ಭೂ ವಿವಾದ | ಮೂಲ ಅರ್ಜಿದಾರರು ಸತ್ತಿದ್ದಾರೆಂದು 66 ವರ್ಷಗಳ ಬಳಿಕ ಪ್ರಕರಣ ರದ್ದುಗೊಳಿಸಿದ ಕೋರ್ಟ್‌

Date:

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೂ ವಿವಾದ ಪ್ರಕರಣವೊಂದು ಬರೋಬ್ಬರಿ 66 ವರ್ಷಗಳ ಕಾಲ ವಿಚಾರಣೆ ನಡೆದಿದೆ. ಆದಾಗ್ಯೂ, ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯ ದೊರೆತಿಲ್ಲ. ಬದಲಾಗಿ, ವಿವಾದ ಸಂಬಂಧ ಅರ್ಜಿ ಸಲ್ಲಿಸಿದ್ದ ಮೂಲ ಅರ್ಜಿದಾರರು ಸಾವನ್ನಪ್ಪಿದ್ದಾರೆ ಎಂಬ ಕಾರಣಕ್ಕೆ, ಪ್ರಕರಣವನ್ನು ನ್ಯಾಯಾಲಯ ರದ್ದುಗೊಳಿಸಿದೆ.

1959ರಲ್ಲಿ ಭೂ ವಿವಾದ ಸಂಬಂಧಿತ ಪ್ರಕರಣ ದಾಖಲಾಗಿತ್ತು. ಅರ್ಜಿದಾರ ಮೋಹನ್ ಲಾಲ್ ಎಂಬವರು ದೆಹಲಿಯ ಬಸಾಯಿ ದಾರಾಪುರ ಪ್ರದೇಶದಲ್ಲಿರುವ ತಮ್ಮ ಭೂಮಿಯಲ್ಲಿ ಡೆವಪರ್‌ಗಳು ಮನೆ ಕಟ್ಟಿದ್ದಾರೆಂದು ಆರೋಪಿಸಿದ್ದರು.

ಅರ್ಜಿ ದಾಖಲಿಸಿದ್ದ ಸಮಯದಲ್ಲಿ, “ತಮ್ಮ ಒಪ್ಪಿಗೆ ಇಲ್ಲದೆ ಕಟ್ಟಡ ನಿರ್ಮಾಣ ಮಾಡಲಾಗಿದೆ. ಆ ಭೂಮಿಯಲ್ಲಿ ಡೆವಲಪರ್‌ಗಳು ಕಾರ್ಯಾಚರಣೆ ನಡೆಸದಂತೆ ತಡೆಯಾಜ್ಞೆ ನೀಡಬೇಕು. ತಮಗೆ ಪರಿಹಾರ ಕೊಡಿಸಬೇಕು” ಎಂದು ಅರ್ಜಿದಾರ ಮೋಹನ್ ಲಾಲ್ ವಾದಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಪ್ರಕರಣವನ್ನು ಪ್ರಸ್ತುತ ದೆಹಲಿಯ ನಗರ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶ ಕಪಿಲ್ ಗುಪ್ತಾ ವಿಚಾರಣೆ ನಡೆಸುತ್ತಿದ್ದರು. ಆದಾಗ್ಯೂ, ಈಗ ಮೂಲ ಅರ್ಜಿದಾರರು (ಮೋಹನ್ ಲಾಲ್) ಸಾವನ್ನಪ್ಪಿದ್ದು, “ಅವರು ಪರಿಹಾರವನ್ನು ಮಾತ್ರವೇ ಕೋರಿದ್ದರಿಂದ, ಇಂತಹ ಪರಿಸ್ಥಿತಿಯಲ್ಲಿ ಪ್ರಕರಣದ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಪ್ರಕರಣವು ವಜಾಗೊಳಿಸಲು ಅರ್ಹವಾಗಿದೆ” ಎಂದಿರುವ ನ್ಯಾಯಾಧೀಶರು, ಪ್ರಕರಣವನ್ನು ರದ್ದುಗೊಳಿಸಿದ್ದಾರೆ.

“ಮೂರು ತಲೆಮಾರುಗಳ ಕಾಲ ನಡೆದ ಪ್ರಕರಣದ ವಿಚಾರಣೆಯನ್ನು ಮುಕ್ತಾಯಗೊಳಿಸಲು ಕ್ರಮ ತೆಗೆದುಕೊಂಡ ನ್ಯಾಯಾಧೀಶರಿಗೆ ಅಭಿನಂದನೆ ಸಲ್ಲಿಸಬೇಕು” ಎಂದು ಪ್ರತಿವಾದಿ ಪರ ವಕೀಲ ಅಮಿತ್ ಕುಮಾರ್ ಹೇಳಿದ್ದಾರೆ.

ಆದಾಗ್ಯೂ, ಮೊಕದ್ದಮೆ ಇನ್ನೂ ಸಂಪೂರ್ಣವಾಗಿ ಮುಕ್ತಾಯಗೊಂಡಿಲ್ಲ. ಏಕೆಂದರೆ ವಾದಿಗಳು ಉನ್ನತ ನ್ಯಾಯಾಲಯಗಳಲ್ಲಿ ಮೇಲ್ಮನವಿ ಸಲ್ಲಿಸಬಹುದು ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...