ಕಲ್ಲೀಕೋಟೆ ವಿವಿ ಪರೀಕ್ಷೆಯಲ್ಲಿ ಕಳೆದ ವರ್ಷದ ಪ್ರಶ್ನೆ ಪತ್ರಿಕೆಯೇ ಮತ್ತೆ ಪ್ರತ್ಯಕ್ಷ!

Date:

ಕೇರಳದ ಕಲ್ಲೀಕೋಟೆ ವಿಶ್ವವಿದ್ಯಾಲಯದಲ್ಲಿ ನಡೆದ ಮಲ್ಟಿ ಡಿಸಿಪ್ಲಿನರಿ ಕೋರ್ಸ್ (ಎಂಡಿಸಿ) ಪದವಿಯ ಸೆಮಿಸ್ಟರ್‌ ಪರೀಕ್ಷೆಯಲ್ಲಿ ಕಳೆದ ವರ್ಷ ಬಳಸಲಾಗಿದ್ದ ಪ್ರಶ್ನೆ ಪತ್ರಿಕೆಯನ್ನೇ ಪುನರಾವರ್ತನೆಯಾಗಿ ಬಳಸಲಾಗಿದೆ ಎಂದು ಆರೋಪಿಸಲಾಗಿದೆ. ಇದು ಪರೀಕ್ಷೆಯ ವಿಶ್ವಾಸಾರ್ಹತೆ ಕುರಿತು ವಿದ್ಯಾರ್ಥಿ ಮತ್ತು ಬೋಧಕ ವಲಯದಲ್ಲಿ ತೀವ್ರ ಚರ್ಚೆಗೊಳಗಾಗಿದೆ.

ನವೆಂಬರ್ 25ರಂದು ಎಂಡಿಸಿ ಸೈಕಾಲಜಿಯ ಮೊದಲ ಸೆಮಿಸ್ಟರ್‌ನ ‘ಆರ್ಟ್ ಆಫ್ ಸ್ಟ್ರೆಸ್ ಮ್ಯಾನೇಜ್‌ಮೆಂಟ್’ ಪರೀಕ್ಷೆ ನಡೆದಿದೆ. ಈ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಪ್ರಶ್ನೆ ಪತ್ರಿಕೆಯಲ್ಲಿ ಕಳೆದ ವರ್ಷದ ಪರೀಕ್ಷೆಯಲ್ಲಿ ನೀಡಲಾಗಿದ್ದ ಪಶ್ನೆಗಳೇ ಯಥಾಪ್ರಕಾರ ಇದ್ದವೆಂದು ಹೇಳಲಾಗಿದೆ. ಕಳೆದ ವರ್ಷದ ಪ್ರಶ್ನೆಗಳನ್ನೇ ಮತ್ತೆ ನೀಡಲಾಗಿದೆ ಎಂದು ಪರೀಕ್ಷಾ ನಿಯಂತ್ರಣ ಕಚೇರಿ ದೃಢಪಡಿಸಿದೆ.

ಘಟನೆಯು ಬೆಳಕಿಗೆ ಬಂದ ಬಳಿಕ, ಹೊಸ ಪರೀಕ್ಷೆ ನಡೆಸಬೇಕೇ ಅಥವಾ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬ ಕುರಿತು ಅಧ್ಯಯನ ಮಂಡಳಿ ನಿರ್ಧಾರ ಕೈಗೊಳ್ಳಲಿದೆ ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವ ವೇಳೆ ಶಿಕ್ಷಕರು ಸಾಮಾನ್ಯವಾಗಿ ಮೂರು ಸೆಟ್‌ಗಳನ್ನು ಸಲ್ಲಿಸುತ್ತಾರೆ. ಆದರೆ ಈ ಬಾರಿ ಸಲ್ಲಿಸಲಾದ ಸೆಟ್‌ಗಳಲ್ಲಿ ಒಂದು ಕಳೆದ ವರ್ಷದ ನಕಲು ಆಗಿದ್ದು, ಕ್ರಾಸ್-ಚೆಕಿಂಗ್ ಪ್ರಕ್ರಿಯೆಯಲ್ಲಿ ಇದು ಪತ್ತೆಯಾಗದೇ ಉಳಿದಿದೆ ಎಂದು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...