ಕೊಲ್ಕತ್ತಾ | ಅಪರಿಚಿತ ಮಹಿಳೆಯ ಕತ್ತರಿಸಿದ ದೇಹದ ಭಾಗಗಳು 3 ಪ್ಲಾಸ್ಟಿಕ್​ ಚೀಲಗಳಲ್ಲಿ ಪತ್ತೆ

Date:

ಮೂರು ಪ್ಲಾಸ್ಟಿಕ್‌ ಚೀಲಗಳಲ್ಲಿ ಮಹಿಳೆಯ ಕತ್ತರಿಸಿದ ದೇಹದ ಭಾಗಗಳು ಕೊಳೆತ ಸ್ಥಿತಿಯಲ್ಲಿ ಖಾಲಿ ಕಟ್ಟಡವೊಂದರಲ್ಲಿ ಪತ್ತೆಯಾದ ಭಯಾನಕ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ವಾಟ್‌ಗುಂಗೆ ಪ್ರದೇಶದ ಸಸ್ಥಿತಾಲಾ ರಸ್ತೆಯಲ್ಲಿರುವ ಸಿಐಎಸ್​ಎಫ್​ ಕ್ವಾಟರ್ಸ್‌ನ ಪಾಳು ಬಿದ್ದ ಕಟ್ಟಡದಲ್ಲಿ ಮೃತದೇಹ ಪತ್ತೆಯಾಗಿದೆ.

ಮಂಗಳವಾರ ಮಧ್ಯಾಹ್ನ ಕಟ್ಟಡದಿಂದ ದುರ್ವಾಸನೆ ಬರುತ್ತಿರುವ ಹಿನ್ನೆಲೆ, ಸ್ಥಳೀಯ ಕೆಲ ನಿವಾಸಿಗಳು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಪೊಲೀಸರು ಬಂದಾಗ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಮೂರು ಕಪ್ಪು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಲಾಗಿದ್ದ ಮಹಿಳೆಯ ಕತ್ತರಿಸಿದ ದೇಹದ ಭಾಗಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯ ಈ ಘಟನೆ ಸ್ಥಳೀಯರಲ್ಲಿ ಆತಂಕ ಸೃಷ್ಟಿ ಮಾಡಿದೆ.

“ಮೂರು ಪ್ಲಾಸ್ಟಿಕ್ ಚೀಲಗಳಲ್ಲಿ ಪ್ಯಾಕ್ ಮಾಡಲಾದ ಅಪರಿಚಿತ ಮಹಿಳೆಯ ಕೊಳೆತ ದೇಹದ ಭಾಗಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯ ಈ ಘಟನೆ ಸ್ಥಳೀಯ ನಿವಾಸಿಗಳಲ್ಲಿ ಆಘಾತವನ್ನುಂಟು ಮಾಡಿದೆ. ಮಹಿಳೆಯ ದೇಹದ ಇನ್ನೂ ಹಲವಾರು ಭಾಗಗಳು ಕಾಣೆಯಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆ ವಯಸ್ಸು 30-35ರ ಆಸುಪಾಸು ಇರಬಹುದು ಅಂದಾಜಿಸಲಾಗಿದೆ. ಆಕೆಯ ಹಣೆ ಮೇಲೆ ಸಿಂಧೂರವಿದ್ದ ಕಾರಣ ಮದುವೆಯಾಗಿರಬಹುದು ಎಂದು ಅಂದಾಜಿಸಿದ್ದಾರೆ. ಮಹಿಳೆಯನ್ನು ಆ ರೀತಿ ಭಯಾನಕವಾಗಿ ಹತ್ಯೆ ಮಾಡಿರುವ ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಮಂಗಳವಾರ ತಡರಾತ್ರಿವರೆಗೂ ಪೊಲೀಸರು ಮಹಿಳೆಯ ಗುರುತು ಪತ್ತೆ ಮಾಡಲು ಪ್ರಯತ್ನಿಸಿದ್ದಾರೆ. ಆದರೆ, ಇದುವರೆಗೂ ತಿಳಿದುಬಂದಿಲ್ಲ.

