ರಾಜ್ಯ ಸ್ಥಾನಮಾನ ಬೇಡಿಕೆಗೆ ಆಗ್ರಹಿಸಿ ಲಡಾಖ್‌ನಲ್ಲಿ ಸಾವಿರಾರು ಜನರಿಂದ ಪ್ರತಿಭಟನೆ

Date:

ಕೇಂದ್ರಾಡಳಿತ ಪ್ರದೇಶ ಲಡಾಖ್‌ ಅನ್ನು 6ನೇ ಪರಿಚ್ಛೇದದಡಿ ರಾಜ್ಯ ಸ್ಥಾನಮಾನ ಹಾಗೂ ಸಾಂವಿಧಾನಿಕ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ಲಡಾಖ್‌ನ ಸಾವಿರಾರು ಮಂದಿ ಪ್ರತಿಭಟನೆ ನಡೆಸಿದರು.

ಲೇಹ್‌ ಕೇಂದ್ರ ಸಂಸ್ಥೆ(ಎಲ್‌ಎಬಿ), ಕಾರ್ಗಿಲ್ ಪ್ರಜಾಸತ್ತಾತ್ಮಕ ಒಕ್ಕೂಟ(ಕೆಡಿಎ) ಆಯೋಜಿಸಿದ್ದ ಜಂಟಿ ಪ್ರತಿಭಟನೆಯಲ್ಲಿ ಸಾವಿರಾರು ಪುರುಷರು ಹಾಗೂ ಮಹಿಳೆಯರು ಕೊರೆಯುವ ಚಳಿಯನ್ನು ಲೆಕ್ಕಿಸದೆ ಪಾಲ್ಗೊಂಡಿದ್ದರು. ಲಡಾಖ್‌ನಲ್ಲಿ ವಾಣಿಜ್ಯೋದ್ಯಮ ಸಂಪೂರ್ಣ ಸ್ಥಗಿತಗೊಂಡಿತ್ತು.

ಎಲ್‌ಎಬಿ ಹಾಗೂ ಕೆಡಿಎ ಕೇಂದ್ರಾಡಳಿತ ಪ್ರದೇಶವಾಗಿರುವ ಲಡಾಖ್‌ ಅನ್ನು ಸಂವಿಧಾನದ ಆರನೇ ಪರಿಚ್ಚೇದದಡಿ ರಾಜ್ಯದ ಸ್ಥಾನಮಾನಕ್ಕಾಗಿ ಒತ್ತಾಯಿಸಿ 2021ರಿಂದ ಒತ್ತಾಯಿಸುತ್ತಾ ಬಂದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ಸ್ಥಾನಮಾನದ ಜೊತೆಗೆ ಬುಡಕಟ್ಟು ಸ್ಥಾನಮಾನ, ಸ್ಥಳೀಯರಿಗೆ ಉದ್ಯೋಗ ಮೀಸಲು ಹಾಗೂ ಲೇಹ್ ಹಾಗೂ ಕಾರ್ಗಿಲ್ ಜಿಲ್ಲೆಗಳನ್ನು ಪ್ರತ್ಯೇಕ ಲೋಕಸಭಾ ಕ್ಷೇತ್ರಗಳನ್ನಾಗಿ ರಚಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ಆಗಸ್ಟ್ 5, 2019ರಂದು ಲಡಾಖ್ ಅನ್ನು ಜಮ್ಮು ಮತ್ತು ಕಾಶ್ಮೀರದಿಂದ  ಸಂವಿಧಾನದ 370 ಹಾಗೂ 35ಎ ವಿಧಿಯನ್ನು ರದ್ದುಗೊಳಿಸಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾರ್ಪಡಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪೇ?

ಅಂದಿನಿಂದ ಲಡಾಖ್ ನಿವಾಸಿಗಳು ಕೇಂದ್ರಾಡಳಿತ ಪ್ರದೇಶದ ಸುದೀರ್ಘ ಕಾಲದ ಆಡಳಿತಾತ್ಮಕ ನೀತಿಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿ ಸಂಪೂರ್ಣ ಸ್ಥಾನಮಾನಕ್ಕಾಗಿ ಪ್ರತಿಪಾದಿಸುತ್ತ ಬಂದಿದ್ದಾರೆ. ರಾಜ್ಯ ಸ್ಥಾನಮಾನದಿಂದ ಪ್ರತ್ಯೇಕ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವುದರ ಜೊತೆ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಬಹುದು ಎಂಬುದು ಸ್ಥಳೀಯರ ಬೇಡಿಕೆಯಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಜನವರಿ 2023ರ ಮೊದಲು ಕೇಂದ್ರ ಗೃಹ ಸಚಿವಾಲಯ ಕೇಂದ್ರ ಸಚಿವರ ನೇತೃತ್ವದಲ್ಲಿ ಲಡಾಖ್ ಜನರಿಗೆ ಭೂಮಿ ಮತ್ತು ಉದ್ಯೋಗ ರಕ್ಷಣೆಯನ್ನು ಖಚಿತಗೊಳಿಸುವುದನ್ನು ಒಳಗೊಂಡು ಉನ್ನತ ಹಂತದ ಸಮಿತಿಯನ್ನು ಸ್ಥಾಪಿಸಲಾಗಿತ್ತು.

ಲಡಾಖ್ ಲೋಕಸೇವಾ ಆಯೋಗ ಸ್ಥಾಪಿಸುವುದರ ಮೂಲಕ ಲಡಾಖ್‌ ವಿದ್ಯಾರ್ಥಿಗಳಿಗೆ ಉದ್ಯೋಗ ಭದ್ರತೆ ಒದಗಿಸಿಕೊಡುವ ಜ್ಞಾಪನಾ ಮನವಿಯ ಬೇಡಿಕೆಯನ್ನು ಲಡಾಖ್‌ ಸಂಘಸಂಸ್ಥೆಗಳ ಮುಖ್ಯಸ್ಥರು ಇತ್ತೀಚಿಗೆ ಸಲ್ಲಿಸಿದ್ದರು.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸಂಘ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಕೇಂದ್ರ ಸಚಿವರ ನಡುವೆ ಸಭೆಯ ದಿನಾಂಕ ಈ ತಿಂಗಳಲ್ಲಿ(ಫೆಬ್ರವರಿ) ಪೂರ್ಣಗೊಳ್ಳಲಿದೆ.

ಜ್ಞಾಪನಾ ಮನವಿಯು ಜಮ್ಮು ಕಾಶ್ಮೀರ ಕಾಯ್ದೆ 2019ರ ಪುನರ್ರಚನೆ ತಿದ್ದುಪಡಿಯ ಕರಡು ಮಸೂದೆಯನ್ನು ಒಳಗೊಂಡಿದೆ. ಸಿಕ್ಕೀಂನಂತೆ ಎರಡು ಲೋಕಸಭಾ ಸ್ಥಾನ ಹಾಗೂ ಒಂದು ರಾಜ್ಯಸಭಾ ಸ್ಥಾನ ಒಳಗೊಂಡಿರಬೇಕೆಂದು ಉದ್ದೇಶಿತ ಕರಡು ಮಸೂದೆ ತಿದ್ದುಪಡಿ ಹೇಳುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...