ರಾಜಸ್ಥಾನ, ಮಧ್ಯ ಪ್ರದೇಶದಲ್ಲೂ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಕೆಎಂಎಫ್​ ಸಿದ್ಧತೆ

Date:

ದೇಶದಲ್ಲೇ ಅತಿಹೆಚ್ಚು ಹಾಲು ಉತ್ಪಾದಿಸುವ ರಾಜ್ಯಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕದ ಕೆಎಂಎಫ್ ಸಂಸ್ಥೆ ರಾಜಸ್ಥಾನ ಹಾಗೂ ಮಧ್ಯ ಪ್ರದೇಶದಲ್ಲಿ ಕೂಡ ತನ್ನ ಉತ್ಪನ್ನಗಳನ್ನು ವಿಸ್ತರಿಸಲು ಮುಂದಾಗಿದೆ.

ದೆಹಲಿಯಲ್ಲಿ ಮಾರಾಟ ಆರಂಭಿಸಿದ ಕೆಲವೇ ತಿಂಗಳುಗಳಲ್ಲಿ ಇದೀಗ ರಾಜಸ್ಥಾನ ಹಾಗೂ ಮಧ್ಯ ಪ್ರದೇಶಗಳಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಕೆಎಂಫ್​​ ಚಿಂತನೆ ನಡೆಸಿದೆ. ದಕ್ಷಿಣ ಭಾರತದ ವ್ಯಾಪ್ತಿ ಮೀರಿ ಮಾರುಕಟ್ಟೆ ವಿಸ್ತರಿಸಿಕೊಳ್ಳುವ ಯೋಜನೆಯ ಭಾಗವಾಗಿ ಕೆಎಂಎಫ್​ ಈ ಯೋಜನೆಗೆ ಮುಂದಾಗಿದೆ ಎನ್ನಲಾಗಿದೆ.

ರಾಜಸ್ಥಾನದಲ್ಲಿ ಹಾಲು ಸಂಗ್ರಹ ಪ್ರಾರಂಭಿಸಲು ಮತ್ತು ಕೊ-ಪ್ಯಾಕೇಜಿಂಗ್ ಸೆಂಟರ್​ಗಳನ್ನು ಸ್ಥಾಪಿಸಲು ಕೆಎಂಎಫ್ ಯೋಜಿಸಿದೆ. ಪೂರೈಕೆ ಸರಪಳಿಯನ್ನು ಬಲಪಡಿಸಲು ಮತ್ತು ಉತ್ತರ ಭಾರತದ ಮಾರುಕಟ್ಟೆಯಲ್ಲಿ ಪ್ರಭಾವ ಹೆಚ್ಚಿಸಲು ರಾಜಸ್ಥಾನ ಮಾತ್ರವಲ್ಲದೆ, ಮಧ್ಯಪ್ರದೇಶವನ್ನು ಪ್ರಮುಖ ಭಾಗವಾಗಿ ಪರಿಗಣಿಸಲಾಗುತ್ತಿದೆ ಎಂದು ಕೆಎಂಎಫ್ ಅಧಿಕಾರಿಯೊಬ್ಬರ ಹೇಳಿಕೆ ಉಲ್ಲೇಖಿಸಿ ಮಾಧ್ಯಮವೊಂದು’ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ಭಾಗದ ಮಾರುಕಟ್ಟೆಗಳಿಗೆ ಹತ್ತಿರದಲ್ಲಿ ಕೊ-ಪ್ಯಾಕೇಜಿಂಗ್ ಘಟಕಗಳನ್ನು ಸ್ಥಾಪಿಸುವ ಮೂಲಕ, ಹಾಲು ಮತ್ತು ಹಾಲಿನ ಉತ್ಪನ್ನಗಳ ಸಾಗಾಟ ದೂರವನ್ನು ಕಡಿಮೆ ಮಾಡುವುದು ಕೆಎಂಎಫ್ ಗುರಿಯಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಸಂವಿಧಾನವೇ ಸಾರ್ವಭೌಮ’ ಎನ್ನುವ ಸತ್ಯ ಮರೆತರೇ ಧನಕರ್?

ಕೊ-ಪ್ಯಾಕೇಜಿಂಗ್ ಕೇಂದ್ರಗಳು ಕೆಎಂಎಫ್‌ಗೆ ಹತ್ತಿರದ ಸ್ಥಳಗಳಿಂದ ಅಥವಾ ಕರ್ನಾಟಕದಿಂದ ಹಾಲು ಅಥವಾ ಸಂಸ್ಕರಿಸಿದ ಡೈರಿ ಉತ್ಪನ್ನಗಳನ್ನು ಸ್ವೀಕರಿ ಶೇಖರಿಸಿ ಇಡಲು ಸಹಾಯ ಮಾಡುತ್ತವೆ. ಅಲ್ಲದೆ, ಮಾರುಕಟ್ಟೆಗೆ ಸನಿಹದಲ್ಲೇ ಅಂತಿಮ ಪ್ಯಾಕೇಜಿಂಗ್ ನಿರ್ವಹಿಸಲು ಅನುವು ಮಾಡಿಕೊಡುತ್ತದೆ. ಇದರಿಂದ ತಾಜಾ ಉತ್ಪನ್ನಗಳು ಚಿಲ್ಲರೆ ಮಾರಾಟ ಮಳಿಗೆಗಳನ್ನು ವೇಗವಾಗಿ ತಲುಪುವಂತೆ ಮಾಡಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಕೆಎಂಎಫ್ ತನ್ನ ಬೇಕರಿ ಮತ್ತು ಮಿಠಾಯಿ ವಿಭಾಗದ ಅಡಿಯಲ್ಲಿ ಬ್ರೆಡ್, ಬನ್ ಮತ್ತು ಕ್ರೀಮ್ ಬನ್ ಎಂಬ ಮೂರು ವಸ್ತುಗಳನ್ನು ಮಾತ್ರ ಮಾರಾಟ ಮಾಡುತ್ತಿದೆ. ಸ್ಲೈಸ್ ಕೇಕ್‌ಗಳು, ಹಣ್ಣಿನ ಕೇಕ್‌ಗಳು, ಕಪ್‌ಕೇಕ್‌ಗಳು, ಮಫಿನ್‌ಗಳು ಮತ್ತು ಇನ್ನೂ ಹೆಚ್ಚಿನ ಹೊಸ ಉತ್ಪನ್ನಗಳನ್ನು ಸೇರಿಸಿ ಉತ್ಪನ್ನಗಳನ್ನು ವಿಸ್ತರಿಸಲು ಚಿಂತನೆ ನಡೆಸಿದೆ. ಈ ಉತ್ಪನ್ನಗಳ ಅಡಿಯಲ್ಲಿ ಒಟ್ಟು 22 ರೂಪಾಂತರಗಳನ್ನು ಮಾರುಕಟ್ಟೆಗೆ ಪೂರೈಸಲು ಉದ್ದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...