ಕೊಚ್ಚಿ | ಕಂಪನಿಯ ಟಾರ್ಗೆಟ್‌ ಪೂರೈಸದ್ದಕ್ಕೆ ಸಿಬ್ಬಂದಿಗಳಿಗೆ ಅಮಾನವೀಯ ಶಿಕ್ಷೆ, ಕ್ರೌರ್ಯ

Date:

ಉದ್ಯೋಗಿಗಳ ಮೇಲೆ ಉದ್ಯೋಗದಾರರ ದೌರ್ಜನ್ಯ, ದಬ್ಬಾಳಿಕೆ, ಕಿರುಕುಳಗಳು ಆಗ್ಗಾಗ್ಗೆ ವರದಿಯಾಗುತ್ತಿವೆ. ಮಾತ್ರವಲ್ಲ, ದೌರ್ಜನ್ಯಗಳು ಮಿತಿಮೀರುತ್ತಿವೆ. ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡದಿಂದಾಗಿ ಹಲವು ಉದ್ಯೋಗಿಗಳು ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದಾರೆ. ಇದೀಗ, ಕಂಪನಿಯೊಂದು ತಾನು ಹಾಕಿದ್ದ ಟಾರ್ಗೆಟ್‌ ಪೂರೈಸದ ಕಾರಣಕ್ಕೆ, ಉದ್ಯೋಗಿಗಳಿಗೆ ಅಮಾನವೀಯವಾಗಿ ಶಿಕ್ಷೆ ನೀಡಿ, ದೌರ್ಜನ್ಯ ಎಸಗಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ಬೆಳಕಿಗೆ ಬಂದಿದೆ.

ಕೊಚ್ಚಿಯಲ್ಲಿರುವ ‘ಹಿಂದುಸ್ತಾನ್ ಪವರ್ ಲಿಂಕ್ಸ್‌’ ಎಂಬ ಕಂಪನಿಯು ತಮ್ಮ ಸಿಬ್ಬಂದಿಗಳಿಗೆ ನಾಯಿಯಂತೆ ಕುತ್ತಿಗೆಗೆ ಸರಪಳಿ ಹಾಕಿ, ನಾಯಿಯಂತೆ ನಡೆಸಿ, ನಾಯಿಯಂತೆ ಆಹಾರ ತಿನ್ನುವಂತೆ ಮಾಡಿದೆ. ಮಾತ್ರವಲ್ಲದ, ಸಿಬ್ಬಂದಿಗಳು ಪರಸ್ಪರರ ಗುಪ್ತಾಂಗವನ್ನು ಹಿಡಿದುಕೊಳ್ಳುವಂತೆ ಒತ್ತಾಯಿಸಿ ಕ್ರೌರ್ಯ ಮೆರೆದಿದೆ ಎಂದು ವರದಿಯಾಗಿದೆ.

ಕಂಪನಿಯ ಕ್ರೌರ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, ಸಿಬ್ಬಂದಿಯೊಬ್ಬರ ಕುತ್ತಿಗೆಗೆ ಸರಪಳಿ ಹಾಕಿದ್ದು, ಅವರನ್ನು ನಾಯಿಯಂತೆ ನಡೆಸಿದ್ದು, ನಾಯಿಯ ರೀತಿಯಲ್ಲಿಯೇ ಆಹಾರ ತಿನ್ನುವಂತೆ ಮಾಡಿರುವುದು, ಬಾಯಿಂದ ನಾಣ್ಯಗಳನ್ನು ಎತ್ತಿಕೊಳ್ಳುವಂತೆ ಒತ್ತಾಯಿಸುವುದು ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಂಪನಿಯ ಮ್ಯಾನೇಜರ್‌ ಈ ರೀತಿ ಕ್ರೌರ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಇಂತಹ ಅಮಾನವೀಯ ಕ್ರೌರ್ಯದ ಶಿಕ್ಷೆಗೆ ಒಳಗಾಗಿರುವ ಸಿಬ್ಬಂದಿಗಳು ಕಂಪನಿಯ ಮಾರ್ಕೆಟಿಂಗ್‌ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಅವರು ಮನೆ-ಮನೆಗೆ ತೆರಳಿ ಕಂಪನಿಯ ಉತ್ಪನ್ನಗಳನ್ನು ಮಾರಾಟ ಮಾಡಬೇಕಿತ್ತು. ಆದರೆ, ತಿಂಗಳ ಟಾರ್ಗೆಟ್‌ನಷ್ಟು ಉತ್ಪನ್ನಗಳನ್ನು ಮಾರಾಟ ಮಾಡಲಾಗದ ಕಾರಣ ಅವರ ಮೇಲೆ ಇಂತಹ ಕ್ರೌರ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.

ಈ ವರದಿ ಓದಿದ್ದೀರಾ?: ವಕ್ಫ್ ಮಸೂದೆ ಬಗ್ಗೆ ಚರ್ಚೆ ವೇಳೆ ರಾಹುಲ್ ಗಾಂಧಿ ಮೌನ ಸರಿಯೇ?

ಕ್ರೌರ್ಯದ ವಿಡಿಯೋ ವೈರಲ್ ಆದ ಬಳಿಕ, ಘಟನೆ ಬಗ್ಗೆ ತನಿಖೆ ನಡೆಸುವಂತೆ ಕೇರಳ ಕಾರ್ಮಿಕ ಸಚಿವ ವಿ ಶಿವನ್‌ಕುಟ್ಟಿ ಆದೇಶಿಸಿದ್ದಾರೆ. ಆದರೆ, ಕಂಪನಿ ವಿರುದ್ದದ ಆರೋಪವನ್ನು ಕಂಪನಿಯ ಮಾಲೀಕ ನಿರಾಕರಿಸಿದ್ದಾರೆ. ಘಟನೆಗೂ ತಮ್ಮ ಕಂಪನಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಮತ್ತೊಂದು ಗಮನಾರ್ಹ ವಿವಾರವೆಂದರೆ, ಇದೇ ಕಂಪನಿಯ ಮಾಲೀಕನನ್ನು ಈ ಹಿಂದೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಆತ ಈಗ ಜಾಮೀನು ಪಡೆದು ಹೊರಬಂದಿದ್ದಾರೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...