“ನಾವು ಮೂರು ಪ್ಲಾಸ್ಟಿಕ್ ಚೀಲಗಳಲ್ಲಿನ ಅಪರಿಚಿತ ಮಹಿಳೆಯ ದೇಹದ ಭಾಗಗಳನ್ನು ವಶಪಡಿಸಿಕೊಂಡಿದ್ದೇವೆ. ಸಂತ್ರಸ್ತೆಯ ಹಣೆಯ ಮೇಲೆ ಸಿಂಧೂರವಿದ್ದು, ಅವಳು ಮದುವೆಯಾಗಿರಬಹುದು ಎಂದು ಇದು ಸೂಚಿಸುತ್ತದೆ. ಚೀಲದೊಳಗೆ ಇಟ್ಟಿಗೆ ಇತ್ತು. ಪ್ಲಾಸ್ಟಿಕ್ ಚೀಲಗಳನ್ನು ನದಿ ಅಥವಾ ಕಾಲುವೆಗೆ ಎಸೆಯಲು ಪ್ರಯತ್ನಿಸಲಾಗಿದೆ ಎಂದು ತಿಳಿದುಬಂದಿದೆ” ಎಂದು ತನಿಖೆಯಲ್ಲಿ ಸ್ಥಳೀಯ ವಾಟ್‌ಗುಂಗೆ ಪೊಲೀಸರಿಗೆ ಸಹಾಯ ಮಾಡುತ್ತಿರುವ ಪತ್ತೇದಾರಿ ವಿಭಾಗದ ನರಹತ್ಯೆ ವಿಭಾಗದ ತನಿಖಾಧಿಕಾರಿ ಹೇಳಿದರು.

“ಅಪರಿಚಿತ ಮಹಿಳೆಯ ಕೈಗಳು, ಪಾದಗಳು ಹಾಗೂ ದೇಹದ ಹೊಟ್ಟೆಯ ಭಾಗ ಕಾಣೆಯಾಗಿದೆ” ಎಂದು ಜಂಟಿ ಸಿಪಿ (ಅಪರಾಧ) ಸೈಯದ್ ವಕ್ವಾರ್ ರಜಾ ಖಚಿತಪಡಿಸಿದ್ದಾರೆ.

ಮಹಿಳೆಯನ್ನು ಅದೇ ಪ್ರದೇಶದಲ್ಲಿ ಕೊಲೆ ಮಾಡಲಾಗಿದೆಯೇ ಅಥವಾ ಬೇರೆಡೆಗೆ ಕೊಲೆ ಮಾಡಿ ಅಲ್ಲಿ ತಂದು ಎಸೆಯಲಾಗಿದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ. ಚಲಿಸುವ ವಾಹನದಿಂದ ಯಾರೋ ಈ ಚೀಲಗಳನ್ನು ಎಸೆದಿರಬಹುದು ಎಂದು ಅಂದಾಜಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ವಿಸ್ತೃತ ತನಿಖೆ ಆರಂಭಿಸಿದ್ದಾರೆ. ಕೋಲ್ಕತ್ತಾ ಪೊಲೀಸ್‌ನ ನರಹತ್ಯೆ ವಿಭಾಗದ ಅಧಿಕಾರಿಗಳು ಕೂಡ ಸ್ನಿಫರ್ ಡಾಗ್‌ಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆಪಿಎಸ್​ಸಿ ಸದಸ್ಯತ್ವ ಕೊಡಿಸುತ್ತೇವೆಂದು ₹4 ಕೋಟಿ ವಂಚನೆ; ನಾಲ್ವರ ಬಂಧನ

ಕಟ್ಟಡದ ಒಳಗೆ ಹೋದ ಸ್ಥಳೀಯರು ಪ್ಲಾಸ್ಟಿಕ್ ಚೀಲಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಡಿಸಿ ಹರಿಕೃಷ್ಣ ರೈ ತಿಳಿಸಿದ್ದಾರೆ.

“ಮಹಿಳೆಯನ್ನು ಬೇರೆಡೆ ಕೊಲೆ ಮಾಡಲಾಗಿದೆ ಮತ್ತು ದೇಹದ ಭಾಗಗಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ಹಾಕಿ ನಾನಾ ಸ್ಥಳಗಳಲ್ಲಿ ಎಸೆದಿದ್ದಾರೆ ಎಂದು ತೋರುತ್ತಿದೆ. ನಾವು ಆಕೆಯ ಗುರುತನ್ನು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದೇವೆ. ದೇಹದ ಇತರ ಭಾಗಗಳನ್ನು ಪತ್ತೆ ಹಚ್ಚಲು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಅವರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...