39 ವರ್ಷಗಳಲ್ಲಿಯೇ ಅತ್ಯಂತ ಭೀಕರ ಮಳೆ ಕಂಡ ಕೋಲ್ಕತ್ತಾ

Date:

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ನಗರವು 39 ವರ್ಷಗಳಲ್ಲಿಯೇ ಅತ್ಯಂತ ಭೀಕರ ಮಳೆ ಕಂಡಿದೆ. ಮಳೆ ಅಬ್ಬರಕ್ಕೆ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಸೋಮವಾರ ರಾತ್ರಿಯಿಂದ ಬಿಟ್ಟೂಬಿಡೆ ಕೋಲ್ಕತ್ತಾದಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ವಸತಿ ಪ್ರದೇಶಗಳು ಮತ್ತು ಕೈಗಾರಿಕಾ ಪ್ರದೇಶಗಳು ಜಲಾವೃತಗೊಂಡಿವೆ. ರಸ್ತೆಗಳು ನೀರಿನಲ್ಲಿ ಮುಳುಗಿವೆ. ರೈಲು ಸೇವೆಗಳು ಅಸ್ತವ್ಯಸ್ತಗೊಂಡಿವೆ. ವಿದ್ಯುತ್‌ ಕಂಬಗಳು ನೆಲಕ್ಕುರುಳಿದ ಪರಿಣಾಮ ನಿಂತ ನೀರಿನಲ್ಲಿ ವಿದ್ಯುತ್ ಪ್ರವಹಿಸಿ, 9 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನಗರದ ಹಲವಾರು ಭಾಗಗಳಲ್ಲಿ, ಜನರು ಮೊಣಕಾಲುವರೆಗಿನ ನೀರಿನಲ್ಲಿ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ 251.4 ಮಿ.ಮೀ. ಮಳೆಯಾಗಿದೆ. 1986ರ ನಂತರ ಇದೇ ಮೊದಲ ಬಾರಿಗೆ ಕೋಲ್ಕತ್ತಾ ಭೀಕರ ಮಳೆ ಕಂಡಿದೆ. ಇದು, ಕಳೆದ 137 ವರ್ಷಗಳಲ್ಲಿಯೇ ಆರನೇ ಬೃಹತ್ ಮಳೆಯಾಗಿದೆ.

ಈ ಲೇಖನ ಓದಿದ್ದೀರಾ?: ಸೌಜನ್ಯ ಕೊಲೆಯ ಪ್ರಮುಖ ಸಾಕ್ಷಿಯಾಗುವರೇ ಚಿನ್ನಯ್ಯ? ವಿಡಿಯೋದಲ್ಲಿದೆ ಅಚ್ಚರಿಯ ಹೇಳಿಕೆ

ಬಂಗಾಳಕೊಲ್ಲಿಯ ಈಶಾನ್ಯ ಭಾಗದಲ್ಲಿ ವಾಯುಭಾರ ಕುಸಿತದಿಂದಾಗಿ, ಹೆಚ್ಚು ಮಳೆ ಸುರಿಯುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಕೆಲವು ದಿನಗಳ ಕಾಲ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ ಎಂದು ಇಲಾಖೆ ಸೂಚನೆ ನೀಡಿದೆ.

ಮಳೆಯಿಂದಾಗಿ ರೈಲು ಸಂಚಾರವೂ ಕೂಡ ಸ್ಥಗಿತಗೊಂಡದೆ. ಪರಿಣಾಮ, ನೂರಾರು ಪ್ರಯಾಣಿಕರು ರೈಲು ನಿಲ್ದಾಣದಲ್ಲಿಯೇ ಕಾಯುತ್ತಿದ್ದಾರೆ. ಮಕ್ಕಳು ಮತ್ತು ವೃದ್ಧರು ಮನೆಯೊಳಗೆ ಕಾಲ ದೂಡಬೇಕಾದ ಪರಿಸ್ಥಿತಿ ಎದುರಾಗಿದೆ.

ಪಶ್ಚಿಮ ಬಂಗಾಳದ ಅತ್ಯಂತ ಬೃಹತ್ ಮತ್ತು ಜನಪ್ರಿಯ ವಾರ್ಷಿಕ ಹಬ್ಬ ದುರ್ಗಾ ಪೂಜೆಗೆ ಕೋಲ್ಕತ್ತಾ ಸಿದ್ದವಾಗುತ್ತಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಹು ಪೂಜೆಗಳನ್ನು ಈಗಾಗಲೇ ಉದ್ಘಾಟಿಸಿದ್ದು, ಹಬ್ಬಗಳು ಪ್ರಾರಂಭವಾಗಿವೆ. ಇದೇ ಸಮಯದಲ್ಲಿಯೇ ಮಳೆ ಆರ್ಭಟ ಹೆಚ್ಚಾಗಿದೆ. ದುರ್ಗಾ ಪೂಜೆಗಾಗಿ ಹತ್ತಾರು ಸಾವಿರ ಜನರು ಬರುವ ಪ್ರದೇಶಗಳು ಜಲಾವೃತಗೊಂಡಿವೆ. ಹಬ್ಬದ ಆಚರಣೆಗೂ ಅಡಚಣೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...