ಉದ್ಯಮಿ ರತನ್ ಟಾಟಾ ಕೊನೆಯ ಪೋಸ್ಟ್ ವೈರಲ್; ಏನಿದೆ ಪೋಸ್ಟ್‌ನಲ್ಲಿ?

Date:

ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಟಾಟಾ ಗ್ರೂಪ್‌ನ ಮಾಜಿ ಅಧ್ಯಕ್ಷ, ಉದ್ಯಮಿ ರತನ್ ಟಾಟಾ ಅವರು ನಿಧನರಾಗಿದ್ದಾರೆ. ಇದೀಗ ಅವರ ಕೊನೆಯ ಪೋಸ್ಟ್ ವೈರಲ್ ಆಗುತ್ತಿದೆ.

ಎರಡು ದಶಕಗಳಿಗೂ ಹೆಚ್ಚು ಕಾಲ ಸಾಲ್ಟ್ ಟು ಸಾಫ್ಟ್‌ವೇರ್ ಗ್ರೂಪ್‌ನ ಅಧ್ಯಕ್ಷರಾಗಿದ್ದ ಟಾಟಾ ಅವರು ಬುಧವಾರ ರಾತ್ರಿ 11.30ಕ್ಕೆ ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇದನ್ನು ಓದಿದ್ದೀರಾ? ಖ್ಯಾತ ಉದ್ಯಮಿ ರತನ್‌ ಟಾಟಾ ನಿಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡು ದಿನಗಳ ಹಿಂದಷ್ಟೇ ಉದ್ಯಮಿಯ ಆರೋಗ್ಯದ ಬಗ್ಗೆ ವದಂತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಡಿತ್ತು. ಈ ಬಗ್ಗೆ ರತನ್ ಟಾಟಾ ಅವರು ಪೋಸ್ಟ್ ಮೂಲಕ ಸ್ಪಷ್ಟನೆ ನೀಡಿದ್ದರು. ಸದ್ಯ ಈ ಪೋಸ್ಟ್ ವೈರಲ್ ಆಗುತ್ತಿದೆ.

ರತನ್ ಟಾಟಾ ಕೊನೆಯ ಪೋಸ್ಟ್‌ನಲ್ಲೇನಿದೆ?

“ನನ್ನ ಆರೋಗ್ಯದ ಬಗ್ಗೆ ಹರಡುತ್ತಿರುವ ಇತ್ತೀಚಿನ ವದಂತಿಗಳ ಬಗ್ಗೆ ನನಗೆ ತಿಳಿದಿದೆ. ಈ ಸುದ್ದಿಗಳು ಆಧಾರರಹಿತವಾಗಿವೆ ಎಂದು ಎಲ್ಲರಿಗೂ ತಿಳಿಸಲು ನಾನು ಬಯಸುತ್ತೇನೆ. ನನ್ನ ವಯೋಸಹಜ ಸಮಸ್ಯೆಗಳಿಂದಾಗಿ, ಸಂಬಂಧಿತ ವೈದ್ಯಕೀಯ ತಪಾಸಣೆಗೆ ನಾನು ಒಳಗಾಗುತ್ತಿದ್ದೇನೆ. ನಾನು ಉತ್ತಮ ಉತ್ಸಾಹದಲ್ಲಿ ಇರುತ್ತೇನೆ” ಎಂದು ಟಾಟಾ ತಮ್ಮ ಕೊನೆಯ ಪೋಸ್ಟ್‌ನಲ್ಲಿ ಹೇಳಿದ್ದರು.

ಜೊತೆಗೆ “ಸಾಮಾಜಿಕ ಮಾಧ್ಯಮಗಳು ಮತ್ತು ಜನರು ತಪ್ಪು ಮಾಹಿತಿಯನ್ನು ಹರಡದಂತೆ ವಿನಂತಿಸುತ್ತೇನೆ” ಎಂದು ಟಾಟಾ ತಿಳಿಸಿದ್ದರು.

ಇದನ್ನು ಓದಿದ್ದೀರಾ? ರತನ್ ಟಾಟಾ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಉದ್ಯಮಿ ಸ್ಪಷ್ಟನೆ

ಜೊತೆಗೆ ಇನ್‌ಸ್ಟಾಗ್ರಾಂನಲ್ಲಿ ರತನ್ ಟಾಟಾ ಅವರು ಮಾಡಿರುವ ಪೋಸ್ಟ್ ಕೂಡಾ ವೈರಲ್ ಆಗಿದೆ. ಇನ್‌ಸ್ಟಾಗ್ರಾಂನಲ್ಲಿ ತುರ್ತು ರಕ್ತ ಅಗತ್ಯವಿರುವ ನಾಯಿಯೊಂದಕ್ಕೆ ಸಹಾಯ ಮಾಡುವಂತೆ ಅವರು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ಟಾಟಾ ಅವರು ನಾಯಿಯ ಸ್ಥಿತಿಯ ಬಗ್ಗೆ ನಿರ್ದಿಷ್ಟ ವಿವರಗಳನ್ನು ಹಂಚಿಕೊಂಡಿದ್ದರು. ಸಹಾಯ ಮಾಡಲು ಮುಂಬೈನ ಜನರನ್ನು ತುರ್ತಾಗಿ ಕರೆದಿದ್ದರು.

“ನಿಮ್ಮ ಸಹಾಯವನ್ನು ನಾನು ನಿಜವಾಗಿಯೂ ಪ್ರಶಂಸಿಸುತ್ತೇನೆ. ನಮ್ಮ 7 ತಿಂಗಳು ವಯಸ್ಸಿನ ನಾಯಿಗೆ ತುರ್ತು ರಕ್ತ ವರ್ಗಾವಣೆಯ ಅಗತ್ಯವಿದೆ. ಜ್ವರ ಮತ್ತು ರಕ್ತಹೀನತೆಯಿಂದಾಗಿ ಅವರನ್ನು ದಾಖಲಿಸಲಾಗಿದೆ. ನಮಗೆ ತುರ್ತಾಗಿ ಮುಂಬೈನಲ್ಲಿ ನಾಯಿಗೆ ರಕ್ತದಾನ ಮಾಡುವವರ ಅಗತ್ಯವಿದೆ” ಎಂದು ತಿಳಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...