ಕಿಸಾನ್ ಮಹಾಪಂಚಾಯತ್‌ | ದೆಹಲಿಯತ್ತ ರೈತರು; ಅರೆಸೇನಾ ಪಡೆ ಮೊರೆಹೋದ ಪೊಲೀಸರು

Date:

ಗುರುವಾರ ಕಿಸಾನ್ ಮಹಾಪಂಚಾಯತ್‌ಗಾಗಿ ಪಂಜಾಬ್‌ನಿಂದ ಸಾವಿರಾರು ರೈತರು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳುತ್ತಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಬೃಹತ್ ಮಹಾಪಂಚಾಯತ್ ಆಯೋಜಿಸಿದೆ.

ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ. ಆದರೆ, ಒಂದು ವೇಳೆ, ರೈತರು ದೆಹಲಿ ಪ್ರವೇಶಿಸದಂತೆ ತಡೆದರೆ ಧರಣಿ ನಡೆಸಿ, ರೈಲು ಸಂಚಾರ ನಿರ್ಬಂಧಿಸುತ್ತೇವೆ ಎಂದು ಎಸ್‌ಕೆಎಂ ಹೇಳಿದೆ.

ಎಸ್‌ಕೆಎಂ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್ ಮಾತನಾಡಿ, “ಮಹಾಪಂಚಾಯತ್‌ನಲ್ಲಿ ಭಾಗವಹಿಸಲು ಸಾವಿರಾರು ರೈತರು, ಕೃಷಿ ಕಾರ್ಮಿಕರು ಮತ್ತು ಗ್ರಾಮೀಣ ಜನರು ದೆಹಲಿಯತ್ತ ಪಾದಯಾತ್ರೆ ಆರಂಭಿಸಿದ್ದಾರೆ. ರೈತರನ್ನು ರಾಷ್ಟ್ರ ರಾಜಧಾನಿ ತಲುಪದಂತೆ ತಡೆದರೆ, ಧರಣಿ ಮತ್ತು ರೈಲು ರೋಕೋ ಪ್ರತಿಭಟನೆಗಳನ್ನು ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಂಜಾಬ್‌ನಿಂದ 50,000ಕ್ಕೂ ಹೆಚ್ಚು ರೈತರು ಬಸ್‌ಗಳು, ಟ್ರಕ್‌ಗಳು ಮತ್ತು ರೈಲುಗಳಲ್ಲಿ ಮಹಾಪಂಚಾಯತ್‌ನಲ್ಲಿ ಪಾಲ್ಗೊಳ್ಳಲು ದೆಹಲಿಗೆ ಹೋಗುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ನಾವು ರೈತರಿಗೆ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡಿದ್ದೇವೆ. ಅವರು ಕಾನೂನು ಮತ್ತು ಸುವ್ಯವಸ್ಥೆಗೆ ಅಡ್ಡಿ ಮಾಡುವುದಿಲ್ಲವೆಂದು ರೈತರು ಭರವಸೆ ನೀಡಿದ್ದಾರೆ” ಎಂದು ದೆಹಲಿ ಕೇಂದ್ರ ಡಿಸಿಪಿ ಎಂ ಹರ್ಷವರ್ಧನ್ ಹೇಳಿದ್ದಾರೆ.

“ರಾಮಲೀಲಾ ಮೈದಾನದಲ್ಲಿ 5,000 ಜನರು ಸೇರಲು ಅವಕಾಶ ನೀಡಲಾಗಿದೆ. ಯಾವುದೇ ಟ್ರ್ಯಾಕ್ಟರ್-ಟ್ರಾಲಿ ಅಥವಾ ಮೆರವಣಿಗೆಗೆ ಅವಕಾಶವಿಲ್ಲ” ಎಂದು ಡಿಸಿಪಿ ಹೇಳಿದ್ದಾರೆ. ಅಲ್ಲದೆ, ಅರೆಸೇನಾ ಪಡೆಗಳನ್ನು ನಿಯೋಜಿಸಲು ಸರ್ಕಾರವನ್ನು ಕೋರಿರುವುದಾಗಿ ತಿಳಿಸಿದ್ದಾರೆ.

“ಪ್ರಚೋದನಾಕಾರಿ ಭಾಷಣ ಮಾಡಿದರೆ, ವೇದಿಕೆಯಿಂದ ಸ್ಪೀಕರ್‌ಗಳನ್ನು ತೆಗೆದುಹಾಕುವುದಾಗಿ ರೈತರಿಗೆ ಸೂಚಿಸಿದ್ದೇವೆ. ಮಧ್ಯಾಹ್ನ 3 ಗಂಟೆ ಒಳಗೆ ಕಾರ್ಯಕ್ರಮ ಮುಗಿಸಲು ಕೇಳಿದ್ದೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...