ಎಂಎಸ್‌ಪಿ | ಜನವರಿ 4ರಂದು ಕಿಸಾನ್ ಮಹಾ ಪಂಚಾಯತ್: ರೈತರ ಕರೆ

Date:

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡಬೇಕು. ಎಂಎಸ್‌ಪಿಗೆ ಕಾನೂನು ಖಾತ್ರಿ ಒದಗಿಸಬೇಕೆಂದು ಒತ್ತಾಯಿಸಿ ಪಂಜಾಬ್-ಹರಿಯಾಣ ರೈತರು ಸುದೀರ್ಘ ಹೋರಾಟ ನಡೆಸುತ್ತಿದ್ದಾರೆ. ಸಂಸತ್ ಅಧಿವೇಶನದಲ್ಲಿ ಕೃಷಿ ಉತ್ಪನ್ನಗಳನ್ನು ಎಂಎಸ್‌ಪಿ ಮೂಲಕವೇ ಖರೀದಿಸುತ್ತವೆಂದು ಹೇಳಿರುವ ಕೇಂದ್ರ ಸರ್ಕಾರ, ಈವರೆಗೆ ಎಂಎಸ್‌ಪಿ ಜಾರಿಗೆ ತಂದಿಲ್ಲ. ಮಾತ್ರವಲ್ಲದೆ, ಕಾನೂನು ಖಾತ್ರಿಯನ್ನೂ ಒಗಿಸಿಲ್ಲ. ಹೀಗಾಗಿ, ರೈತರು ತಮ್ಮ ಹೋರಾಟವನ್ನು ಮುಂದುವರೆಸಿದ್ದಾರೆ. ಡಿಸೆಂಬರ್ 30ರಂದು ಪಂಜಾಬ್‌ ಬಂದ್ ಮತ್ತು ಜನವರಿ 4ರಂದು ‘ಕಿಸಾನ್ ಮಹಾ ಪಂಚಾಯತ್’ ನಡೆಸಲು ಕರೆ ಕೊಟ್ಟಿದ್ದಾರೆ.

ಪಂಜಾಬ್ ರೈತರು ಪಂಜಾಬ್-ಹರಿಯಾಣ ನಡುವಿನ ಖನೌರಿ-ಶಂಭೂ ಗಡಿಯಲ್ಲಿ ಸುಮಾರು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ರೈತ ನಾಯಕ ಜಗಜೀತ್ ಸಿಂಗ್ ದಲೈವಾಲ್ ಅವರು 33 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರ ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸದ ಪಂಜಾಬ್ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

“ಸಾಲದ ಹೊರೆಯಿಂದ ದೇಶಾದ್ಯಂತ ಏಳು ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರನ್ನು ರಕ್ಷಿಸುವುದು ಅನಿವಾರ್ಯ. ರೈತರ ಉಳಿವಿಗಾಗಿ ನಾನು ಉಪವಾಸ ಕುಳಿತಿದ್ದೇನೆ. ನನ್ನ ಮೇಲೆ ಯಾರ ಒತ್ತಡವೂ ಇಲ್ಲ. ನಾನು ಗೆಲ್ಲುತ್ತೇನೆ ಅಥವಾ ಸಾಯುತ್ತೇನೆ. ಆದರೆ, ನನ್ನನ್ನು ಮುಟ್ಟಲು ಸರ್ಕಾರ ಬಿಡಬೇಡಿ” ಎಂದು ದಲೈವಾಲ್ ಅವರು ಹೋರಾಟನಿರತ ರೈತರಿಗೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೆಲ್ಲದರ ಬೆನ್ನಲ್ಲೇ, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಹಾಗೂ ಕಿಸಾನ್ ಮಝ್ದೂರ್ ಮೋರ್ಚಾ ಸಂಘಟನೆಗಳು ಡಿಸೆಂಬರ್ ಡಿಸೆಂಬರ್ 30ರಂದು ಪಂಜಾಬ್ ಬಂದ್‌ಗೆ ಕರೆಕೊಟ್ಟಿದೆ. ಅಲ್ಲದೆ, ಜನವರಿ 4ರಂದು ಬೃಹತ್ ಕಿಸಾನ್ ಮಹಾ ಪಂಚಾಯತ್‌ ನಡೆಸಲು ನಿರ್ಧರಿಸಿವೆ.

“ನಾವು ಜನವರಿ 4ರಂದು ಖನೌರಿಯಲ್ಲಿ ಬೃಹತ್ ಕಿಸಾನ್ ಮಹಾ ಪಂಚಾಯತ್ ನಡೆಸಲಿದ್ದೇವೆ. ವಿವಿಧ ರಾಜ್ಯಗಳ ರೈತರು ಪಾಲ್ಗೊಳ್ಳಲಿದ್ದಾರೆ” ಎಸ್‌ಕೆಎಂ ನಾಯಕ ಕಾಕಾ ಸಿಂಗ್ ಕೋತ್ರಾ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...