ಕೋಲ್ಕತ್ತಾ ಪ್ರಕರಣ: ನ್ಯಾಯ, ಸುರಕ್ಷತೆಗಾಗಿ ಕಿರಿಯ ವೈದ್ಯರ ಉಪವಾಸ ಸತ್ಯಾಗ್ರಹ

Date:

ಕೋಲ್ಕತ್ತಾದ ಆರ್‌.ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ, ಕೆಲಸದ ಸ್ಥಳಗಳಲ್ಲಿ ಸುರಕ್ಷತೆಗಾಗಿ ಒತ್ತಾಯಿಸಿ ಟ್ರೈನಿ ವೈದ್ಯರು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಇದೀಗ, ತಮ್ಮ ಹೋರಾಟವನ್ನು ಉಪವಾಸ ಸತ್ಯಾಗ್ರಹಕ್ಕೆ ಬದಲಿಸಿದ್ದು, ಭಾನುವಾರದಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಅತ್ಯಾಚಾರ-ಕೊಲೆಗೀಡಾದ ಸಹೋದ್ಯೋಗಿಗೆ ನ್ಯಾಯ ಒದಗಿಸಬೇಕು. ಆರ್.ಜಿ ಕರ್ ಮೆಡಿಕಲ್ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಬೇಕು. ಆರೋಗ್ಯ ಕಾರ್ಯಕರ್ತರಿಗೆ ಕೆಲಸದ ಸ್ಥಳದಲ್ಲಿ ಭದ್ರತೆ ಒದಗಿಸಬೇಕು. ಆರೋಗ್ಯ ಸೌಲಭ್ಯಗಳಲ್ಲಿರುವ ‘ಬೆದರಿಕೆ ಸಂಸ್ಕೃತಿ’ಯನ್ನು ಕೊನೆಗಾಣಿಸಬೇಕು ಎಂದು ಪ್ರತಿಭಟನಾನಿರತ ವೈದ್ಯರು ಒತ್ತಾಯಿಸಿದ್ದಾರೆ. ತಮ್ಮ ಈ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರಕ್ಕೆ ಶನಿವಾರ ರಾತ್ರಿ 8:30ರವರಗೆ ಗಡುವು ನೀಡಿದ್ದರು. ಆದರೆ, ಸರ್ಕಾರವು ತಮ್ಮ ಬೇಡಿಕೆಗಳನ್ನು ಇನ್ನೂ ಈಡೇರಿಸದ ಕಾರಣ, ಇದೀಗ ಆರು ಮಂದಿ ಟ್ರೈನಿ ವೈದ್ಯರು ಉಪವಾಸ ಸತ್ಯಾಗ್ರಹ ಆರಂಬಿಸಿದ್ದಾರೆ.

ಅವರ ಹೋರಾಟಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದೆ. ಸಾರ್ವಜನಿಕರು, ಹಿರಿಯ ವೈದ್ಯರು ಸೇರಿದಂತೆ ಎಲ್ಲರೂ ಪ್ರತಿಭಟನಾ ಸ್ಥಳದಲ್ಲಿ ನೆರದಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಉಪವಾಸ ಸತ್ಯಾಗ್ರಹದ ವೇಳೆ ತಮ್ಮ ಸಹೋದ್ಯೋಗಿಗಳಲ್ಲಿ ಯಾರಾದರೂ ಅಸ್ವಸ್ಥರಾದರೆ ರಾಜ್ಯವೇ ಹೊಣೆಯಾಗಲಿದೆ ಎಂದು ಕಿರಿಯ ವೈದ್ಯರು ಎಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜನರ ಬೆಂಬಲವು ನಮ್ಮ ಸಹೋದ್ಯೋಗಿಯ ಭೀಕರ ಹತ್ಯೆಯ ವಿರುದ್ಧದ ನಮ್ಮ ಪ್ರತಿಭಟನೆಯನ್ನು ಮುಂದುವರಿಸಲು ಧೈರ್ಯ ಮತ್ತು ಉತ್ಸಾಹ ನೀಡಿದೆ. ನಮ್ಮ ಬೇಡಿಕೆಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೂ, ಇನ್ನೂ ನ್ಯಾಯ ಸಿಕ್ಕಿಲ್ಲ ಎಂಬುದನ್ನು ಜನರು ಮರೆತಿಲ್ಲ” ಎಂದು ಪ್ರತಿಭಟನಾನಿರತ ವೈದ್ಯರಲ್ಲಿ ಒಬ್ಬರಾದ ದೇಬಾಶಿಶ್ ಹಲ್ದರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...