸಿಲ್ಲ, ಇದು ರಾಜ್ಯದಲ್ಲಿ ಕಂಪನಿಗೆ ಆರ್ಥಿಕ ನಷ್ಟಕ್ಕೆ ಕಾರಣ ಎಂದು ಕಂಪನಿ ದೂರಿದೆ.

ಹೆಚ್ಚುತ್ತಿರುವ ಬಿಯರ್‌ ತಯಾರಿಕೆಗೆ ಕಚ್ಚಾ ವಸ್ತುಗಳ ಬೆಲೆಗಳಿಂದ ಉತ್ಪಾದನಾ ವೆಚ್ಚದಲ್ಲಿ ಶೇ. 40 ರಷ್ಟು ಹೆಚ್ಚಳವನ್ನು ಸರಿದೂಗಿಸಲು 2024ರ ನವೆಂಬರ್‌ನಲ್ಲಿ ತೆಲಂಗಾಣ ಸರ್ಕಾರವನ್ನು ಕಂಪನಿ ಒತ್ತಾಯಿಸಿತ್ತು. ಅಂದರೆ ಪ್ರತಿ ಬಾಟಲಿಗೆ ಕನಿಷ್ಠ 10 ರೂ.ಗಳಷ್ಟು ಬಿಯರ್ ಬೆಲೆಯನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಲಾಗಿತ್ತು. ಕಳೆದ ವರ್ಷದ ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಬಿಯರ್ ಕಂಪನಿಗಳ ಬೇಡಿಕೆಗಳನ್ನು ತಿರಸ್ಕರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2019 ರಿಂದ ಉತ್ಪಾದನಾ ವೆಚ್ಚವನ್ನು ಆಧರಿಸಿದ ದರವೇ ಇಂದಿಗೂ ಇದೆ. ಇದು ಪ್ರತಿ ಬಿಯರ್ ಕೇಸ್‌ ಮೇಲೆ ಅಂದಾಜು 100 ರೂ. ನಷ್ಟಕ್ಕೆ ಕಾರಣವಾಗುತ್ತಿದೆ ಎಂದು ಕಂಪನಿ ಅಳಲು ತೋಡಿಕೊಂಡಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಬೆಳೆಸಿದ ಮಧ್ಯಮವರ್ಗ; ಮಧ್ಯಮವರ್ಗ ಮುಗಿಸಿದ ಮೋದಿ

ಟಿಜಿಬಿಸಿಎಲ್ ಕಂಪನಿಗೆ 3,900 ಕೋಟಿ ರೂ. ಪಾವತಿಸಿಲ್ಲ. ಇದು ಕಂಪನಿಯ ನಷ್ಟಕ್ಕೆ ಕಾರಣವಾಗಿದೆ. ಬ್ರೇವರಿಸ್‌ ಅಸೋಸಿಯೇಷನ್ ಆಫ್ ಇಂಡಿಯಾ (ಬಿಎಐ) ಕೂಡ ಮದ್ಯ ತಯಾರಿಕಾ ವಲಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದಿದೆ. ಇಲ್ಲಿಯವರೆಗೂ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಆದರೂ ಆರ್ಥಿಕ ಒತ್ತಡ ಪರಿಸ್ಥಿತಿಯ ನಡುವೆಯೂ ಗ್ರಾಹಕರಿಗೆ ಯಾವುದೇ ತೊಂದರೆಯಾಗದಂತೆ ಮದ್ಯ ಪೂರೈಸಲಾಗಿದೆ ಎಂದು ಕಂಪನಿ ಹೇಳಿಕೊಂಡಿದೆ.

ನಷ್ಟದಿಂದಾಗಿ ಬಿಯರ್‌ನ್ನು ಟಿಜಿಬಿಸಿಎಲ್‌ಗೆ ನಿರಂತರವಾಗಿ ಪೂರೈಸಲು ಸಾಧ್ಯವಿಲ್ಲ. ಯುನೈಟೆಡ್ ಬ್ರೇವರಿಸ್‌ ಕಂಪನಿಯು ಮದ್ಯ ಪೂರೈಕೆ ಮತ್ತು ಮಾರಾಟದಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕವಾಗಿ 24,500 ಕೋಟಿ ರೂ. ಆದಾಯ ಬರುತ್ತಿದೆ. ಆದರೆ, ಕಂಪನಿಗಳಿಗೆ ಲಾಭವಾಗುತ್ತಿಲ್ಲ. ಸರ್ಕಾರವು ಕೂಡಲೇ ಮದ್ಯದ ಬೆಲೆ ಏರಿಕೆಗೆ ಕ್ರಮಕೈಗೊಳ್ಳಬೇಕು ಎಂದು ಮದ್ಯ ತಯಾರಕರು ಒತ್ತಾಯಿಸಿದ್ದಾರೆ. ಇದಕ್ಕೆ ಸರ್ಕಾರ ಒಪ್ಪದಿದ್ದರೆ ಇನ್ಮುಂದೆ ತೆಲಂಗಾಣದಲ್ಲಿ ಕಿಂಗ್‌ ಫಿಶರ್‌ ಬಿಯರ್‌ ಪೂರೈಕೆ ಸಂಪೂರ್ಣವಾಗಿ ನಿಲ್ಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...